ಕ್ರೀಡೆ

ಎಸ್‌ಅರ್‌ಎಚ್‌ ವಿರುದ್ಧ ಲಖನೌಗೆ ಹೀನಾಯ ಸೋಲು: ರಾಹುಲ್‌ ವಿರುದ್ಧ ಗರಂ ಆದ ಸಂಜೀವ್‌

ಹೈದರಾಬಾದ್‌: ಇಲ್ಲಿನ ರಾಜೀವ್‌ ಗಾಂಧಿ ಅಂತರಾಷ್ಟ್ರೀಯ ಮೈದಾನದಲ್ಲಿ ನಡೆದ ಐಪಿಎಲ್‌ ಪಂದ್ಯದಲ್ಲಿ ಎಸ್‌ಅರ್‌ಎಚ್‌ ವಿರುದ್ಧ ಲಖನೌಗೆ ಹೀನಾಯ ಸೋಲು ಕಂಡಿತು. ಇದು ಐಪಿಎಲ್‌ ಇತಿಹಾಸದಲ್ಲೇ ಅತೀ ಕಡಿಮೆ ಓವರ್‌ನಲ್ಲಿ ಬೃಹತ್‌ ಮೊತ್ತ ಒಂದನ್ನು ಚೇಸ್‌ ಮಾಡಿದ್ದು ಇದೇ ಮೊದಲು.

ಈ ಹೀನಾಯ ಸೋಲು ಕಂಡ ಲಖನೌ ಸೂಪರ್‌ ಜೈಂಟ್ಸ್‌ ಮಾಲೀಕ ಸಂಜೀವ್‌ ಗೋಯಂಕಾ ತಂಡದ ಪ್ರದರ್ಶನದಿಂದ ಬೇಸರಗೊಂಡಿದ್ದಾರೆ. ಮತ್ತು ನಾಯಕ ಕೆ.ಎಲ್‌ ರಾಹುಲ್‌ ಜತೆ ಕೋಪದಿಂದ ವರ್ತಿಸುತ್ತಿರುವುದು ಕಂಡು ಬಂದಿದೆ.

ಪಂದ್ಯ ಮುಗಿದ ಬಳಿಕ ತಂಡದ ನೀರಸ ಪ್ರದರ್ಶನಕ್ಕೆ ಸಿಟ್ಟಾದ ಮಾಲೀಕ ಗೋಯಂಕಾ ಡಗ್‌ಔಟ್‌ನಲ್ಲಿ ನಾಯಕ ರಾಹುಲ್‌ ಜತೆ ಕೋಪದಿಂದಲೇ ಮಾತನಾಡುತ್ತಿರುವುದು ಕಂಡುಬಂದಿದೆ. ಆದರೆ, ಅವರಿಬ್ಬರು ಸಂಭಾಷಣೆ ಏನು ಎಂಬುದರ ಯಾರಿಗೂ ಸ್ಪಷ್ಟತೆ ಸಿಕ್ಕಿಲ್ಲ. ಇನ್ನು ಈ ಇಬ್ಬರ ನಡುವಣ ಮಾತಿನ ಚಕಮಕಿ ವೀಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ಸಖತ್‌ ವೈರಲ್‌ ಆಗಿದ್ದು, ಇದನ್ನು ನೋಡಿರುವ ನೆಟ್ಟಿಗರು ಈ ಇಬ್ಬರ ನಡುವೆ ಜಗಳ ಆಗಿದೆ ಎಂದು ಹೇಳುತ್ತಿದ್ದಾರೆ.

ಅಸಲಿಗೆ ಸಂಜೀವ್‌ ಹಾಗೂ ರಾಹುಲ್‌ ನಡುವಿನ ಮಾತುಕತೆ ಅಸಲಿಯತ್ತೇನು ಎಂಬುದು ಇನ್ನಷ್ಟೇ ತಿಳಿಯಬೇಕಿದೆ.

ಇನ್ನು ಈ ಪಂದ್ಯದಲ್ಲಿ ಲಖನೌ 20 ಓವರ್‌ಗಳಲ್ಲಿ 4 ವಿಕೆಟ್‌ ಕಳೆದುಕೊಂಡು 166 ರನ್‌ ಗಳಿಸಿದರೇ, ತಮ್ಮ ತವರಿನಂಗಳದಲ್ಲಿ  ಚೇಸ್‌ ಮಾಡಿದ ಎಸ್‌ಆರ್‌ಎಚ್‌ ಕೇವಲ 9.4 ಓವರ್‌ಗಳಲ್ಲಿ ಯಾವುದೇ ವಿಕೆಟ್‌ ನಷ್ಟವಿಲ್ಲದೇ 167 ರನ್‌ ಚಚ್ಚಿದರು. ಇದು ಐಪಿಎಲ್‌ ಇತಿಹಾಸದೇ ಇಷ್ಟೊಂದು ರನ್‌ನ್ನು ಕಡಿಮೆ ಓವರ್‌ನಲ್ಲಿ ಚೇಸ್‌ ಮಾಡಿದ್ದು ಇದೇ ಮೊದಲಾಗಿತ್ತು.

https://x.com/LucknowIPLCover/status/1788261055262572978

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಖಾಸಗಿ ಶಾಲೆಗಳಲ್ಲಿ ಕಡ್ಡಾಯವಾಗಿ ಕನ್ನಡ ಕಲಿಸದೇ ಹೋದರೆ ಕ್ರಮ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು. ಇಲ್ಲದೇ ಹೋದರೆ ಅಂತಹ ಶಾಲೆಗಳ ಮೇಲೆ ಕ್ರಮ…

5 hours ago

ಹನೂರು| ರಸ್ತೆಯಲ್ಲಿ ಹುಲಿ ದರ್ಶನ: ವಿಡಿಯೋ ವೈರಲ್‌

ಹನೂರು: ತಾಲೂಕಿನ ಮಿಣ್ಯಂ ಗ್ರಾಮದಿಂದ ಹನೂರಿಗೆ ಆಗಮಿಸುತ್ತಿದ್ದ ಪ್ರಯಾಣಿಕರಿಗೆ ಅರಣ್ಯ ವ್ಯಾಪ್ತಿಯಲ್ಲಿ ಹುಲಿರಾಯ ದರ್ಶನ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ…

6 hours ago

ಶೀಘ್ರದಲ್ಲೇ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ: ರಹೀಂ ಖಾನ್‌

ಬೆಳಗಾವಿ: ಆದಷ್ಟು ಬೇಗ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಾಗುತ್ತದೆ ಎಂದು ಸಚಿವ ರಹೀಂ ಖಾನ್‌ ತಿಳಿಸಿದರು. ವಿಧಾನಪರಿಷತ್‌ ಕಲಾಪದಲ್ಲಿ…

6 hours ago

ಎಚ್‌ಡಿಕೆ ಹುಟ್ಟುಹಬ್ಬ: ಮಂಡ್ಯದಲ್ಲಿ ಕಾರ್ಯಕರ್ತರಿಂದ ಅದ್ಧೂರಿ ಆಚರಣೆ

ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಮಂಡ್ಯ ಜಿಲ್ಲೆಯ ಜೆಡಿಎಸ್‌ ಕಾರ್ಯಕರ್ತರು ಅದ್ಧೂರಿಯಾಗಿ ಆಚರಣೆ ಮಾಡಿದರು. ಮದ್ದೂರಿನಲ್ಲಿ ಮಾಜಿ…

6 hours ago

ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್‌ ಬರುವ ವದಂತಿ: ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಿಷ್ಟು.!

ಬೆಳಗಾವಿ: ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್‌ ಬರುವ ವದಂತಿ ಎಲ್ಲೆಡೆ ಹಬ್ಬಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯೆ…

6 hours ago

ಮಳವಳ್ಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮನ

ಮಳವಳ್ಳಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮಳವಳ್ಳಿಯಲ್ಲಿ ನಡೆಯಲಿರುವ ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ…

7 hours ago