ಕ್ರೀಡೆ

Maharaja trophy 2024: ಶಿವಮೊಗ್ಗ ಲಯನ್ಸ್‌ ವಿರುದ್ಧ 7 ರನ್‌ಗಳಿಂದ ಗೆದ್ದ ಮೈಸೂರು ವಾರಿಯರ್ಸ್‌

ಬೆಂಗಳೂರು: ಇಲ್ಲಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮಹಾರಾಜ ಟ್ರೋಫಿ 2024ರ 2ನೇ ಪಂದ್ಯದಲ್ಲಿ ಮೈಸೂರು ವಾರಿಯರ್ಸ್‌ ತಂಡ ಶಿವಮೊಗ್ಗ ಲಯನ್ಸ್‌ ವಿರುದ್ಧ 7 ರನ್‌ಗಳ ಅಂತರದಿಂದ ಗೆದ್ದು ಶುಭಾರಂಭ ಮಾಡಿದೆ.

ಈ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಮೈಸೂರು ವಾರಿಯರ್ಸ್‌ ತಂಡ ನಿಗದಿತ 20 ಓವರ್‌ ಗಳಲ್ಲಿ 8 ವಿಕೆಟ್‌ ಕಳೆದುಕೊಂಡು 159 ರನ್‌ ಬಾರಿಸಿ ಎದುರಾಳಿ ತಂಡಕ್ಕೆ 160 ರನ್‌ಗಳ ಸ್ಪರ್ಧಾತ್ಮಕ ಗುರಿ ನೀಡಿತು. ಈ ಮೊತ್ತ ಬೆನ್ನತ್ತಿದ ಶಿವಮೊಗ್ಗ ಲಯನ್ಸ್‌ಗೆ ಮಳೆ ಕಾಡಿತು. ಮಳೆಯಿಂದಾಗಿ ಪಂದ್ಯವನ್ನು 9 ಓವರ್‌ ಗಳಿಗೆ ಇಳಿಸಲಾಯಿತು ಮತ್ತು ಶಿವಮೊಗ್ಗ ಲಯನ್ಸ್‌ಗೆ 88 ರನ್‌ ಗುರಿ ನೀಡಿತು. ಈ ಮೊತ್ತ ಬೆನ್ನತ್ತಿದ ಶಿವಮೊಗ್ಗ 9 ಓವರ್‌ಗಳಲ್ಲಿ ಐದು ವಿಕೆಟ್‌ ಕಳೆದುಕೊಂಡು 80 ರನ್‌ ಗಳಿಸಿ 7 ರನ್‌ ಗಳ ಅಂತರದಿಂದ ಮೈಸೂರು ವಾರಿಯರ್ಸ್‌ ವಿರುದ್ಧ ಸೋಲು ಕಂಡಿತು.

ಮೈಸೂರು ವಾರಿಯರ್ಸ್ ಇನ್ನಿಂಗ್ಸ್:‌ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಮೈಸೂರು ವಾರಿಯರ್ಸ್‌ ತಂಡಕ್ಕೆ ಬಿರುಸಿನ ಆರಂಭ ಸಿಗಲಿಲ್ಲ. ಆರಂಭಿಕ ಬ್ಯಾಟರ್‌ ಕಾರ್ತಿಕ್‌ ಸಿಎ 3(8), ಹಾಗೂ ಎಸ್‌ಯು ಕಾರ್ತಿಕ್‌ 18(20) ರನ್‌ ಗಳಿಸಿ ಬೇಗನೇ ಔಟಾದರು. ಬಳಿಕ ಬಂದ ನಾಯಕ ಕರುಣ್‌ ನಾಯರ್‌ 18(16) ಬೇಗನೆ ಪೆವಿಲಿಯನ್‌ ಸೇರಿದರು.

ಮೊದಲ ಪಂದ್ಯದಲ್ಲೇ ವಾರಿಯರ್ಸ್‌ ತಂಡಕ್ಕೆ ಮಧ್ಯಮ ಕ್ರಮಾಂಕ ಕೈ ಕೊಟ್ಟಿತು. ಶಮಿತ್‌ ದ್ರಾವಿಡ್‌ 7(9), ಸುಮಿತ್‌ ಕುಮಾರ್‌ 14(14), ದರ್ಮಾನಿ 1(2), ಜೆ ಸುಚಿತ್‌ 11(9),ಕೆ ಗೌತಮ್‌ 21(19) ರನ್‌ ಗಳಿಸಿದರು.

ಕೊನೆಯಲ್ಲಿ ಒಂದಾದ ಮನೋಜ್‌ ಬಂಡ್ಗೆ ಹಾಗೂ ಕಿಶನ್‌ ಔಟಾಗದೇ ತಂಡವನ್ನು 150ರ ಗಡಿ ದಾಟಿಸಿದರು. ಬಂಡ್ಗೆ 42(16) ಮತ್ತು ಕಿಶನ್‌ 12(8) ರನ್‌ ಗಳಿಸಿದರು.

ಶಿವಮೊಗ್ಗ ಪರ ಹಾರ್ದಿಕ್‌ ರಾಜ್‌, ಪ್ರದೀಪ್‌ ಹಾಗೂ ಅವಿನಾಶ್‌ ತಲಾ ಎರಡು ವಿಕೆಟ್‌, ಆನಂದ್‌ ಒಂದು ವಿಕೆಟ್‌ ಪಡೆದು ಗಮನ ಸೆಳೆದರು.

ಶಿವಮೊಗ್ಗ ಇನ್ನಿಂಗ್ಸ್‌: 9 ಓವರ್‌ಗಳಲ್ಲಿ 88 ರನ್‌ ಗುರಿ ಬೆನ್ನತ್ತಿದ ಲಯನ್ಸ್‌ಗೆ ಅಭಿನವ್‌ ಮನೋಹರ್‌ ಹೊರತುಪಡಿಸಿ ಬೇರಾರಿಂದಲೂ ನಿರೀಕ್ಷಿತಾ ಆಟ ಕಂಡುಬರಲಿಲ್ಲ. ಮನೋಹರ್‌ 29 ಎಸೆತಗಳಲ್ಲಿ 8 ಬೌಂಡರಿ 2 ಸಿಕ್ಸರ್‌ ಸಹಿತ 52 ರನ್‌ ಬಾರಿಸಿ ಔಟಾದರು. ಬಳಿಕ ಬಂದ ಯಾರಿಂದಲೂ ತಂಡವನ್ನು ಗೆಲ್ಲಿಸಿಕೊಡಲು ಸಾಧ್ಯವಾಗಲಿಲ್ಲ. ನಾಯಕ ನಿಹಾಲ್‌ ಉಲ್ಲಾಳ್‌ ಡಕ್‌ಔಟ್‌ ಆದರೆ, ರೋಹಿತ್‌ 12(10) ರನ್‌ ಗಳಿಸಿ ನಿರ್ಗಮಿಸಿದರು. ಶಿವರಾಜ್‌ ಟಕ್‌ಔಟ್‌, ಅವಿನಾಶ್‌ ಡಿ 12(10) ರನ್‌ ಬಾರಿಸಿದರೇ, ಭುವನ್‌ ಔಟಾಗದೇ ಉಳಿದರು.

ಮೈಸೂರು ವಾರಿಯರ್ಸ್‌ ಪರ ಜೆ ಸುಜಿತ್‌ ಎರಡು, ವಿದ್ಯಾಧರ್‌ ಪಾಟೀಲ್‌ ಹಾಗೂ ಗೌತಮ್‌ ಮಿಶ್ರಾ ತಲಾ ಒಂದೊಂದು ವಿಕೆಟ್‌ ಪಡೆದರು.

ಪಂದ್ಯಶ್ರೇಷ್ಠ: ಮನೋಜ್‌ ಬಂಡ್ಗೆ

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಜೆಡಿಎಸ್‌ ಎಂಎಲ್‌ಸಿ ಸೂರಜ್‌ ರೇವಣ್ಣಗೆ ಬಿಗ್‌ ಶಾಕ್‌

ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ಪ್ರಕರಣವನ್ನು ಕೈಬಿಡುವಂತೆ ಕೋರಿ, ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ…

3 hours ago

ಟಿ.ನರಸೀಪುರ| ಆನೆ ದಾಳಿಗೆ ರೈತ ಬಲಿ

ಟಿ.ನರಸೀಪುರ: ಕಾಡಾನೆ ದಾಳಿಗೆ ಸಿಲುಕಿ ರೈತರೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡು ಪೊಲೀಸ್‌ ಠಾಣೆ ವ್ಯಾಪ್ತಿಯ…

6 hours ago

ಮೈಸೂರು ನಗರ ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಪೂರೈಸುತ್ತಿದ್ದ ಇಬ್ಬರ ಬಂಧನ

ಮೈಸೂರು: ಮೈಸೂರು ನಗರದ ಸಿಸಿಬಿ ಪೊಲೀಸರು ಇಂದು ಮಾದಕ ವಸ್ತುಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…

7 hours ago

ಮಕ್ಕಳು ಪಠ್ಯೇತರ ಚಟುವಟಿಕೆಯಲ್ಲೂ ಆಸಕ್ತಿ ಬೆಳೆಸಿಕೊಳ್ಳಿ: ದಿನೇಶ್‌ ಗೂಳಿಗೌಡ

ಮಂಡ್ಯ: ಮಕ್ಕಳು ಪಠ್ಯೇತರ ಚಟುವಟಿಕೆಗಳಾದ ಚಿತ್ರಕಲೆ, ಸಂಗೀತ, ಕ್ರೀಡಾ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ವಿಧಾನಪರಿಷತ್‌ ಸದಸ್ಯ ಹಾಗೂ ಕರ್ನಾಟಕ ರಾಜ್ಯ…

7 hours ago

ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ: ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.…

7 hours ago

ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣ: ಅಂತಿಮ ಹಂತಕ್ಕೆ ತಲುಪಿದ ಎಸ್‌ಐಟಿ ತನಿಖೆ

ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ವಿಶೇಷ ತನಿಖಾ ತಂಡ ತನಿಖೆಯನ್ನು ಪೂರ್ಣಗೊಳಿಸಿ ವರದಿ…

7 hours ago