ಶ್ರೀಲಂಕಾ : ಲಂಕಾ ಪ್ರೀಮಿಯರ್ ಲೀಗ್ನಲ್ಲಿ ಬಿ-ಲವ್ ಕ್ಯಾಂಡಿ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಕೊಲಂಬೊದ ಆರ್. ಪ್ರೇಮದಾಸ ಮೈದಾನದಲ್ಲಿ ನಡೆದ ಫೈನಲ್ ಹಣಾಹಣಿಯಲ್ಲಿ ಡಂಬುಲ್ಲಾ ಔರಾ ಹಾಗೂ ಬಿ-ಲವ್ ಕ್ಯಾಂಡಿ ತಂಡಗಳು ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಟಾಸ್ ಗೆದ್ದ ಡಂಬುಲ್ಲಾ ಔರಾ ಮೊದಲು ಬ್ಯಾಟಿಂಗ್ ಮಾಡಿದ್ದರು.
ಆದರೆ ಡಂಬುಲ್ಲಾ ಔರಾ ತಂಡವು ನಿರೀಕ್ಷಿತ ಪಡೆದಿರಲಿಲ್ಲ. ಆರಂಭಿಕ ಆಟಗಾರ ಅವಿಷ್ಕಾ ಫರ್ನಾಂಡೊ 5 ರನ್ಗಳಿಸಿ ವಿಕೆಟ್ ಒಪ್ಪಿಸಿದರೆ, ಕುಸಾಲ್ ಮೆಂಡಿಸ್ 22 ರನ್ಗಳಿಸಲಷ್ಟೇ ಶಕ್ತರಾದರು. ಇನ್ನು ಮಧ್ಯಮ ಕ್ರಮಾಂಕದಲ್ಲಿ ಸಮರವಿಕ್ರಮ 30 ಎಸೆತಳನ್ನು ಎದುರಿಸಿ ಕಲೆಹಾಕಿದ್ದು ಕೇವಲ 36 ರನ್ ಮಾತ್ರ. ಹಾಗೆಯೇ ಕುಸಾಲ್ ಪೆರೆರಾ 25 ಎಸೆತಗಳಲ್ಲಿ 31 ರನ್ ಬಾರಿಸಿದರು.
ಇದಾಗ್ಯೂ ಅಂತಿಮ ಹಂತದಲ್ಲಿ ಅಬ್ಬರಿಸಿದ ಧನಂಜಯ ಡಿಸಿಲ್ವಾ 29 ಎಸೆತಗಳಲ್ಲಿ 40 ರನ್ ಚಚ್ಚಿದರು. ಈ ಬಿರುಸಿನ ಬ್ಯಾಟಿಂಗ್ ನೆರವಿನಿಂದ ಡಂಬುಲ್ಲಾ ಔರಾ ತಂಡವು ನಿಗದಿತ 20 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 147 ರನ್ ಕಲೆಹಾಕಿತು.
148 ರನ್ಗಳ ಗುರಿ ಪಡೆದ ಬಿ-ಲವ್ ಕ್ಯಾಂಡಿ ತಂಡಕ್ಕೆ ಮೊಹಮ್ಮದ್ ಹ್ಯಾರಿಸ್ (26) ಹಾಗೂ ಕಾಮಿಂದು ಮೆಂಡಿಸ್ (44) ಉತ್ತಮ ಆರಂಭ ಒದಗಿಸಿದ್ದರು. ಆ ಬಳಿಕ ಬಂದ ದಿನೇಶ್ ಚಂಡಿಮಲ್ 24 ರನ್ಗಳ ಕೊಡುಗೆ ನೀಡಿದರು.
ಆದರೆ ಮಧ್ಯಮ ಕ್ರಮಾಂಕದಲ್ಲಿ ಉಂಟಾದ ದಿಢೀರ್ ಕುಸಿತದಿಂದ ಒಂದು ಹಂತದಲ್ಲಿ ಡಂಬುಲ್ಲಾ ಔರ ಬೌಲರ್ಗಳು ಮೇಲುಗೈ ಸಾಧಿಸಿದರು. ಈ ವೇಳೆ ತಮ್ಮ ಅನುಭವವನ್ನು ಧಾರೆಯೆರೆದ ಏಂಜೆಲೊ ಮ್ಯಾಥ್ಯೂಸ್ ಅಜೇಯ 25 ರನ್ ಬಾರಿಸುವ ಮೂಲಕ 19.5 ಓವರ್ಗಳಲ್ಲಿ ತಂಡವನ್ನು ಗುರಿ ಮುಟ್ಟಿಸಿದರು. ಈ ಮೂಲಕ ಬಿ-ಲವ್ ಕ್ಯಾಂಡಿ ತಂಡವು 5 ವಿಕೆಟ್ಗಳ ಭರ್ಜರಿ ಜಯ ಸಾಧಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದೆ.
ಪಂದ್ಯ ಶ್ರೇಷ್ಠ : ಆಂಜೆಲೋ ಮ್ಯಾಥ್ಯುಸ್.
ಸರಣಿ ಶ್ರೇಷ್ಠ : ವನಿಂದು ಹಸರಂಗ
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…