ಶ್ರೀಲಂಕಾ : ಲಂಕಾ ಪ್ರೀಮಿಯರ್ ಲೀಗ್ನಲ್ಲಿ ಬಿ-ಲವ್ ಕ್ಯಾಂಡಿ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಕೊಲಂಬೊದ ಆರ್. ಪ್ರೇಮದಾಸ ಮೈದಾನದಲ್ಲಿ ನಡೆದ ಫೈನಲ್ ಹಣಾಹಣಿಯಲ್ಲಿ ಡಂಬುಲ್ಲಾ ಔರಾ ಹಾಗೂ ಬಿ-ಲವ್ ಕ್ಯಾಂಡಿ ತಂಡಗಳು ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಟಾಸ್ ಗೆದ್ದ ಡಂಬುಲ್ಲಾ ಔರಾ ಮೊದಲು ಬ್ಯಾಟಿಂಗ್ ಮಾಡಿದ್ದರು.
ಆದರೆ ಡಂಬುಲ್ಲಾ ಔರಾ ತಂಡವು ನಿರೀಕ್ಷಿತ ಪಡೆದಿರಲಿಲ್ಲ. ಆರಂಭಿಕ ಆಟಗಾರ ಅವಿಷ್ಕಾ ಫರ್ನಾಂಡೊ 5 ರನ್ಗಳಿಸಿ ವಿಕೆಟ್ ಒಪ್ಪಿಸಿದರೆ, ಕುಸಾಲ್ ಮೆಂಡಿಸ್ 22 ರನ್ಗಳಿಸಲಷ್ಟೇ ಶಕ್ತರಾದರು. ಇನ್ನು ಮಧ್ಯಮ ಕ್ರಮಾಂಕದಲ್ಲಿ ಸಮರವಿಕ್ರಮ 30 ಎಸೆತಳನ್ನು ಎದುರಿಸಿ ಕಲೆಹಾಕಿದ್ದು ಕೇವಲ 36 ರನ್ ಮಾತ್ರ. ಹಾಗೆಯೇ ಕುಸಾಲ್ ಪೆರೆರಾ 25 ಎಸೆತಗಳಲ್ಲಿ 31 ರನ್ ಬಾರಿಸಿದರು.
ಇದಾಗ್ಯೂ ಅಂತಿಮ ಹಂತದಲ್ಲಿ ಅಬ್ಬರಿಸಿದ ಧನಂಜಯ ಡಿಸಿಲ್ವಾ 29 ಎಸೆತಗಳಲ್ಲಿ 40 ರನ್ ಚಚ್ಚಿದರು. ಈ ಬಿರುಸಿನ ಬ್ಯಾಟಿಂಗ್ ನೆರವಿನಿಂದ ಡಂಬುಲ್ಲಾ ಔರಾ ತಂಡವು ನಿಗದಿತ 20 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 147 ರನ್ ಕಲೆಹಾಕಿತು.
148 ರನ್ಗಳ ಗುರಿ ಪಡೆದ ಬಿ-ಲವ್ ಕ್ಯಾಂಡಿ ತಂಡಕ್ಕೆ ಮೊಹಮ್ಮದ್ ಹ್ಯಾರಿಸ್ (26) ಹಾಗೂ ಕಾಮಿಂದು ಮೆಂಡಿಸ್ (44) ಉತ್ತಮ ಆರಂಭ ಒದಗಿಸಿದ್ದರು. ಆ ಬಳಿಕ ಬಂದ ದಿನೇಶ್ ಚಂಡಿಮಲ್ 24 ರನ್ಗಳ ಕೊಡುಗೆ ನೀಡಿದರು.
ಆದರೆ ಮಧ್ಯಮ ಕ್ರಮಾಂಕದಲ್ಲಿ ಉಂಟಾದ ದಿಢೀರ್ ಕುಸಿತದಿಂದ ಒಂದು ಹಂತದಲ್ಲಿ ಡಂಬುಲ್ಲಾ ಔರ ಬೌಲರ್ಗಳು ಮೇಲುಗೈ ಸಾಧಿಸಿದರು. ಈ ವೇಳೆ ತಮ್ಮ ಅನುಭವವನ್ನು ಧಾರೆಯೆರೆದ ಏಂಜೆಲೊ ಮ್ಯಾಥ್ಯೂಸ್ ಅಜೇಯ 25 ರನ್ ಬಾರಿಸುವ ಮೂಲಕ 19.5 ಓವರ್ಗಳಲ್ಲಿ ತಂಡವನ್ನು ಗುರಿ ಮುಟ್ಟಿಸಿದರು. ಈ ಮೂಲಕ ಬಿ-ಲವ್ ಕ್ಯಾಂಡಿ ತಂಡವು 5 ವಿಕೆಟ್ಗಳ ಭರ್ಜರಿ ಜಯ ಸಾಧಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದೆ.
ಪಂದ್ಯ ಶ್ರೇಷ್ಠ : ಆಂಜೆಲೋ ಮ್ಯಾಥ್ಯುಸ್.
ಸರಣಿ ಶ್ರೇಷ್ಠ : ವನಿಂದು ಹಸರಂಗ
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…