ಕ್ರೀಡೆ

ಎಸ್‌ಅರ್‌ಎಚ್‌ ವಿರುದ್ಧ ಲಖನೌಗೆ ಹೀನಾಯ ಸೋಲು: ರಾಹುಲ್‌ ವಿರುದ್ಧ ಗರಂ ಆದ ಸಂಜೀವ್‌

ಹೈದರಾಬಾದ್‌: ಇಲ್ಲಿನ ರಾಜೀವ್‌ ಗಾಂಧಿ ಅಂತರಾಷ್ಟ್ರೀಯ ಮೈದಾನದಲ್ಲಿ ನಡೆದ ಐಪಿಎಲ್‌ ಪಂದ್ಯದಲ್ಲಿ ಎಸ್‌ಅರ್‌ಎಚ್‌ ವಿರುದ್ಧ ಲಖನೌಗೆ ಹೀನಾಯ ಸೋಲು ಕಂಡಿತು. ಇದು ಐಪಿಎಲ್‌ ಇತಿಹಾಸದಲ್ಲೇ ಅತೀ ಕಡಿಮೆ ಓವರ್‌ನಲ್ಲಿ ಬೃಹತ್‌ ಮೊತ್ತ ಒಂದನ್ನು ಚೇಸ್‌ ಮಾಡಿದ್ದು ಇದೇ ಮೊದಲು.

ಈ ಹೀನಾಯ ಸೋಲು ಕಂಡ ಲಖನೌ ಸೂಪರ್‌ ಜೈಂಟ್ಸ್‌ ಮಾಲೀಕ ಸಂಜೀವ್‌ ಗೋಯಂಕಾ ತಂಡದ ಪ್ರದರ್ಶನದಿಂದ ಬೇಸರಗೊಂಡಿದ್ದಾರೆ. ಮತ್ತು ನಾಯಕ ಕೆ.ಎಲ್‌ ರಾಹುಲ್‌ ಜತೆ ಕೋಪದಿಂದ ವರ್ತಿಸುತ್ತಿರುವುದು ಕಂಡು ಬಂದಿದೆ.

ಪಂದ್ಯ ಮುಗಿದ ಬಳಿಕ ತಂಡದ ನೀರಸ ಪ್ರದರ್ಶನಕ್ಕೆ ಸಿಟ್ಟಾದ ಮಾಲೀಕ ಗೋಯಂಕಾ ಡಗ್‌ಔಟ್‌ನಲ್ಲಿ ನಾಯಕ ರಾಹುಲ್‌ ಜತೆ ಕೋಪದಿಂದಲೇ ಮಾತನಾಡುತ್ತಿರುವುದು ಕಂಡುಬಂದಿದೆ. ಆದರೆ, ಅವರಿಬ್ಬರು ಸಂಭಾಷಣೆ ಏನು ಎಂಬುದರ ಯಾರಿಗೂ ಸ್ಪಷ್ಟತೆ ಸಿಕ್ಕಿಲ್ಲ. ಇನ್ನು ಈ ಇಬ್ಬರ ನಡುವಣ ಮಾತಿನ ಚಕಮಕಿ ವೀಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ಸಖತ್‌ ವೈರಲ್‌ ಆಗಿದ್ದು, ಇದನ್ನು ನೋಡಿರುವ ನೆಟ್ಟಿಗರು ಈ ಇಬ್ಬರ ನಡುವೆ ಜಗಳ ಆಗಿದೆ ಎಂದು ಹೇಳುತ್ತಿದ್ದಾರೆ.

ಅಸಲಿಗೆ ಸಂಜೀವ್‌ ಹಾಗೂ ರಾಹುಲ್‌ ನಡುವಿನ ಮಾತುಕತೆ ಅಸಲಿಯತ್ತೇನು ಎಂಬುದು ಇನ್ನಷ್ಟೇ ತಿಳಿಯಬೇಕಿದೆ.

ಇನ್ನು ಈ ಪಂದ್ಯದಲ್ಲಿ ಲಖನೌ 20 ಓವರ್‌ಗಳಲ್ಲಿ 4 ವಿಕೆಟ್‌ ಕಳೆದುಕೊಂಡು 166 ರನ್‌ ಗಳಿಸಿದರೇ, ತಮ್ಮ ತವರಿನಂಗಳದಲ್ಲಿ  ಚೇಸ್‌ ಮಾಡಿದ ಎಸ್‌ಆರ್‌ಎಚ್‌ ಕೇವಲ 9.4 ಓವರ್‌ಗಳಲ್ಲಿ ಯಾವುದೇ ವಿಕೆಟ್‌ ನಷ್ಟವಿಲ್ಲದೇ 167 ರನ್‌ ಚಚ್ಚಿದರು. ಇದು ಐಪಿಎಲ್‌ ಇತಿಹಾಸದೇ ಇಷ್ಟೊಂದು ರನ್‌ನ್ನು ಕಡಿಮೆ ಓವರ್‌ನಲ್ಲಿ ಚೇಸ್‌ ಮಾಡಿದ್ದು ಇದೇ ಮೊದಲಾಗಿತ್ತು.

https://x.com/LucknowIPLCover/status/1788261055262572978

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ:  ನಂಜನಗೂಡಿನ ಪ್ರಮುಖ ವೃತ್ತಕ್ಕೆ ಬಿ.ವಿ.ಪಂಡಿತರ ಹೆಸರಿಡಿ

ನಂಜನಗೂಡಿನ ಸದ್ವೈದ್ಯ ಶಾಲಾ ಸಂಸ್ಥಾಪಕರಾಗಿದ್ದ ಬಿ.ವಿ.ಪಂಡಿತರು ಆಯುರ್ವೇದ ಉತ್ಪನ್ನಗಳನ್ನು ರೂಪಿಸಿದ ಹಿರಿಮೆ ಹೊಂದಿದ್ದಾರೆ. ದಂತಧಾವನ ಚೂರ್ಣ (ನಂಜನಗೂಡು ಹಲ್ಲು ಪುಡಿ)…

7 mins ago

ಓದುಗರ ಪತ್ರ:  ಭೈರಪ್ಪ ಸ್ಮಾರಕ, ತಿಮ್ಮಕ್ಕ ವಸ್ತು ಸಂಗ್ರಹಾಲಯ ಸ್ವಾಗತಾರ್ಹ

ಮೈಸೂರಿನಲ್ಲಿ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕ ನಿರ್ಮಾಣ ಹಾಗೂ ಬೇಲೂರಿನಲ್ಲಿ ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಅವರ ವಸ್ತು ಸಂಗ್ರಹಾಲಯ…

13 mins ago

ಓದುಗರ ಪತ್ರ:  ಗೋಪಾಲಸ್ವಾಮಿ ಬೆಟ್ಟದ ಬಸ್ ಪ್ರಯಾಣ ದರ ಇಳಿಕೆ ಮಾಡಿ

ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ಇತಿಹಾಸ ಪ್ರಸಿದ್ಧ ಕ್ಷೇತ್ರ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಖಾಸಗಿ ವಾಹನಗಳಿಗೆ ಪ್ರವೇಶವಿರುವುದಿಲ್ಲ. ರಾಜ್ಯ ರಸ್ತೆ ಸಾರಿಗೆ ನಿಗಮದ…

17 mins ago

ಓದುಗರ ಪತ್ರ: ಮಸೂದೆ ಅಂಗೀಕಾರಕ್ಕಷ್ಟೇ ವಿಧಾನಸಭೆ ಅಧಿವೇಶನ ಸೀಮಿತವಾಗದಿರಲಿ

ಬೆಳಗಾವಿಯಲ್ಲಿ ವಿಧಾನಸಭಾ ಅಧಿವೇಶನ ಆರಂಭವಾಗಿದೆ. ಇತ್ತೀಚಿನ ವರ್ಷಗಳಲ್ಲಿ ಸದನದಲ್ಲಿ ಯಾವುದೇ ವಿಷಯ, ಜನರ ಸಮಸ್ಯೆ, ಮಸೂದೆಗಳ ಬಗ್ಗೆ ರಚನಾತ್ಮಕ ಚರ್ಚೆ…

19 mins ago

ಥಿಯೇಟರ್‌ಗಳಲ್ಲಿ ಡೆವಿಲ್‌ ಅಬ್ಬರ: ದರ್ಶನ್‌ ಅಭಿಮಾನಿಗಳ ಸಂಭ್ರಮ

ಬೆಂಗಳೂರು: ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅಭಿನಯದ ಡೆವಿಲ್‌ ಚಿತ್ರ ಇಂದು ರಾಜ್ಯಾದ್ಯಂತ ರಿಲೀಸ್‌ ಆಗಿದ್ದು, ಅಭಿಮಾನಿಗಳ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ.…

21 mins ago

ಚಿರತೆಗಳು ಕಾಣಿಸಿಕೊಳ್ಳುವಿಕೆ: ಮೈಸೂರಿನ ಅಭಿವೃದ್ಧಿಯ ಮತ್ತೊಂದು ಮುಖ

ಮೈಸೂರು ನಗರವು ತನ್ನ ಸಾಂಸ್ಕೃತಿಕ ಪರಂಪರೆ, ಹಸಿರು ಪರಿಸರ ಮತ್ತು ಸುಸ್ಥಿರ ಜೀವನಶೈಲಿಗಾಗಿ ಬಹಳ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ…

54 mins ago