ಲಖನೌ: ಕೆ.ಎಲ್. ರಾಹುಲ್ ನಾಯಕತ್ವದ ಲಖನೌ ಸೂಪರ್ ಜೈಂಟ್ಸ್ ತಂಡದ ಯಶ್ ಠಾಕೂರ್ 30ಕ್ಕೆ5, ಕೃನಾಲ್ ಪಾಂಡ್ಯ 11ಕ್ಕೆ3 ನಡೆಸಿದ ಮಿಂಚಿನ ಬೌಲಿಂಗ್ ದಾಳಿಗೆ ನಲುಗಿದ ಗುಜರಾತ್ ಟೈಟನ್ಸ್ 33 ರನ್ಗಳ ಅಂತರದ ಸೋಲು ಅನುಭವಿಸಿದೆ.
ಇಲ್ಲಿನ ಏಕನಾ ಕ್ರೀಡಾಂಗಣದಲ್ಲಿ ನಡೆದ ಲಖನೌ ಸೂಪರ್ ಜೈಂಟ್ಸ್ ಮತ್ತು ಗುಜರಾತ್ ಟೈಟನ್ಸ್ ನಡುವಿನ ಪಂದ್ಯದಲ್ಲಿ ಟಾಸ್ ಗೆದ್ದ ಲಖನೌ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತ್ತು. ನಿಗದಿತ 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 163 ರನ್ ಪೇರಿಸಿತು. ಈ ಮೊತ್ತ ಬೆನ್ನತ್ತಿದ ಗುಜರಾತ್ 18.5 ಓವರ್ಗಳಲ್ಲಿ ಆಲ್ಔಟ್ ಆಗುವ ಮೂಲಕ ಕೇವಲ 130 ಕೆಲಹಾಕಿ ಸೋಲೊಪ್ಪಿಕೊಂಡಿತು.
ಲಖನೌ ಇನ್ನಿಂಗ್ಸ್: ಇಂದಿನ ಪಂದ್ಯದಲ್ಲಿಯೂ ಸಹಾ ಲಖನೌಗೆ ಉತ್ತರ ಆರಂಭ ಸಿಗಲಿಲ್ಲ. ಡಿ ಕಾಕ್ 6ಕ್ಕೆ ಸುಸ್ತಾದರು. ಬಳಿಕ ಬಂದ ಪಡಿಕ್ಕಲ್ 7 ರನ್ ಬಾರಿಸಿ ಔಟಾದರು. ನಂತರ ಒಂದಾದ ನಾಯಕರ ರಾಹುಲ್ 33, ಹಾಗೂ ಸ್ಟೋಯಿನ್ಸ್ 58 ರನ್ ಗಳಿಸಿ ತಂಡ ಸ್ಪರ್ಧಾತ್ಮಕ ಮೊತ್ತ ಪೇರಿಸುವಲ್ಲಿ ಯಶಸ್ವಿಯಾದರು. ಉಳಿದಂತೆ ಪೂರನ್ 32, ಬದೋನಿ 20 ರನ್ ಗಳಿಸಿದರು.
ಗುಜರಾತ್ ಟೈಟನ್ಸ್ ಪರ ಉಮೇಶ್ ಯಾದವ್, ದರ್ಶನ್ ತಲಾ 2 ವಿಕೆಟ್ ಹಾಗೂ ರಶಿದ್ ಖಾನ್ ಒಂದು ವಿಕೆಟ್ ಪಡೆದರು.
ಗುಜರಾತ್ ಇನ್ನಿಂಗ್ಸ್: ಉತ್ತಮ ಆರಂಭ ಪಡೆದ ಗುಜರಾತ್ಗೆ ಮಧ್ಯಮ ಕ್ರಮಾಂಕ ಕೈ ಕೊಟ್ಟಿತು. ಜಿಟಿ ಪರ ಸಾಯ್ ಸುದರ್ಶನ್ 31 ರನ್ ಗಳಿಸಿದೇ ತಂಡದ ಪರ ಗರಿಷ್ಠ ಮೊತ್ತವಾಗಿತ್ತು. ಇವರಿಗೆ ನಾಯಕ ನಾಯಕ ಗಿಲ್ 19ರನ್ ಬಾರಿಸಿ ಸಾಥ್ ನೀಡಿದರು. ಈ ಇಬ್ಬರೂ ನಿರ್ಗಮಿಸಿದ ಬಳಿಕ ಮಧ್ಯಮ ಕ್ರಮಾಕ ದಿಢೀರ್ ಕುಸಿತ ಕಂಡಿತು. ಕೇನ್ ವಿಲಿಯಮ್ಸ್ 1, ಶರತ್ 2, ವಿಜಯ್ ಶಂಕರ್ 17, ನಲ್ಕಂಡೆ 12, ರಶೀದ್ ಖಾನ್ ಸೊನ್ನೆ ಸುತ್ತಿದರು. ತೆವಾಟಿಯಾ 30ರನ್ ಬಾರಿಸಿ ಕೊನೆಯಲ್ಲಿ ಕೊಂಚ ಹೋರಾಟ ತೋರಿದರೂ ಗೆಲ್ಲಲ್ಲು ಸಾಧ್ಯವಾಗಲಿಲ್ಲ.
ಲಖನೌ ಪರ ಮಿಂಚಿನ ಬೌಲಿಂಗ್ ದಾಳಿ ನಡೆಸಿದ ಯಶ್ ಠಾಕೂರ್ 30ಕ್ಕೆ5, ಕೃನಾಲ್ ಪಾಂಡ್ಯ 11ಕ್ಕೆ3, ನವೀನ್ ಉಲ್-ಹಕ್ ಹಾಗೂ ಬಿಷ್ಣೋಯಿ ತಲಾ ಒಂದು ವಿಕೆಟ್ ಪಡೆದರು.
ಪಂದ್ಯ ಶ್ರೇಷ್ಠ: ಯಶ್ ಠಾಕೂರ್
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ನಾಳೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಭೇಟಿಗೆ ಸಮಯ ಕೋರಿದ್ದಾರೆ ಎಂದು ಸಿಎಂ…
ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ಲ್ಯಾಬ್ ರಿಪೋರ್ಟ್ನಲ್ಲಿ ನೆಗೆಟಿವ್ ಎಂದು ವರದಿ ಬಂದಿದೆ ಎಂದು ಸಚಿವ ದಿನೇಶ್…
ಬೆಂಗಳೂರು: ಉಗಾಂಡಾದಿಂದ ಬಂದಿದ್ದ ಮಹಿಳೆಯಲ್ಲಿ ಎಬೋಲಾ ಸೋಂಕಿನ ಲಕ್ಷಣಗಳು ಪತ್ತೆಯಾಗಿದ್ದು, ಆಕೆಯನ್ನು ಪ್ರತ್ಯೇಕ ವಾರ್ಡ್ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕು ದೃಢೀಕರಣಕ್ಕಾಗಿ…
ತಿರುವನಂತಪುರ: ಸಿಎಂಆರ್ಎಲ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯ ಇಂದು ಕೇರಳದ ಮಾಜಿ ಸಿಎಂ…
ಬೆಂಗಳೂರು: ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸುವ ಸಾಧ್ಯತೆಗಳು ದಟ್ಟವಾಗಿವೆ. ಮೇ.29ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯುವ…
ಎಸ್.ಎಸ್.ಭಟ್ ನಂಜನಗೂಡು: ಅಧಿಕಾರಿಗಳ ನೋಟಿಸ್ಗೂ ಕ್ಯಾರೆ ಎನ್ನದ ಶ್ರೀಕಂಠೇಶ್ವರ ದೇವಾಲಯದ ಸಿಬ್ಬಂದಿ ನಂಜನಗೂಡು: ಇಲ್ಲಿನ ಪ್ರಸಿದ್ಧ ಶ್ರೀಕಂಠೇಶ್ವರ ದೇವಾಲಯದ ಕಪಿಲಾ…