ಕ್ರೀಡೆ

IPL 2024: ಯಶ್‌ ಠಾಕೂರ್‌ಗೆ ಐದು ವಿಕೆಟ್‌: ಜಿಟಿ ವಿರುದ್ಧ ಎಲ್‌ಎಸ್‌ಜಿ ಗೆ 33 ರನ್‌ಗಳ ಜಯ!

ಲಖನೌ: ಕೆ.ಎಲ್. ರಾಹುಲ್ ನಾಯಕತ್ವದ ಲಖನೌ ಸೂಪರ್ ಜೈಂಟ್ಸ್ ತಂಡದ ಯಶ್‌ ಠಾಕೂರ್‌ 30ಕ್ಕೆ5, ಕೃನಾಲ್‌ ಪಾಂಡ್ಯ 11ಕ್ಕೆ3 ನಡೆಸಿದ ಮಿಂಚಿನ ಬೌಲಿಂಗ್‌ ದಾಳಿಗೆ ನಲುಗಿದ ಗುಜರಾತ್‌ ಟೈಟನ್ಸ್‌ 33 ರನ್‌ಗಳ ಅಂತರದ ಸೋಲು ಅನುಭವಿಸಿದೆ.

ಇಲ್ಲಿನ ಏಕನಾ ಕ್ರೀಡಾಂಗಣದಲ್ಲಿ ನಡೆದ ಲಖನೌ ಸೂಪರ್ ಜೈಂಟ್ಸ್ ಮತ್ತು ಗುಜರಾತ್‌ ಟೈಟನ್ಸ್‌ ನಡುವಿನ ಪಂದ್ಯದಲ್ಲಿ ಟಾಸ್ ಗೆದ್ದ ಲಖನೌ ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿತ್ತು. ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 163 ರನ್ ಪೇರಿಸಿತು. ಈ ಮೊತ್ತ ಬೆನ್ನತ್ತಿದ ಗುಜರಾತ್‌ 18.5 ಓವರ್‌ಗಳಲ್ಲಿ ಆಲ್‌ಔಟ್‌ ಆಗುವ ಮೂಲಕ ಕೇವಲ 130 ಕೆಲಹಾಕಿ ಸೋಲೊಪ್ಪಿಕೊಂಡಿತು.

ಲಖನೌ ಇನ್ನಿಂಗ್ಸ್‌: ಇಂದಿನ ಪಂದ್ಯದಲ್ಲಿಯೂ ಸಹಾ ಲಖನೌಗೆ ಉತ್ತರ ಆರಂಭ ಸಿಗಲಿಲ್ಲ. ಡಿ ಕಾಕ್‌ 6ಕ್ಕೆ ಸುಸ್ತಾದರು. ಬಳಿಕ ಬಂದ ಪಡಿಕ್ಕಲ್‌ 7 ರನ್‌ ಬಾರಿಸಿ ಔಟಾದರು. ನಂತರ ಒಂದಾದ ನಾಯಕರ ರಾಹುಲ್ 33, ಹಾಗೂ ಸ್ಟೋಯಿನ್ಸ್ 58 ರನ್‌ ಗಳಿಸಿ ತಂಡ ಸ್ಪರ್ಧಾತ್ಮಕ ಮೊತ್ತ ಪೇರಿಸುವಲ್ಲಿ ಯಶಸ್ವಿಯಾದರು. ಉಳಿದಂತೆ ಪೂರನ್ 32, ಬದೋನಿ 20 ರನ್ ಗಳಿಸಿದರು.

ಗುಜರಾತ್‌ ಟೈಟನ್ಸ್ ಪರ ಉಮೇಶ್ ಯಾದವ್, ದರ್ಶನ್ ತಲಾ 2 ವಿಕೆಟ್ ಹಾಗೂ ರಶಿದ್‌ ಖಾನ್‌ ಒಂದು ವಿಕೆಟ್‌ ಪಡೆದರು.

ಗುಜರಾತ್‌ ಇನ್ನಿಂಗ್ಸ್‌: ಉತ್ತಮ ಆರಂಭ ಪಡೆದ ಗುಜರಾತ್‌ಗೆ ಮಧ್ಯಮ ಕ್ರಮಾಂಕ ಕೈ ಕೊಟ್ಟಿತು. ಜಿಟಿ ಪರ ಸಾಯ್‌ ಸುದರ್ಶನ್‌ 31 ರನ್‌ ಗಳಿಸಿದೇ ತಂಡದ ಪರ ಗರಿಷ್ಠ ಮೊತ್ತವಾಗಿತ್ತು. ಇವರಿಗೆ ನಾಯಕ ನಾಯಕ ಗಿಲ್‌ 19ರನ್‌ ಬಾರಿಸಿ ಸಾಥ್‌ ನೀಡಿದರು. ಈ ಇಬ್ಬರೂ ನಿರ್ಗಮಿಸಿದ ಬಳಿಕ ಮಧ್ಯಮ ಕ್ರಮಾಕ ದಿಢೀರ್‌ ಕುಸಿತ ಕಂಡಿತು. ಕೇನ್‌ ವಿಲಿಯಮ್ಸ್‌ 1, ಶರತ್‌ 2, ವಿಜಯ್‌ ಶಂಕರ್‌ 17, ನಲ್ಕಂಡೆ 12, ರಶೀದ್‌ ಖಾನ್‌ ಸೊನ್ನೆ ಸುತ್ತಿದರು. ತೆವಾಟಿಯಾ 30ರನ್‌ ಬಾರಿಸಿ ಕೊನೆಯಲ್ಲಿ ಕೊಂಚ ಹೋರಾಟ ತೋರಿದರೂ ಗೆಲ್ಲಲ್ಲು ಸಾಧ್ಯವಾಗಲಿಲ್ಲ.

ಲಖನೌ ಪರ ಮಿಂಚಿನ ಬೌಲಿಂಗ್‌ ದಾಳಿ ನಡೆಸಿದ ಯಶ್‌ ಠಾಕೂರ್‌ 30ಕ್ಕೆ5, ಕೃನಾಲ್‌ ಪಾಂಡ್ಯ 11ಕ್ಕೆ3, ನವೀನ್‌ ಉಲ್‌-ಹಕ್‌ ಹಾಗೂ ಬಿಷ್ಣೋಯಿ ತಲಾ ಒಂದು ವಿಕೆಟ್‌ ಪಡೆದರು.

ಪಂದ್ಯ ಶ್ರೇಷ್ಠ: ಯಶ್‌ ಠಾಕೂರ್‌

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ ಅಮಾನತು

ಬೆಂಗಳೂರು: ತಮ್ಮ ಪುತ್ರಿಗಾಗಿ ಅಧಿಕಾರದ ದುರುಪಯೋಗಪಡಿಸಿಕೊಂಡು ನಕಲಿ ಜಾತಿ ಪ್ರಮಾಣ ಸಲ್ಲಿಸಿದ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗ( ಕೆಪಿಎಸ್…

2 hours ago

ಮಾಜಿ ಸಚಿವ ಎಚ್.ಡಿ.ರೇವಣ್ಣಗೆ ಮತ್ತೊಮ್ಮೆ ಕಾನೂನು ಸಂಕಷ್ಟ

ನವದೆಹಲಿ: ಜೆಡಿಎಸ್ ನಾಯಕ ಹಾಗೂ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರಿಗೆ ಮತ್ತೊಮ್ಮೆ ಕಾನೂನು ಸಂಕಷ್ಟ ಎದುರಾಗಿದ್ದು, ಸುಪ್ರೀಂಕೋರ್ಟ್‌ನಿಂದ ನೋಟಿಸ್…

2 hours ago

ಪರ್ಯಾಯ ವ್ಯವಸ್ಥೆ ಕಲ್ಪಿಸಿ ಫುಟ್‌ಪಾತ್ ವ್ಯಾಪಾರಿಗಳನ್ನು ತೆರವುಗೊಳಿಸಿ

ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಮೈಸೂರು ಸೇರಿದಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ಆಡಳಿತ ಇದೀಗ…

9 hours ago

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಸಂವಹನ ಕೊರತೆಯಿಂದ ಪಟ್ಟಕ್ಕೆ ಕುತ್ತು

ರಾಮಕೃಷ್ಣ ಹೆಗಡೆ, ದೇವೇಗೌಡರನ್ನು ನಿರ್ಲಕ್ಷಿಸಿ ಅಧಿಕಾರ ಕಳೆದುಕೊಂಡ ಎಸ್.ಆರ್.ಬೊಮ್ಮಾಯಿ ರಾಜಕಾರಣದಲ್ಲಿ ಸಂವಹನ ಬಹಳ ಮುಖ್ಯ.ಅದರಲ್ಲೂ ಮುಖ್ಯಮಂತ್ರಿ ಹುದ್ದೆಗೇರುವ ನಾಯಕರಿಗೆ ಸಂವಹನ…

9 hours ago

ಚಾಮರಾಜೇಶ್ವರ ರಥೋತ್ಸವಕ್ಕೆ ದ್ವಿಶತಮಾನದ ನವೋತ್ಸಾಹ

ಸಿ.ಎಂ.ನರಸಿಂಹಮೂರ್ತಿ  ಚಾಮರಾಜನಗರ ವನಸಿರಿ ಪ್ರಕೃತಿ ಮಾತೆಯ ತವರೂರು. ವನ್ಯ ಸಂಪತ್ತಿನ ತಾಣ. ಅಪ್ರತಿಮ ನೈಸರ್ಗಿಕ ಸಂಪತ್ತು ಹಾಗೂ ಶ್ರೀಮಂತ ಸಾಂಸ್ಕ…

9 hours ago

ಕೆ.ಆರ್.ಪೇಟೆ: ಶೇ.19ರಷ್ಟು ಮಳೆ ಕೊರತೆ

ಆರ್.ಶ್ರೀನಿವಾಸ್ ತಾಲ್ಲೂಕಿನಲ್ಲಿ ೩೭,೬೭೧ ಹೆಕ್ಟೇರ್ ಪೈಕಿ ೬,೨೯೦ ಹೆ.ನಲ್ಲಿ ಮಾತ್ರ ಬಿತ್ತನೆ ಕಾರ್ಯ ಕೆ.ಆರ್.ಪೇಟೆ: ತಾಲ್ಲೂಕಿನಲ್ಲಿ ಪ್ರಸಕ್ತ ಸಾಲಿನ ಜ.೧ರಿಂದ…

9 hours ago