ಹೈದರಾಬಾದ್: ಇಲ್ಲಿನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಮೈದಾನದಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಎಸ್ಅರ್ಎಚ್ ವಿರುದ್ಧ ಲಖನೌಗೆ ಹೀನಾಯ ಸೋಲು ಕಂಡಿತು. ಇದು ಐಪಿಎಲ್ ಇತಿಹಾಸದಲ್ಲೇ ಅತೀ ಕಡಿಮೆ ಓವರ್ನಲ್ಲಿ ಬೃಹತ್ ಮೊತ್ತ ಒಂದನ್ನು ಚೇಸ್ ಮಾಡಿದ್ದು ಇದೇ ಮೊದಲು.
ಈ ಹೀನಾಯ ಸೋಲು ಕಂಡ ಲಖನೌ ಸೂಪರ್ ಜೈಂಟ್ಸ್ ಮಾಲೀಕ ಸಂಜೀವ್ ಗೋಯಂಕಾ ತಂಡದ ಪ್ರದರ್ಶನದಿಂದ ಬೇಸರಗೊಂಡಿದ್ದಾರೆ. ಮತ್ತು ನಾಯಕ ಕೆ.ಎಲ್ ರಾಹುಲ್ ಜತೆ ಕೋಪದಿಂದ ವರ್ತಿಸುತ್ತಿರುವುದು ಕಂಡು ಬಂದಿದೆ.
ಪಂದ್ಯ ಮುಗಿದ ಬಳಿಕ ತಂಡದ ನೀರಸ ಪ್ರದರ್ಶನಕ್ಕೆ ಸಿಟ್ಟಾದ ಮಾಲೀಕ ಗೋಯಂಕಾ ಡಗ್ಔಟ್ನಲ್ಲಿ ನಾಯಕ ರಾಹುಲ್ ಜತೆ ಕೋಪದಿಂದಲೇ ಮಾತನಾಡುತ್ತಿರುವುದು ಕಂಡುಬಂದಿದೆ. ಆದರೆ, ಅವರಿಬ್ಬರು ಸಂಭಾಷಣೆ ಏನು ಎಂಬುದರ ಯಾರಿಗೂ ಸ್ಪಷ್ಟತೆ ಸಿಕ್ಕಿಲ್ಲ. ಇನ್ನು ಈ ಇಬ್ಬರ ನಡುವಣ ಮಾತಿನ ಚಕಮಕಿ ವೀಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದ್ದು, ಇದನ್ನು ನೋಡಿರುವ ನೆಟ್ಟಿಗರು ಈ ಇಬ್ಬರ ನಡುವೆ ಜಗಳ ಆಗಿದೆ ಎಂದು ಹೇಳುತ್ತಿದ್ದಾರೆ.
ಅಸಲಿಗೆ ಸಂಜೀವ್ ಹಾಗೂ ರಾಹುಲ್ ನಡುವಿನ ಮಾತುಕತೆ ಅಸಲಿಯತ್ತೇನು ಎಂಬುದು ಇನ್ನಷ್ಟೇ ತಿಳಿಯಬೇಕಿದೆ.
ಇನ್ನು ಈ ಪಂದ್ಯದಲ್ಲಿ ಲಖನೌ 20 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು 166 ರನ್ ಗಳಿಸಿದರೇ, ತಮ್ಮ ತವರಿನಂಗಳದಲ್ಲಿ ಚೇಸ್ ಮಾಡಿದ ಎಸ್ಆರ್ಎಚ್ ಕೇವಲ 9.4 ಓವರ್ಗಳಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೇ 167 ರನ್ ಚಚ್ಚಿದರು. ಇದು ಐಪಿಎಲ್ ಇತಿಹಾಸದೇ ಇಷ್ಟೊಂದು ರನ್ನ್ನು ಕಡಿಮೆ ಓವರ್ನಲ್ಲಿ ಚೇಸ್ ಮಾಡಿದ್ದು ಇದೇ ಮೊದಲಾಗಿತ್ತು.
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…
ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್ಪಿಜಿಯನ್ನು ಹೊತ್ತ…
ಬೆಂಗಳೂರು: ಸಮುದ್ರ ಭಾಗದಲ್ಲಿ ವೈಪರೀತ್ಯಗಳು ಮುಂದುವರಿದಿದ್ದು, ಮುಂಗಾರು ಮಳೆ ಆಗಮನಕ್ಕೆ ದಿನಗಣನೇ ಶುರುವಾಗಿದೆ. ಮತ್ತೊಂದೆಡೆ ರಾಜ್ಯದ ವಿವಿಧ ಕಡೆಗಳಲ್ಲಿ ಪೂರ್ವ…