ಕ್ರೀಡೆ

ಎಲ್‌ಪಿಎಲ್‌ 2023: ಬಿ-ಲವ್ ಕ್ಯಾಂಡಿ ತಂಡ ಚಾಂಪಿಯನ್ಸ್

ಶ್ರೀಲಂಕಾ : ಲಂಕಾ ಪ್ರೀಮಿಯರ್ ಲೀಗ್​ನಲ್ಲಿ ಬಿ-ಲವ್ ಕ್ಯಾಂಡಿ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಕೊಲಂಬೊದ ಆರ್​. ಪ್ರೇಮದಾಸ ಮೈದಾನದಲ್ಲಿ ನಡೆದ ಫೈನಲ್ ಹಣಾಹಣಿಯಲ್ಲಿ ಡಂಬುಲ್ಲಾ ಔರಾ ಹಾಗೂ ಬಿ-ಲವ್ ಕ್ಯಾಂಡಿ ತಂಡಗಳು ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಟಾಸ್ ಗೆದ್ದ ಡಂಬುಲ್ಲಾ ಔರಾ ಮೊದಲು ಬ್ಯಾಟಿಂಗ್ ಮಾಡಿದ್ದರು.

ಆದರೆ ಡಂಬುಲ್ಲಾ ಔರಾ ತಂಡವು ನಿರೀಕ್ಷಿತ ಪಡೆದಿರಲಿಲ್ಲ. ಆರಂಭಿಕ ಆಟಗಾರ ಅವಿಷ್ಕಾ ಫರ್ನಾಂಡೊ 5 ರನ್​ಗಳಿಸಿ ವಿಕೆಟ್ ಒಪ್ಪಿಸಿದರೆ, ಕುಸಾಲ್ ಮೆಂಡಿಸ್ 22 ರನ್​ಗಳಿಸಲಷ್ಟೇ ಶಕ್ತರಾದರು. ಇನ್ನು ಮಧ್ಯಮ ಕ್ರಮಾಂಕದಲ್ಲಿ ಸಮರವಿಕ್ರಮ 30 ಎಸೆತಳನ್ನು ಎದುರಿಸಿ ಕಲೆಹಾಕಿದ್ದು ಕೇವಲ 36 ರನ್​ ಮಾತ್ರ. ಹಾಗೆಯೇ ಕುಸಾಲ್ ಪೆರೆರಾ 25 ಎಸೆತಗಳಲ್ಲಿ 31 ರನ್​ ಬಾರಿಸಿದರು.

ಇದಾಗ್ಯೂ ಅಂತಿಮ ಹಂತದಲ್ಲಿ ಅಬ್ಬರಿಸಿದ ಧನಂಜಯ ಡಿಸಿಲ್ವಾ 29 ಎಸೆತಗಳಲ್ಲಿ 40 ರನ್​ ಚಚ್ಚಿದರು. ಈ ಬಿರುಸಿನ ಬ್ಯಾಟಿಂಗ್ ನೆರವಿನಿಂದ ಡಂಬುಲ್ಲಾ ಔರಾ ತಂಡವು ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್ ನಷ್ಟಕ್ಕೆ 147 ರನ್​ ಕಲೆಹಾಕಿತು.

148 ರನ್​ಗಳ ಗುರಿ ಪಡೆದ ಬಿ-ಲವ್ ಕ್ಯಾಂಡಿ ತಂಡಕ್ಕೆ ಮೊಹಮ್ಮದ್ ಹ್ಯಾರಿಸ್ (26) ಹಾಗೂ ಕಾಮಿಂದು ಮೆಂಡಿಸ್ (44) ಉತ್ತಮ ಆರಂಭ ಒದಗಿಸಿದ್ದರು. ಆ ಬಳಿಕ ಬಂದ ದಿನೇಶ್ ಚಂಡಿಮಲ್ 24 ರನ್​ಗಳ ಕೊಡುಗೆ ನೀಡಿದರು.

ಆದರೆ ಮಧ್ಯಮ ಕ್ರಮಾಂಕದಲ್ಲಿ ಉಂಟಾದ ದಿಢೀರ್ ಕುಸಿತದಿಂದ ಒಂದು ಹಂತದಲ್ಲಿ ಡಂಬುಲ್ಲಾ ಔರ ಬೌಲರ್​ಗಳು ಮೇಲುಗೈ ಸಾಧಿಸಿದರು. ಈ ವೇಳೆ ತಮ್ಮ ಅನುಭವವನ್ನು ಧಾರೆಯೆರೆದ ಏಂಜೆಲೊ ಮ್ಯಾಥ್ಯೂಸ್ ಅಜೇಯ 25 ರನ್ ಬಾರಿಸುವ ಮೂಲಕ 19.5 ಓವರ್​ಗಳಲ್ಲಿ ತಂಡವನ್ನು ಗುರಿ ಮುಟ್ಟಿಸಿದರು. ಈ ಮೂಲಕ ಬಿ-ಲವ್ ಕ್ಯಾಂಡಿ ತಂಡವು 5 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದೆ.

ಪಂದ್ಯ ಶ್ರೇಷ್ಠ : ಆಂಜೆಲೋ ಮ್ಯಾಥ್ಯುಸ್‌.

ಸರಣಿ ಶ್ರೇಷ್ಠ : ವನಿಂದು ಹಸರಂಗ

andolanait

Recent Posts

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

3 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

7 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

7 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

7 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

10 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

10 hours ago