ಕ್ರೀಡೆ

Maharaja trophy 2024: ಶಿವಮೊಗ್ಗ ಲಯನ್ಸ್‌ ವಿರುದ್ಧ 7 ರನ್‌ಗಳಿಂದ ಗೆದ್ದ ಮೈಸೂರು ವಾರಿಯರ್ಸ್‌

ಬೆಂಗಳೂರು: ಇಲ್ಲಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮಹಾರಾಜ ಟ್ರೋಫಿ 2024ರ 2ನೇ ಪಂದ್ಯದಲ್ಲಿ ಮೈಸೂರು ವಾರಿಯರ್ಸ್‌ ತಂಡ ಶಿವಮೊಗ್ಗ ಲಯನ್ಸ್‌ ವಿರುದ್ಧ 7 ರನ್‌ಗಳ ಅಂತರದಿಂದ ಗೆದ್ದು ಶುಭಾರಂಭ ಮಾಡಿದೆ.

ಈ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಮೈಸೂರು ವಾರಿಯರ್ಸ್‌ ತಂಡ ನಿಗದಿತ 20 ಓವರ್‌ ಗಳಲ್ಲಿ 8 ವಿಕೆಟ್‌ ಕಳೆದುಕೊಂಡು 159 ರನ್‌ ಬಾರಿಸಿ ಎದುರಾಳಿ ತಂಡಕ್ಕೆ 160 ರನ್‌ಗಳ ಸ್ಪರ್ಧಾತ್ಮಕ ಗುರಿ ನೀಡಿತು. ಈ ಮೊತ್ತ ಬೆನ್ನತ್ತಿದ ಶಿವಮೊಗ್ಗ ಲಯನ್ಸ್‌ಗೆ ಮಳೆ ಕಾಡಿತು. ಮಳೆಯಿಂದಾಗಿ ಪಂದ್ಯವನ್ನು 9 ಓವರ್‌ ಗಳಿಗೆ ಇಳಿಸಲಾಯಿತು ಮತ್ತು ಶಿವಮೊಗ್ಗ ಲಯನ್ಸ್‌ಗೆ 88 ರನ್‌ ಗುರಿ ನೀಡಿತು. ಈ ಮೊತ್ತ ಬೆನ್ನತ್ತಿದ ಶಿವಮೊಗ್ಗ 9 ಓವರ್‌ಗಳಲ್ಲಿ ಐದು ವಿಕೆಟ್‌ ಕಳೆದುಕೊಂಡು 80 ರನ್‌ ಗಳಿಸಿ 7 ರನ್‌ ಗಳ ಅಂತರದಿಂದ ಮೈಸೂರು ವಾರಿಯರ್ಸ್‌ ವಿರುದ್ಧ ಸೋಲು ಕಂಡಿತು.

ಮೈಸೂರು ವಾರಿಯರ್ಸ್ ಇನ್ನಿಂಗ್ಸ್:‌ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಮೈಸೂರು ವಾರಿಯರ್ಸ್‌ ತಂಡಕ್ಕೆ ಬಿರುಸಿನ ಆರಂಭ ಸಿಗಲಿಲ್ಲ. ಆರಂಭಿಕ ಬ್ಯಾಟರ್‌ ಕಾರ್ತಿಕ್‌ ಸಿಎ 3(8), ಹಾಗೂ ಎಸ್‌ಯು ಕಾರ್ತಿಕ್‌ 18(20) ರನ್‌ ಗಳಿಸಿ ಬೇಗನೇ ಔಟಾದರು. ಬಳಿಕ ಬಂದ ನಾಯಕ ಕರುಣ್‌ ನಾಯರ್‌ 18(16) ಬೇಗನೆ ಪೆವಿಲಿಯನ್‌ ಸೇರಿದರು.

ಮೊದಲ ಪಂದ್ಯದಲ್ಲೇ ವಾರಿಯರ್ಸ್‌ ತಂಡಕ್ಕೆ ಮಧ್ಯಮ ಕ್ರಮಾಂಕ ಕೈ ಕೊಟ್ಟಿತು. ಶಮಿತ್‌ ದ್ರಾವಿಡ್‌ 7(9), ಸುಮಿತ್‌ ಕುಮಾರ್‌ 14(14), ದರ್ಮಾನಿ 1(2), ಜೆ ಸುಚಿತ್‌ 11(9),ಕೆ ಗೌತಮ್‌ 21(19) ರನ್‌ ಗಳಿಸಿದರು.

ಕೊನೆಯಲ್ಲಿ ಒಂದಾದ ಮನೋಜ್‌ ಬಂಡ್ಗೆ ಹಾಗೂ ಕಿಶನ್‌ ಔಟಾಗದೇ ತಂಡವನ್ನು 150ರ ಗಡಿ ದಾಟಿಸಿದರು. ಬಂಡ್ಗೆ 42(16) ಮತ್ತು ಕಿಶನ್‌ 12(8) ರನ್‌ ಗಳಿಸಿದರು.

ಶಿವಮೊಗ್ಗ ಪರ ಹಾರ್ದಿಕ್‌ ರಾಜ್‌, ಪ್ರದೀಪ್‌ ಹಾಗೂ ಅವಿನಾಶ್‌ ತಲಾ ಎರಡು ವಿಕೆಟ್‌, ಆನಂದ್‌ ಒಂದು ವಿಕೆಟ್‌ ಪಡೆದು ಗಮನ ಸೆಳೆದರು.

ಶಿವಮೊಗ್ಗ ಇನ್ನಿಂಗ್ಸ್‌: 9 ಓವರ್‌ಗಳಲ್ಲಿ 88 ರನ್‌ ಗುರಿ ಬೆನ್ನತ್ತಿದ ಲಯನ್ಸ್‌ಗೆ ಅಭಿನವ್‌ ಮನೋಹರ್‌ ಹೊರತುಪಡಿಸಿ ಬೇರಾರಿಂದಲೂ ನಿರೀಕ್ಷಿತಾ ಆಟ ಕಂಡುಬರಲಿಲ್ಲ. ಮನೋಹರ್‌ 29 ಎಸೆತಗಳಲ್ಲಿ 8 ಬೌಂಡರಿ 2 ಸಿಕ್ಸರ್‌ ಸಹಿತ 52 ರನ್‌ ಬಾರಿಸಿ ಔಟಾದರು. ಬಳಿಕ ಬಂದ ಯಾರಿಂದಲೂ ತಂಡವನ್ನು ಗೆಲ್ಲಿಸಿಕೊಡಲು ಸಾಧ್ಯವಾಗಲಿಲ್ಲ. ನಾಯಕ ನಿಹಾಲ್‌ ಉಲ್ಲಾಳ್‌ ಡಕ್‌ಔಟ್‌ ಆದರೆ, ರೋಹಿತ್‌ 12(10) ರನ್‌ ಗಳಿಸಿ ನಿರ್ಗಮಿಸಿದರು. ಶಿವರಾಜ್‌ ಟಕ್‌ಔಟ್‌, ಅವಿನಾಶ್‌ ಡಿ 12(10) ರನ್‌ ಬಾರಿಸಿದರೇ, ಭುವನ್‌ ಔಟಾಗದೇ ಉಳಿದರು.

ಮೈಸೂರು ವಾರಿಯರ್ಸ್‌ ಪರ ಜೆ ಸುಜಿತ್‌ ಎರಡು, ವಿದ್ಯಾಧರ್‌ ಪಾಟೀಲ್‌ ಹಾಗೂ ಗೌತಮ್‌ ಮಿಶ್ರಾ ತಲಾ ಒಂದೊಂದು ವಿಕೆಟ್‌ ಪಡೆದರು.

ಪಂದ್ಯಶ್ರೇಷ್ಠ: ಮನೋಜ್‌ ಬಂಡ್ಗೆ

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

16 mins ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

4 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

4 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

4 hours ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

4 hours ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

4 hours ago