ಶ್ರೀಲಂಕಾ : ಲಂಕಾ ಪ್ರೀಮಿಯರ್ ಲೀಗ್ನಲ್ಲಿ ಬಿ-ಲವ್ ಕ್ಯಾಂಡಿ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಕೊಲಂಬೊದ ಆರ್. ಪ್ರೇಮದಾಸ ಮೈದಾನದಲ್ಲಿ ನಡೆದ ಫೈನಲ್ ಹಣಾಹಣಿಯಲ್ಲಿ ಡಂಬುಲ್ಲಾ ಔರಾ ಹಾಗೂ ಬಿ-ಲವ್ ಕ್ಯಾಂಡಿ ತಂಡಗಳು ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಟಾಸ್ ಗೆದ್ದ ಡಂಬುಲ್ಲಾ ಔರಾ ಮೊದಲು ಬ್ಯಾಟಿಂಗ್ ಮಾಡಿದ್ದರು.
ಆದರೆ ಡಂಬುಲ್ಲಾ ಔರಾ ತಂಡವು ನಿರೀಕ್ಷಿತ ಪಡೆದಿರಲಿಲ್ಲ. ಆರಂಭಿಕ ಆಟಗಾರ ಅವಿಷ್ಕಾ ಫರ್ನಾಂಡೊ 5 ರನ್ಗಳಿಸಿ ವಿಕೆಟ್ ಒಪ್ಪಿಸಿದರೆ, ಕುಸಾಲ್ ಮೆಂಡಿಸ್ 22 ರನ್ಗಳಿಸಲಷ್ಟೇ ಶಕ್ತರಾದರು. ಇನ್ನು ಮಧ್ಯಮ ಕ್ರಮಾಂಕದಲ್ಲಿ ಸಮರವಿಕ್ರಮ 30 ಎಸೆತಳನ್ನು ಎದುರಿಸಿ ಕಲೆಹಾಕಿದ್ದು ಕೇವಲ 36 ರನ್ ಮಾತ್ರ. ಹಾಗೆಯೇ ಕುಸಾಲ್ ಪೆರೆರಾ 25 ಎಸೆತಗಳಲ್ಲಿ 31 ರನ್ ಬಾರಿಸಿದರು.
ಇದಾಗ್ಯೂ ಅಂತಿಮ ಹಂತದಲ್ಲಿ ಅಬ್ಬರಿಸಿದ ಧನಂಜಯ ಡಿಸಿಲ್ವಾ 29 ಎಸೆತಗಳಲ್ಲಿ 40 ರನ್ ಚಚ್ಚಿದರು. ಈ ಬಿರುಸಿನ ಬ್ಯಾಟಿಂಗ್ ನೆರವಿನಿಂದ ಡಂಬುಲ್ಲಾ ಔರಾ ತಂಡವು ನಿಗದಿತ 20 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 147 ರನ್ ಕಲೆಹಾಕಿತು.
148 ರನ್ಗಳ ಗುರಿ ಪಡೆದ ಬಿ-ಲವ್ ಕ್ಯಾಂಡಿ ತಂಡಕ್ಕೆ ಮೊಹಮ್ಮದ್ ಹ್ಯಾರಿಸ್ (26) ಹಾಗೂ ಕಾಮಿಂದು ಮೆಂಡಿಸ್ (44) ಉತ್ತಮ ಆರಂಭ ಒದಗಿಸಿದ್ದರು. ಆ ಬಳಿಕ ಬಂದ ದಿನೇಶ್ ಚಂಡಿಮಲ್ 24 ರನ್ಗಳ ಕೊಡುಗೆ ನೀಡಿದರು.
ಆದರೆ ಮಧ್ಯಮ ಕ್ರಮಾಂಕದಲ್ಲಿ ಉಂಟಾದ ದಿಢೀರ್ ಕುಸಿತದಿಂದ ಒಂದು ಹಂತದಲ್ಲಿ ಡಂಬುಲ್ಲಾ ಔರ ಬೌಲರ್ಗಳು ಮೇಲುಗೈ ಸಾಧಿಸಿದರು. ಈ ವೇಳೆ ತಮ್ಮ ಅನುಭವವನ್ನು ಧಾರೆಯೆರೆದ ಏಂಜೆಲೊ ಮ್ಯಾಥ್ಯೂಸ್ ಅಜೇಯ 25 ರನ್ ಬಾರಿಸುವ ಮೂಲಕ 19.5 ಓವರ್ಗಳಲ್ಲಿ ತಂಡವನ್ನು ಗುರಿ ಮುಟ್ಟಿಸಿದರು. ಈ ಮೂಲಕ ಬಿ-ಲವ್ ಕ್ಯಾಂಡಿ ತಂಡವು 5 ವಿಕೆಟ್ಗಳ ಭರ್ಜರಿ ಜಯ ಸಾಧಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದೆ.
ಪಂದ್ಯ ಶ್ರೇಷ್ಠ : ಆಂಜೆಲೋ ಮ್ಯಾಥ್ಯುಸ್.
ಸರಣಿ ಶ್ರೇಷ್ಠ : ವನಿಂದು ಹಸರಂಗ
ಚಾಮರಾಜನಗರ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟವರ ಕುಟುಂಬದ ಸದಸ್ಯರಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಸರ್ಕಾರಿ ಉದ್ಯೋಗ ಪತ್ರ ನೀಡಲಾಗಿದೆ. ೨೦೨೩ರಲ್ಲಿ ಕಾಂಗ್ರೆಸ್ ನಾಯಕ…
‘ಆಂದೋಲನ’ ದಿನ ಪತ್ರಿಕೆಯ ಏ.೧೯ರ ‘ಹಾಡು ಪಾಡು’ ಸಂಚಿಕೆಯಲ್ಲಿ ‘ಪಂಪ ಪ್ರಶಸ್ತಿ’ ಸಂದ ಹಿನ್ನೆಲೆಯಲ್ಲಿ ದೇವನೂರ ಮಹಾದೇವ ಅವರ ಬಗ್ಗೆ…
ಮೈಸೂರಿನ ಹಾರ್ಡಿಂಜ್ ವೃತ್ತದ ಮೂಲಕ ಮೈಸೂರಿನಿಂದ- ಚಾಮರಾಜ ನಗರ, ಗುಂಡ್ಲುಪೇಟೆ, ಹಾಸನ, ಮಂಗಳೂರು, ಮಡಿಕೇರಿ, ಚಿಕ್ಕಮಗಳೂರು, ಹಾಗೂ ಇನ್ನಿತರ ಸ್ಥಳಗಳ…
ಪ್ರೊ.ಬಿ.ಜಯಪ್ರಕಾಶ್ಗೌಡ ಡಾ.ರಾಮೇಗೌಡ, ದಿ.ಸಿಂಗಾರಿಗೌಡ ಹೆಸರಲ್ಲಿ ಗೌರವ ವಿಮರ್ಶಕ, ಜಾನಪದ ತಜ್ಞ ಡಾ.ರಾಮೇಗೌಡ ಮತ್ತು ಸರಳ ಸಜ್ಜನ ರಾಜಕಾರಣಿ ದಿ. ಸಿಂಗಾರಿಗೌಡ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಏಪ್ರಿಲ್ ೧೨, ೨೦೦೬. ಶಿವರಾಜಕುಮಾರ್ ಅಭಿನಯದ ‘ಕುಮಾರ ರಾಮ; ಚಿತ್ರದ ಚಿತ್ರೀಕರಣ. ಭಾರ್ಗವ ನಿರ್ದೇಶಕರು. ಹಂಪಿಯಲ್ಲಿ…
ನವೀನ್ ಡಿಸೋಜ ಮಡಿಕೇರಿ: ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಕಳೆದ ಬಾರಿ ನಾಲ್ಕನೇ ಸ್ಥಾನದಲ್ಲಿದ್ದ ಕೊಡಗು ಈ ಬಾರಿ ೮ನೇ…