ಕ್ರೀಡೆ

ಮಹಾರಾಜ ಟ್ರೋಫಿ 2023: ಫೈನಲ್​ಗೆ ಲಗ್ಗೆಯಿಟ್ಟ ಹುಬ್ಬಳ್ಳಿ ಟೈಗರ್ಸ್​

ಬೆಂಗಳೂರು : ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಮಹಾರಾಜ ಟ್ರೋಫಿ ಟಿ20 ಟೂರ್ನಿಯ ಸೆಮಿಫೈನಲ್​ನಲ್ಲಿ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿ ಹುಬ್ಬಳ್ಳಿ ಟೈಗರ್ಸ್ ತಂಡವು ಫೈನಲ್​ಗೆ ಪ್ರವೇಶಿಸಿದೆ. ಶಿವಮೊಗ್ಗ ಲಯನ್ಸ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ನಾಯಕ ಮನೀಶ್ ಪಾಂಡೆ ಬೌಲಿಂಗ್ ಮಾಡುವ ನಿರ್ಧಾರ ತೆಗೆದುಕೊಂಡರು.

ಅದರಂತೆ ಮೊದಲು ಬ್ಯಾಟ್ ಮಾಡಿದ ಶಿವಮೊಗ್ಗ ಲಯನ್ಸ್ ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ರೋಹನ್ ಕದಮ್ ಹಾಗೂ ನಿಹಾಲ್ ಉಳ್ಳಾಲ್ ನಿಧಾನಗತಿಯ ಬ್ಯಾಟಿಂಗ್ ಪ್ರದರ್ಶಿಸಿದರು. ಪರಿಣಾಮ ಪವರ್​ಪ್ಲೇನಲ್ಲಿ ಕೇವಲ 37 ರನ್​ಗಳಿಸಲಷ್ಟೇ ಶಕ್ತರಾದರು.

ಈ ಹಂತದಲ್ಲಿ ನಿಹಾಲ್ (7) ಔಟಾದರೆ, ಆ ಬಳಿಕ ಬಂದ ವಿನಯ್ ಸಾಗರ್ (12) ಹಾಗೂ ಅಭಿನವ್ ಮನೋಹರ್ (2) ಕೂಡ ಬೇಗನೆ ನಿರ್ಗಮಿಸಿದರು. ಇನ್ನು ಶರತ್ 18 ರನ್​ಗಳಿಸಿದರೆ, ನಾಯಕ ಶ್ರೇಯಸ್ ಗೋಪಾಲ್ 16 ರನ್​ಗಳಿಸಿ ವಿಕೆಟ್ ಒಪ್ಪಿಸಿದರು. ಇನ್ನು ಅಂತಿಮ ಹಂತದಲ್ಲಿ ಪ್ರಣವ್ ಭಾಟಿಯಾ 7 ಎಸೆತಗಳಲ್ಲಿ 16 ರನ್ ಬಾರಿಸುವ ಮೂಲಕ ಶಿವಮೊಗ್ಗ ಲಯನ್ಸ್ ತಂಡದ ಮೊತ್ತವನ್ನು 149-7 ಕ್ಕೆ ತಂದು ನಿಲ್ಲಿಸಿದರು.

150 ರನ್​ಗಳ ಸುಲಭ ಗುರಿ ಬೆನ್ನತ್ತಿದ ಹುಬ್ಬಳ್ಳಿ ಟೈಗರ್ಸ್ ತಂಡ ಕೂಡ ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ಲವ್ನೀತ್ ಸಿಸೋಡಿಯಾ 13 ರನ್​ಗಳಿಸಿ 2ನೇ ಓವರ್​ನಲ್ಲೇ ನಿರ್ಗಮಿಸಿದರು. ಆದರೆ ಮತ್ತೊಂದೆಡೆ ಸ್ಪೋಟಕ ದಾಂಡಿಗ ಮೊಹಮ್ಮದ್ ತಾಹ ಅಬ್ಬರಿಸಲಾರಂಭಿಸಿದರು.

ಇತ್ತ ತಾಹ ಅಬ್ಬರ ಆರಂಭವಾಗುತ್ತಿದ್ದಂತೆ ಶಿವಮೊಗ್ಗ ಲಯನ್ಸ್ ಬೌಲರ್​ಗಳು ಲಯ ತಪ್ಪಿದರು. ಇದರ ಲಾಭವನ್ನು ಪಡೆಯುವಲ್ಲಿ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕೃಷ್ಣನ್ ಶ್ರೀಜಿತ್ ಕೂಡ ಯಶಸ್ವಿಯಾದರು.

ಪರಿಣಾಮ ಮೊಹಮ್ಮದ್ ತಾಹ ಕೇವಲ 38 ಎಸೆತಗಳಲ್ಲಿ 8 ಭರ್ಜರಿ ಸಿಕ್ಸ್ ಹಾಗೂ 1 ಫೋರ್​ನೊಂದಿಗೆ 69 ರನ್ ಬಾರಿಸಿದರು. ಇನ್ನು ಶ್ರೀಜಿತ್ 39 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ ಅಜೇಯ 61 ರನ್​ ಸಿಡಿಸಿ 14 ಓವರ್​ಗಳಲ್ಲಿ ತಂಡವನ್ನು ಗುರಿ ಮುಟ್ಟಿಸಿದರು. ಈ ಗೆಲುವಿನೊಂದಿಗೆ ಮನೀಶ್ ಪಾಂಡೆ ನೇತೃತ್ವದ ಹುಬ್ಬಳ್ಳಿ ಟೈಗರ್ಸ್ ತಂಡವು ಫೈನಲ್​ಗೆ ಪ್ರವೇಶಿಸಿದೆ.

andolanait

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

14 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

14 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

14 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

14 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

15 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

15 hours ago