ಕ್ರೀಡೆ

ಮಹಾರಾಜ ಟ್ರೋಫಿ 2023: ಫೈನಲ್​ಗೆ ಲಗ್ಗೆಯಿಟ್ಟ ಹುಬ್ಬಳ್ಳಿ ಟೈಗರ್ಸ್​

ಬೆಂಗಳೂರು : ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಮಹಾರಾಜ ಟ್ರೋಫಿ ಟಿ20 ಟೂರ್ನಿಯ ಸೆಮಿಫೈನಲ್​ನಲ್ಲಿ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿ ಹುಬ್ಬಳ್ಳಿ ಟೈಗರ್ಸ್ ತಂಡವು ಫೈನಲ್​ಗೆ ಪ್ರವೇಶಿಸಿದೆ. ಶಿವಮೊಗ್ಗ ಲಯನ್ಸ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ನಾಯಕ ಮನೀಶ್ ಪಾಂಡೆ ಬೌಲಿಂಗ್ ಮಾಡುವ ನಿರ್ಧಾರ ತೆಗೆದುಕೊಂಡರು.

ಅದರಂತೆ ಮೊದಲು ಬ್ಯಾಟ್ ಮಾಡಿದ ಶಿವಮೊಗ್ಗ ಲಯನ್ಸ್ ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ರೋಹನ್ ಕದಮ್ ಹಾಗೂ ನಿಹಾಲ್ ಉಳ್ಳಾಲ್ ನಿಧಾನಗತಿಯ ಬ್ಯಾಟಿಂಗ್ ಪ್ರದರ್ಶಿಸಿದರು. ಪರಿಣಾಮ ಪವರ್​ಪ್ಲೇನಲ್ಲಿ ಕೇವಲ 37 ರನ್​ಗಳಿಸಲಷ್ಟೇ ಶಕ್ತರಾದರು.

ಈ ಹಂತದಲ್ಲಿ ನಿಹಾಲ್ (7) ಔಟಾದರೆ, ಆ ಬಳಿಕ ಬಂದ ವಿನಯ್ ಸಾಗರ್ (12) ಹಾಗೂ ಅಭಿನವ್ ಮನೋಹರ್ (2) ಕೂಡ ಬೇಗನೆ ನಿರ್ಗಮಿಸಿದರು. ಇನ್ನು ಶರತ್ 18 ರನ್​ಗಳಿಸಿದರೆ, ನಾಯಕ ಶ್ರೇಯಸ್ ಗೋಪಾಲ್ 16 ರನ್​ಗಳಿಸಿ ವಿಕೆಟ್ ಒಪ್ಪಿಸಿದರು. ಇನ್ನು ಅಂತಿಮ ಹಂತದಲ್ಲಿ ಪ್ರಣವ್ ಭಾಟಿಯಾ 7 ಎಸೆತಗಳಲ್ಲಿ 16 ರನ್ ಬಾರಿಸುವ ಮೂಲಕ ಶಿವಮೊಗ್ಗ ಲಯನ್ಸ್ ತಂಡದ ಮೊತ್ತವನ್ನು 149-7 ಕ್ಕೆ ತಂದು ನಿಲ್ಲಿಸಿದರು.

150 ರನ್​ಗಳ ಸುಲಭ ಗುರಿ ಬೆನ್ನತ್ತಿದ ಹುಬ್ಬಳ್ಳಿ ಟೈಗರ್ಸ್ ತಂಡ ಕೂಡ ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ಲವ್ನೀತ್ ಸಿಸೋಡಿಯಾ 13 ರನ್​ಗಳಿಸಿ 2ನೇ ಓವರ್​ನಲ್ಲೇ ನಿರ್ಗಮಿಸಿದರು. ಆದರೆ ಮತ್ತೊಂದೆಡೆ ಸ್ಪೋಟಕ ದಾಂಡಿಗ ಮೊಹಮ್ಮದ್ ತಾಹ ಅಬ್ಬರಿಸಲಾರಂಭಿಸಿದರು.

ಇತ್ತ ತಾಹ ಅಬ್ಬರ ಆರಂಭವಾಗುತ್ತಿದ್ದಂತೆ ಶಿವಮೊಗ್ಗ ಲಯನ್ಸ್ ಬೌಲರ್​ಗಳು ಲಯ ತಪ್ಪಿದರು. ಇದರ ಲಾಭವನ್ನು ಪಡೆಯುವಲ್ಲಿ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕೃಷ್ಣನ್ ಶ್ರೀಜಿತ್ ಕೂಡ ಯಶಸ್ವಿಯಾದರು.

ಪರಿಣಾಮ ಮೊಹಮ್ಮದ್ ತಾಹ ಕೇವಲ 38 ಎಸೆತಗಳಲ್ಲಿ 8 ಭರ್ಜರಿ ಸಿಕ್ಸ್ ಹಾಗೂ 1 ಫೋರ್​ನೊಂದಿಗೆ 69 ರನ್ ಬಾರಿಸಿದರು. ಇನ್ನು ಶ್ರೀಜಿತ್ 39 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ ಅಜೇಯ 61 ರನ್​ ಸಿಡಿಸಿ 14 ಓವರ್​ಗಳಲ್ಲಿ ತಂಡವನ್ನು ಗುರಿ ಮುಟ್ಟಿಸಿದರು. ಈ ಗೆಲುವಿನೊಂದಿಗೆ ಮನೀಶ್ ಪಾಂಡೆ ನೇತೃತ್ವದ ಹುಬ್ಬಳ್ಳಿ ಟೈಗರ್ಸ್ ತಂಡವು ಫೈನಲ್​ಗೆ ಪ್ರವೇಶಿಸಿದೆ.

andolanait

Recent Posts

ಸೆಲ್ಫಿ ವಿಡಿಯೋ ಮಾಡಿ ಆಟೋ ಚಾಲಕ ಆತ್ನಹತ್ಯೆಗೆ ಯತ್ನ

ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…

7 hours ago

ಮಂಡ್ಯದಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…

9 hours ago

ರಾಜ್ಯದಲ್ಲಿ ಮೂರು ದಿನ ದಟ್ಟ ಮಂಜು ಕವಿದ ವಾತಾವರಣ: ತೀವ್ರ ಚಳಿ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…

9 hours ago

ಯೂರಿಯಾ ಗೊಬ್ಬರ ತಿಂದು 11 ಮೇಕೆಗಳು ಸಾವು

ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…

10 hours ago

ಚಾಮರಾಜನಗರ| ಹುಚ್ಚುನಾಯಿ ದಾಳಿಯಿಂದ 7 ಮಂದಿಗೆ ಗಾಯ

ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…

10 hours ago

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

11 hours ago