ಹೈದರಾಬಾದ್: ಇಲ್ಲಿನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಮೈದಾನದಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಎಸ್ಅರ್ಎಚ್ ವಿರುದ್ಧ ಲಖನೌಗೆ ಹೀನಾಯ ಸೋಲು ಕಂಡಿತು. ಇದು ಐಪಿಎಲ್ ಇತಿಹಾಸದಲ್ಲೇ ಅತೀ ಕಡಿಮೆ ಓವರ್ನಲ್ಲಿ ಬೃಹತ್ ಮೊತ್ತ ಒಂದನ್ನು ಚೇಸ್ ಮಾಡಿದ್ದು ಇದೇ ಮೊದಲು.
ಈ ಹೀನಾಯ ಸೋಲು ಕಂಡ ಲಖನೌ ಸೂಪರ್ ಜೈಂಟ್ಸ್ ಮಾಲೀಕ ಸಂಜೀವ್ ಗೋಯಂಕಾ ತಂಡದ ಪ್ರದರ್ಶನದಿಂದ ಬೇಸರಗೊಂಡಿದ್ದಾರೆ. ಮತ್ತು ನಾಯಕ ಕೆ.ಎಲ್ ರಾಹುಲ್ ಜತೆ ಕೋಪದಿಂದ ವರ್ತಿಸುತ್ತಿರುವುದು ಕಂಡು ಬಂದಿದೆ.
ಪಂದ್ಯ ಮುಗಿದ ಬಳಿಕ ತಂಡದ ನೀರಸ ಪ್ರದರ್ಶನಕ್ಕೆ ಸಿಟ್ಟಾದ ಮಾಲೀಕ ಗೋಯಂಕಾ ಡಗ್ಔಟ್ನಲ್ಲಿ ನಾಯಕ ರಾಹುಲ್ ಜತೆ ಕೋಪದಿಂದಲೇ ಮಾತನಾಡುತ್ತಿರುವುದು ಕಂಡುಬಂದಿದೆ. ಆದರೆ, ಅವರಿಬ್ಬರು ಸಂಭಾಷಣೆ ಏನು ಎಂಬುದರ ಯಾರಿಗೂ ಸ್ಪಷ್ಟತೆ ಸಿಕ್ಕಿಲ್ಲ. ಇನ್ನು ಈ ಇಬ್ಬರ ನಡುವಣ ಮಾತಿನ ಚಕಮಕಿ ವೀಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದ್ದು, ಇದನ್ನು ನೋಡಿರುವ ನೆಟ್ಟಿಗರು ಈ ಇಬ್ಬರ ನಡುವೆ ಜಗಳ ಆಗಿದೆ ಎಂದು ಹೇಳುತ್ತಿದ್ದಾರೆ.
ಅಸಲಿಗೆ ಸಂಜೀವ್ ಹಾಗೂ ರಾಹುಲ್ ನಡುವಿನ ಮಾತುಕತೆ ಅಸಲಿಯತ್ತೇನು ಎಂಬುದು ಇನ್ನಷ್ಟೇ ತಿಳಿಯಬೇಕಿದೆ.
ಇನ್ನು ಈ ಪಂದ್ಯದಲ್ಲಿ ಲಖನೌ 20 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು 166 ರನ್ ಗಳಿಸಿದರೇ, ತಮ್ಮ ತವರಿನಂಗಳದಲ್ಲಿ ಚೇಸ್ ಮಾಡಿದ ಎಸ್ಆರ್ಎಚ್ ಕೇವಲ 9.4 ಓವರ್ಗಳಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೇ 167 ರನ್ ಚಚ್ಚಿದರು. ಇದು ಐಪಿಎಲ್ ಇತಿಹಾಸದೇ ಇಷ್ಟೊಂದು ರನ್ನ್ನು ಕಡಿಮೆ ಓವರ್ನಲ್ಲಿ ಚೇಸ್ ಮಾಡಿದ್ದು ಇದೇ ಮೊದಲಾಗಿತ್ತು.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…