ಕ್ರೀಡೆ

IPL 2024: ಯಶ್‌ ಠಾಕೂರ್‌ಗೆ ಐದು ವಿಕೆಟ್‌: ಜಿಟಿ ವಿರುದ್ಧ ಎಲ್‌ಎಸ್‌ಜಿ ಗೆ 33 ರನ್‌ಗಳ ಜಯ!

ಲಖನೌ: ಕೆ.ಎಲ್. ರಾಹುಲ್ ನಾಯಕತ್ವದ ಲಖನೌ ಸೂಪರ್ ಜೈಂಟ್ಸ್ ತಂಡದ ಯಶ್‌ ಠಾಕೂರ್‌ 30ಕ್ಕೆ5, ಕೃನಾಲ್‌ ಪಾಂಡ್ಯ 11ಕ್ಕೆ3 ನಡೆಸಿದ ಮಿಂಚಿನ ಬೌಲಿಂಗ್‌ ದಾಳಿಗೆ ನಲುಗಿದ ಗುಜರಾತ್‌ ಟೈಟನ್ಸ್‌ 33 ರನ್‌ಗಳ ಅಂತರದ ಸೋಲು ಅನುಭವಿಸಿದೆ.

ಇಲ್ಲಿನ ಏಕನಾ ಕ್ರೀಡಾಂಗಣದಲ್ಲಿ ನಡೆದ ಲಖನೌ ಸೂಪರ್ ಜೈಂಟ್ಸ್ ಮತ್ತು ಗುಜರಾತ್‌ ಟೈಟನ್ಸ್‌ ನಡುವಿನ ಪಂದ್ಯದಲ್ಲಿ ಟಾಸ್ ಗೆದ್ದ ಲಖನೌ ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿತ್ತು. ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 163 ರನ್ ಪೇರಿಸಿತು. ಈ ಮೊತ್ತ ಬೆನ್ನತ್ತಿದ ಗುಜರಾತ್‌ 18.5 ಓವರ್‌ಗಳಲ್ಲಿ ಆಲ್‌ಔಟ್‌ ಆಗುವ ಮೂಲಕ ಕೇವಲ 130 ಕೆಲಹಾಕಿ ಸೋಲೊಪ್ಪಿಕೊಂಡಿತು.

ಲಖನೌ ಇನ್ನಿಂಗ್ಸ್‌: ಇಂದಿನ ಪಂದ್ಯದಲ್ಲಿಯೂ ಸಹಾ ಲಖನೌಗೆ ಉತ್ತರ ಆರಂಭ ಸಿಗಲಿಲ್ಲ. ಡಿ ಕಾಕ್‌ 6ಕ್ಕೆ ಸುಸ್ತಾದರು. ಬಳಿಕ ಬಂದ ಪಡಿಕ್ಕಲ್‌ 7 ರನ್‌ ಬಾರಿಸಿ ಔಟಾದರು. ನಂತರ ಒಂದಾದ ನಾಯಕರ ರಾಹುಲ್ 33, ಹಾಗೂ ಸ್ಟೋಯಿನ್ಸ್ 58 ರನ್‌ ಗಳಿಸಿ ತಂಡ ಸ್ಪರ್ಧಾತ್ಮಕ ಮೊತ್ತ ಪೇರಿಸುವಲ್ಲಿ ಯಶಸ್ವಿಯಾದರು. ಉಳಿದಂತೆ ಪೂರನ್ 32, ಬದೋನಿ 20 ರನ್ ಗಳಿಸಿದರು.

ಗುಜರಾತ್‌ ಟೈಟನ್ಸ್ ಪರ ಉಮೇಶ್ ಯಾದವ್, ದರ್ಶನ್ ತಲಾ 2 ವಿಕೆಟ್ ಹಾಗೂ ರಶಿದ್‌ ಖಾನ್‌ ಒಂದು ವಿಕೆಟ್‌ ಪಡೆದರು.

ಗುಜರಾತ್‌ ಇನ್ನಿಂಗ್ಸ್‌: ಉತ್ತಮ ಆರಂಭ ಪಡೆದ ಗುಜರಾತ್‌ಗೆ ಮಧ್ಯಮ ಕ್ರಮಾಂಕ ಕೈ ಕೊಟ್ಟಿತು. ಜಿಟಿ ಪರ ಸಾಯ್‌ ಸುದರ್ಶನ್‌ 31 ರನ್‌ ಗಳಿಸಿದೇ ತಂಡದ ಪರ ಗರಿಷ್ಠ ಮೊತ್ತವಾಗಿತ್ತು. ಇವರಿಗೆ ನಾಯಕ ನಾಯಕ ಗಿಲ್‌ 19ರನ್‌ ಬಾರಿಸಿ ಸಾಥ್‌ ನೀಡಿದರು. ಈ ಇಬ್ಬರೂ ನಿರ್ಗಮಿಸಿದ ಬಳಿಕ ಮಧ್ಯಮ ಕ್ರಮಾಕ ದಿಢೀರ್‌ ಕುಸಿತ ಕಂಡಿತು. ಕೇನ್‌ ವಿಲಿಯಮ್ಸ್‌ 1, ಶರತ್‌ 2, ವಿಜಯ್‌ ಶಂಕರ್‌ 17, ನಲ್ಕಂಡೆ 12, ರಶೀದ್‌ ಖಾನ್‌ ಸೊನ್ನೆ ಸುತ್ತಿದರು. ತೆವಾಟಿಯಾ 30ರನ್‌ ಬಾರಿಸಿ ಕೊನೆಯಲ್ಲಿ ಕೊಂಚ ಹೋರಾಟ ತೋರಿದರೂ ಗೆಲ್ಲಲ್ಲು ಸಾಧ್ಯವಾಗಲಿಲ್ಲ.

ಲಖನೌ ಪರ ಮಿಂಚಿನ ಬೌಲಿಂಗ್‌ ದಾಳಿ ನಡೆಸಿದ ಯಶ್‌ ಠಾಕೂರ್‌ 30ಕ್ಕೆ5, ಕೃನಾಲ್‌ ಪಾಂಡ್ಯ 11ಕ್ಕೆ3, ನವೀನ್‌ ಉಲ್‌-ಹಕ್‌ ಹಾಗೂ ಬಿಷ್ಣೋಯಿ ತಲಾ ಒಂದು ವಿಕೆಟ್‌ ಪಡೆದರು.

ಪಂದ್ಯ ಶ್ರೇಷ್ಠ: ಯಶ್‌ ಠಾಕೂರ್‌

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಲಂಚಕ್ಕೆ ಬೇಡಿಕೆ : ಪಿಎಸ್ಐ ಚೇತನ್ ಲೋಕಾ ಬಲೆಗೆ

ತುಮಕೂರು : ರಸ್ತೆಯಲ್ಲಿ ನಿಲ್ಲಿಸಿದ್ದ ಕಾರನ್ನು ತೋ ಮಾಡಿಕೊಂಡು ಠಾಣೆಗೆ ತಂದಿದ್ದ ಕಾರನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟು…

2 mins ago

ಪೊಲೀಸ್‌ ದಾಳಿ : ಮೈಸೂರಲ್ಲಿ ಡ್ರಗ್ಸ್‌ಗೆ ಬಳಸುವ ರಾಸಾಯನಿಕ ವಸ್ತುಗಳ ಪತ್ತೆ

ಮೈಸೂರು : ಮಾದಕ ವಸ್ತು ತಯಾರಿಕೆ ಶಂಕೆ ಮೇರೆಗೆ ಮನೆಯೊಂದರ ಮೇಲೆ ಮೈಸೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ದಾಳಿ…

15 mins ago

ಚಿನ್ನಾಭರಣ ಪಡೆದು ವಂಚನೆ : ಮಾಲೀಕನ ಬಂಧನ

ಮೈಸೂರು : ಕಡಿಮೆ ಬಡ್ಡಿ ದರದಲ್ಲಿ ಚಿನ್ನಾಭರಣದ ಮೇಲೆ ಸಾಲ ನೀಡುವುದಾಗಿ ನಂಬಿಸಿ ಗ್ರಾಹಕರಿಂದ ಚಿನ್ನಾಭರಣ ಪಡೆದು ವಂಚಿಸಿ ಪರಾರಿಯಾಗಿದ್ದ…

22 mins ago

ನಾಳೆ ಕೇಂದ್ರ ಬಜೆಟ್‌ : ಕರ್ನಾಟಕದ ರಾಜ್ಯದ ನಿರೀಕ್ಷೆಗಳೇನು?

ಹೊಸದಿಲ್ಲಿ : ನಾಳೆ ಕೇಂದ್ರ ಸರ್ಕಾರದ 2026-27 ಸಾಲಿನ ಆಯವ್ಯಯ ಮಂಡನೆಯಾಗಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ…

53 mins ago

ಐತಿಹಾಸಿಕ ಮಳವಳ್ಳಿ ಸಿಡಿ ಜಾತ್ರಾ ಮಹೋತ್ಸವ ಸಂಪನ್ನ

ಮಳವಳ್ಳಿ : ಪಟ್ಟಣದ ಗ್ರಾಮ ದೇವತೆಗಳಾದ ಶ್ರೀ ಪಟ್ಟಲದಮ್ಮ-ದಂಡಿನ ಮಾರಮ್ಮ ಶಕ್ತಿ ದೇವತೆಗಳ ಸಿಡಿ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ಜ.27ರಿಂದ…

2 hours ago

ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ : ತನಿಖೆಗೆ ಎಸ್‌ಐಟಿ ರಚನೆ

ಬೆಂಗಳೂರು : ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಛಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿ.ಜೆ.ರಾಯ್ ಅವರು ಶುಕ್ರವಾರ ತಮ್ಮ…

2 hours ago