ಕ್ರೀಡೆ

ಎಲ್‌ಪಿಎಲ್‌ 2023: ಬಿ-ಲವ್ ಕ್ಯಾಂಡಿ ತಂಡ ಚಾಂಪಿಯನ್ಸ್

ಶ್ರೀಲಂಕಾ : ಲಂಕಾ ಪ್ರೀಮಿಯರ್ ಲೀಗ್​ನಲ್ಲಿ ಬಿ-ಲವ್ ಕ್ಯಾಂಡಿ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಕೊಲಂಬೊದ ಆರ್​. ಪ್ರೇಮದಾಸ ಮೈದಾನದಲ್ಲಿ ನಡೆದ ಫೈನಲ್ ಹಣಾಹಣಿಯಲ್ಲಿ ಡಂಬುಲ್ಲಾ ಔರಾ ಹಾಗೂ ಬಿ-ಲವ್ ಕ್ಯಾಂಡಿ ತಂಡಗಳು ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಟಾಸ್ ಗೆದ್ದ ಡಂಬುಲ್ಲಾ ಔರಾ ಮೊದಲು ಬ್ಯಾಟಿಂಗ್ ಮಾಡಿದ್ದರು.

ಆದರೆ ಡಂಬುಲ್ಲಾ ಔರಾ ತಂಡವು ನಿರೀಕ್ಷಿತ ಪಡೆದಿರಲಿಲ್ಲ. ಆರಂಭಿಕ ಆಟಗಾರ ಅವಿಷ್ಕಾ ಫರ್ನಾಂಡೊ 5 ರನ್​ಗಳಿಸಿ ವಿಕೆಟ್ ಒಪ್ಪಿಸಿದರೆ, ಕುಸಾಲ್ ಮೆಂಡಿಸ್ 22 ರನ್​ಗಳಿಸಲಷ್ಟೇ ಶಕ್ತರಾದರು. ಇನ್ನು ಮಧ್ಯಮ ಕ್ರಮಾಂಕದಲ್ಲಿ ಸಮರವಿಕ್ರಮ 30 ಎಸೆತಳನ್ನು ಎದುರಿಸಿ ಕಲೆಹಾಕಿದ್ದು ಕೇವಲ 36 ರನ್​ ಮಾತ್ರ. ಹಾಗೆಯೇ ಕುಸಾಲ್ ಪೆರೆರಾ 25 ಎಸೆತಗಳಲ್ಲಿ 31 ರನ್​ ಬಾರಿಸಿದರು.

ಇದಾಗ್ಯೂ ಅಂತಿಮ ಹಂತದಲ್ಲಿ ಅಬ್ಬರಿಸಿದ ಧನಂಜಯ ಡಿಸಿಲ್ವಾ 29 ಎಸೆತಗಳಲ್ಲಿ 40 ರನ್​ ಚಚ್ಚಿದರು. ಈ ಬಿರುಸಿನ ಬ್ಯಾಟಿಂಗ್ ನೆರವಿನಿಂದ ಡಂಬುಲ್ಲಾ ಔರಾ ತಂಡವು ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್ ನಷ್ಟಕ್ಕೆ 147 ರನ್​ ಕಲೆಹಾಕಿತು.

148 ರನ್​ಗಳ ಗುರಿ ಪಡೆದ ಬಿ-ಲವ್ ಕ್ಯಾಂಡಿ ತಂಡಕ್ಕೆ ಮೊಹಮ್ಮದ್ ಹ್ಯಾರಿಸ್ (26) ಹಾಗೂ ಕಾಮಿಂದು ಮೆಂಡಿಸ್ (44) ಉತ್ತಮ ಆರಂಭ ಒದಗಿಸಿದ್ದರು. ಆ ಬಳಿಕ ಬಂದ ದಿನೇಶ್ ಚಂಡಿಮಲ್ 24 ರನ್​ಗಳ ಕೊಡುಗೆ ನೀಡಿದರು.

ಆದರೆ ಮಧ್ಯಮ ಕ್ರಮಾಂಕದಲ್ಲಿ ಉಂಟಾದ ದಿಢೀರ್ ಕುಸಿತದಿಂದ ಒಂದು ಹಂತದಲ್ಲಿ ಡಂಬುಲ್ಲಾ ಔರ ಬೌಲರ್​ಗಳು ಮೇಲುಗೈ ಸಾಧಿಸಿದರು. ಈ ವೇಳೆ ತಮ್ಮ ಅನುಭವವನ್ನು ಧಾರೆಯೆರೆದ ಏಂಜೆಲೊ ಮ್ಯಾಥ್ಯೂಸ್ ಅಜೇಯ 25 ರನ್ ಬಾರಿಸುವ ಮೂಲಕ 19.5 ಓವರ್​ಗಳಲ್ಲಿ ತಂಡವನ್ನು ಗುರಿ ಮುಟ್ಟಿಸಿದರು. ಈ ಮೂಲಕ ಬಿ-ಲವ್ ಕ್ಯಾಂಡಿ ತಂಡವು 5 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದೆ.

ಪಂದ್ಯ ಶ್ರೇಷ್ಠ : ಆಂಜೆಲೋ ಮ್ಯಾಥ್ಯುಸ್‌.

ಸರಣಿ ಶ್ರೇಷ್ಠ : ವನಿಂದು ಹಸರಂಗ

andolanait

Recent Posts

ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಮೈಸೂರು: ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್ಸೊಂದು ಏಕಾಏಕಿ ಮುಂದೆ ಚಲಿಸುತ್ತಿದ್ದ ಮತ್ತೊಂದು ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿರುವ…

7 hours ago

ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರಾ ಮಹೋತ್ಸವ: ಮಹದೇಶ್ವರನಿಗೆ ಎಣ್ಣೆಮಜ್ಜನ ಸೇವೆ, ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ದ ಯಾತ್ರಾ ಸ್ಥಳವಾದ ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ…

10 hours ago

ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ನಂಜುಂಡೇಶ್ವರ ಸನ್ನಿಧಿಗೆ ಹರಿದು ಬಂದ ಭಕ್ತಸಾಗರ

ನಂಜನಗೂಡು: ಇಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಗೆ ಭಕ್ತಸಾಗರವೇ ಹರಿದುಬಂದಿದೆ. ಇಂದು ಬೆಳಿಗ್ಗೆಯಿಂದಲೂ ಸಾವಿರಾರು…

12 hours ago

ಸುಂಟಿಕೊಪ್ಪ: ನೂತನ ಪೊಲೀಸ್‌ ವಸತಿ ಗೃಹ ಉದ್ಘಾಟಿಸಿದ ಸಚಿವ ಪರಮೇಶ್ವರ್‌

ಸುಂಟಿಕೊಪ್ಪ: ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ನಿಯಮಿತದಿಂದ ಸುಂಟಿಕೊಪ್ಪದಲ್ಲಿ 3.64 ಕೋಟಿ ರೂ‌ ವೆಚ್ಚದಲ್ಲಿ…

12 hours ago

ನಂಜುಂಡೇಶ್ವರನ ದೇವಸ್ಥಾನದಲ್ಲಿ ಇನ್ಮುಂದೆ ದಿನ 24 ಗಂಟೆಯೂ ಪ್ರಸಾದ ವಿತರಣೆ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ ಇನ್ನು ಮುಂದೆ ದಿನದ 24 ಗಂಟೆಯೂ ಪ್ರಸಾದ ವಿತರಣೆ ಮಾಡಲಾಗುತ್ತದೆ. ಮಧ್ಯಾಹ್ನದ…

12 hours ago

ಗುಂಡಾಲ್ ಜಲಾಶಯದಲ್ಲಿ ಹುಲಿ ಮೃತ ದೇಹ ಪತ್ತೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ…

13 hours ago