ಕ್ರೀಡೆ

ಎಸ್‌ಅರ್‌ಎಚ್‌ ವಿರುದ್ಧ ಲಖನೌಗೆ ಹೀನಾಯ ಸೋಲು: ರಾಹುಲ್‌ ವಿರುದ್ಧ ಗರಂ ಆದ ಸಂಜೀವ್‌

ಹೈದರಾಬಾದ್‌: ಇಲ್ಲಿನ ರಾಜೀವ್‌ ಗಾಂಧಿ ಅಂತರಾಷ್ಟ್ರೀಯ ಮೈದಾನದಲ್ಲಿ ನಡೆದ ಐಪಿಎಲ್‌ ಪಂದ್ಯದಲ್ಲಿ ಎಸ್‌ಅರ್‌ಎಚ್‌ ವಿರುದ್ಧ ಲಖನೌಗೆ ಹೀನಾಯ ಸೋಲು ಕಂಡಿತು. ಇದು ಐಪಿಎಲ್‌ ಇತಿಹಾಸದಲ್ಲೇ ಅತೀ ಕಡಿಮೆ ಓವರ್‌ನಲ್ಲಿ ಬೃಹತ್‌ ಮೊತ್ತ ಒಂದನ್ನು ಚೇಸ್‌ ಮಾಡಿದ್ದು ಇದೇ ಮೊದಲು.

ಈ ಹೀನಾಯ ಸೋಲು ಕಂಡ ಲಖನೌ ಸೂಪರ್‌ ಜೈಂಟ್ಸ್‌ ಮಾಲೀಕ ಸಂಜೀವ್‌ ಗೋಯಂಕಾ ತಂಡದ ಪ್ರದರ್ಶನದಿಂದ ಬೇಸರಗೊಂಡಿದ್ದಾರೆ. ಮತ್ತು ನಾಯಕ ಕೆ.ಎಲ್‌ ರಾಹುಲ್‌ ಜತೆ ಕೋಪದಿಂದ ವರ್ತಿಸುತ್ತಿರುವುದು ಕಂಡು ಬಂದಿದೆ.

ಪಂದ್ಯ ಮುಗಿದ ಬಳಿಕ ತಂಡದ ನೀರಸ ಪ್ರದರ್ಶನಕ್ಕೆ ಸಿಟ್ಟಾದ ಮಾಲೀಕ ಗೋಯಂಕಾ ಡಗ್‌ಔಟ್‌ನಲ್ಲಿ ನಾಯಕ ರಾಹುಲ್‌ ಜತೆ ಕೋಪದಿಂದಲೇ ಮಾತನಾಡುತ್ತಿರುವುದು ಕಂಡುಬಂದಿದೆ. ಆದರೆ, ಅವರಿಬ್ಬರು ಸಂಭಾಷಣೆ ಏನು ಎಂಬುದರ ಯಾರಿಗೂ ಸ್ಪಷ್ಟತೆ ಸಿಕ್ಕಿಲ್ಲ. ಇನ್ನು ಈ ಇಬ್ಬರ ನಡುವಣ ಮಾತಿನ ಚಕಮಕಿ ವೀಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ಸಖತ್‌ ವೈರಲ್‌ ಆಗಿದ್ದು, ಇದನ್ನು ನೋಡಿರುವ ನೆಟ್ಟಿಗರು ಈ ಇಬ್ಬರ ನಡುವೆ ಜಗಳ ಆಗಿದೆ ಎಂದು ಹೇಳುತ್ತಿದ್ದಾರೆ.

ಅಸಲಿಗೆ ಸಂಜೀವ್‌ ಹಾಗೂ ರಾಹುಲ್‌ ನಡುವಿನ ಮಾತುಕತೆ ಅಸಲಿಯತ್ತೇನು ಎಂಬುದು ಇನ್ನಷ್ಟೇ ತಿಳಿಯಬೇಕಿದೆ.

ಇನ್ನು ಈ ಪಂದ್ಯದಲ್ಲಿ ಲಖನೌ 20 ಓವರ್‌ಗಳಲ್ಲಿ 4 ವಿಕೆಟ್‌ ಕಳೆದುಕೊಂಡು 166 ರನ್‌ ಗಳಿಸಿದರೇ, ತಮ್ಮ ತವರಿನಂಗಳದಲ್ಲಿ  ಚೇಸ್‌ ಮಾಡಿದ ಎಸ್‌ಆರ್‌ಎಚ್‌ ಕೇವಲ 9.4 ಓವರ್‌ಗಳಲ್ಲಿ ಯಾವುದೇ ವಿಕೆಟ್‌ ನಷ್ಟವಿಲ್ಲದೇ 167 ರನ್‌ ಚಚ್ಚಿದರು. ಇದು ಐಪಿಎಲ್‌ ಇತಿಹಾಸದೇ ಇಷ್ಟೊಂದು ರನ್‌ನ್ನು ಕಡಿಮೆ ಓವರ್‌ನಲ್ಲಿ ಚೇಸ್‌ ಮಾಡಿದ್ದು ಇದೇ ಮೊದಲಾಗಿತ್ತು.

https://x.com/LucknowIPLCover/status/1788261055262572978

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಕೊಲಂಬಿಯಾದಲ್ಲಿ 125 ಸೈನಿಕರಿದ್ದ ಮಿಲಿಟರಿ ವಿಮಾನ ಪತನ: 66 ಮಂದಿ ದುರ್ಮರಣ

ಬೊಗೋಟಾ: 125 ಜನರನ್ನು ಹೊತ್ತೊಯ್ಯುತ್ತಿದ್ದ ಮಿಲಿಟರಿ ವಿಮಾನವು ಟೇಕಾಫ್‌ ಕೆಲ ಸಮಯದಲ್ಲಿ ಪತನಗೊಂಡು 66 ಜನರು ಸಾವನ್ನಪ್ಪಿರುವ ಘಟನೆ ಕೊಲಂಬಿಯಾದಲ್ಲಿ…

37 mins ago

ಓದುಗರ ಪತ್ರ: ಕಲ್ಲಾಗದಿರು ಮಳೆಯೇ!

ಬಾ ಮಳೆಯೇ ಬಾ.. ನೊಂದು - ಬೆಂದು ಬಸವಳಿದ ರೈತನ ಬಾಳಿಗೆ ಹೂವಾಗಿ ಬಾ ಕಾದ ಭೂತಾಯ ಒಡಲಿಂಗೆ ಹನಿ…

1 hour ago

ಓದುಗರ ಪತ್ರ: ಬೆರಳಚ್ಚು ಕಡ್ಡಾಯಗೊಳ್ಳಲಿ

ಪಡಿತರ ಮತ್ತು ಪಿಂಚಣಿಗೆ ಬಯೋಮೆಟ್ರಿಕ್ ಕಡ್ಡಾಯವಿರುವಾಗ ಚುನಾವಣೆಯಲ್ಲಿ ಇದಕ್ಕೇಕೆ ವಿನಾಯಿತಿ? ಭಾರತದಂತಹ ವಿಶಾಲ ದೇಶದಲ್ಲಿ. ಶೇ.೨೦ ರಿಂದ ೨೨ ರಷ್ಟು…

1 hour ago

ಓದುಗರ ಪತ್ರ: ಒಂದನೇ ತರಗತಿ ಪ್ರವೇಶಕ್ಕೆ ಹಿಂದಿನ ಪದ್ಧತಿಯೇ ಸೂಕ್ತ

ಒಂದನೇ ತರಗತಿ ಪ್ರವೇಶಕ್ಕೆ ಜೂನ್ ೧ಕ್ಕೆ ೬ ವರ್ಷ ಕಡ್ಡಾಯಗೊಳಿಸಿರುವ ನಿಯಮವು, ಕೇವಲ ಕೆಲವೇ ದಿನಗಳ ಅಂತರವಿರುವ ಮಕ್ಕಳ ಒಂದು…

1 hour ago

ಓದುಗರ ಪತ್ರ: ಎಚ್.ಡಿ.ದೇವೇಗೌಡ ಪತ್ರ ಬರೆದಿರುವುದು ಶ್ಲಾಘನೀಯ

ಕಾಂಗ್ರೆಸ್ ಪಕ್ಷದ ಲೋಕಸಭಾ ಸದಸ್ಯರ ನಡವಳಿಕೆಯನ್ನು ಕುರಿತು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಇತ್ತೀಚೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರಿಗೆ…

1 hour ago

ಓದುಗರ ಪತ್ರ: ರಜೆ ಸಮಯ ಮಕ್ಕಳಿಗೆ ಉಪಯುಕ್ತವಾಗಲಿ

ಬೇಸಿಗೆಯ ರಜೆ ಎಂದರೆ ಮಕ್ಕಳಿಗೆ ಸಂತೋಷದ ಕಾಲ. ಶಾಲೆಯ ಒತ್ತಡದಿಂದ ದೂರವಾಗಿ ಆಟ-ಪಾಠಗಳಲ್ಲಿ ತೊಡಗಿಸಿಕೊಳ್ಳುವ ಸಮಯ. ಆದರೆ ಇತ್ತೀಚಿನ ದಿನಗಳಲ್ಲಿ…

1 hour ago