ಕ್ರೀಡೆ

ಮಹಾರಾಜ ಟ್ರೋಫಿ: ಟೂರ್ನಿಯ ಮೊದಲ ಗೆಲುವಿನ ರುಚಿ ಕಂಡ ಬೆಂಗಳೂರು ಬ್ಲಾಸ್ಟರ್ಸ್!

ಬೆಂಗಳೂರು : ನಾಯಕ ಮಯಾಂಕ್ ಅಗರ್ವಾಲ್ ಅವರ ಅಮೋಘ ಶತಕದ ಬಲದಿಂದಾಗಿ ಬೆಂಗಳೂರು ಬ್ಲಾಸ್ಟರ್ಸ್ ತಂಡವು ಮೈಸೂರು ವಾರಿಯರ್ಸ್‌ ವಿರುದ್ಧ 10 ರನ್‌ಗಳ ಅಂತರದ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದೆ. ಆ ಮೂಲಕ ಮಹಾರಾಜ ಟೂರ್ನಿಯ 2023ನೇ ಆವೃತ್ತಿಯಲ್ಲಿ ಮೊದಲ ಗೆಲುವು ಸಾಧಿಸಿದೆ.

ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ಮಾಡಿದ ಬೆಂಗಳೂರು ಬ್ಲಾಸ್ಟರ್ಸ್ ತಂಡಕ್ಕೆ ನಾಯಕ ಹಾಗೂ ಆರಂಭಿಕ ಆಟಗಾರ ಮಯಾಂಕ್ ಅಗರ್ವಾಲ್  (57 ಎಸೆತ 105 ರನ್‌) ಗಳಿಸಿ ಔಟಾಗಿದ್ದಾರೆ. ಈ ಸ್ಪೋಟಕ ಇನ್ನಿಂಗ್ಸ್‌ನಲ್ಲಿ 9 ಬೌಂಡರಿ ಹಾಗೂ 6 ಸಿಕ್ಸರ್‌ಗಳು ಒಳಗೊಂಡಿತ್ತು. 19ನೇ ಓವರ್‌ನಲ್ಲಿ ಮಯಾಂಕ್ ಗೌತಮ್ ಮಿಶ್ರಾಗೆ ವಿಕೆಟ್ ಒಪ್ಪಿಸುವ ಮೂಲಕ ತಮ್ಮ ಇನ್ನಿಂಗ್ಸ್ ಅಂತ್ಯಗೊಳಿಸಿದರು. ಇನ್ನು ಬೆಂಗಳೂರು ಬ್ಲಾಸ್ಟರ್ಸ್ 200ರೆ ಗಡಿ ದಾಟಲು ಕಾರಣವಾದ ಮತ್ತೋರ್ವ ಆಟಗಾರನೆಂದರೆ ಸೂರಜ್ ಅಹುಜಾ. ಕೇವಲ 10 ಎಸೆತಗಳಲ್ಲಿ 35 ರನ್‌ಗಳನ್ನು ಬಾರಿಸಿ ಮಿಂಚಿದರು. ಹೀಗಾಗಿ ಬ್ಲಾಸ್ಟರ್ಸ್ ತಂಡ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್‌ ಕಳೆದುಕೊಂಡು 212 ರನ್‌ಗಳನ್ನು ಗಳಿಸಿತು.

ಇನ್ನು ಈ ಮೊತ್ತವನ್ನು ಬೆನ್ನಟ್ಟಿದ ಮೈಸೂರು ವಾರಿಯರ್ಸ್ ಅದ್ಭುತ ಆರಂಭ ಪಡೆಯಿತು. ಮೊದಲ ವಿಕೆಟ್‌ಗೆ 4.5 ಓವರ್‌ಗಳಲ್ಲಿ 60 ರನ್‌ಗಳಿಸುವ ಮೂಲಕ ದಿಟ್ಟವಾಗಿ ರನ್ ಬೆನ್ನಟ್ಟುವ ಮುನ್ಸುಆಚನೆ ನೀಡಿತು. ಆರಂಭಿಕ ಆಟಗಾರ ಎಸ್‌ಯು ಕಾರ್ತಿಕ್  70 (30) ತಂಡಕ್ಕೆ ಚೇತರಿಕೆ ನೀಡಿದರು. ಅವರಿಗೆ ಜೊತೆಯಾಗಿ ಸಮರ್ಥ್‌ 35(16) ರನ್‌ ಹೊಳೆ ಹರಿಸಿದರು.

ಮೈಸೂರು ವಾರಿಯರ್ಸ್ ಎರಡನೇ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್‌ಗೆ ಇಳಿದಾಗ ಬೌಂಡರಿಗಳ ಮಳೆ ಸುರಿಯುತ್ತಿತ್ತು, ಏಕೆಂದರೆ ಆರಂಭಿಕರಾದ ಮತ್ತು ರವಿಕುಮಾರ್ ಸಮರ್ಥ್ (16 ಎಸೆತಗಳಲ್ಲಿ 35) ಸಮರ್ಥ್ ಔಟಾಗುವ ಮೊದಲು 29 ಎಸೆತಗಳಲ್ಲಿ 60 ರನ್‌ಗಳ ಜೊತೆಯಾಟ ನಡೆಸಿದರು. ಕಾರ್ತಿಕ್ 22 ಎಸೆತಗಳಲ್ಲಿ ಪಂದ್ಯಾವಳಿಯ ಅತ್ಯಂತ ವೇಗದ ಅರ್ಧಶತಕವನ್ನು ತಂದಾಗ ದಾಳಿಯು ಮುಂದುವರೆಯಿತು, ಆರು ಓವರ್‌ಗಳ ನಂತರ ತಂಡವನ್ನು 88-1 ಕ್ಕೆ ಕೊಂಡೊಯ್ಯಿತು, ಇದು ಈ ಆವೃತ್ತಿಯಲ್ಲಿ ಪವರ್‌ಪ್ಲೇಯ ಕೊನೆಯಲ್ಲಿ ಅತ್ಯಧಿಕ ಸ್ಕೋರ್ ಆಗಿತ್ತು.

ನಾಯಕ ಕರುಣ್‌ ನಾಯರ್‌ 32(34) ಮಂದಗತಿಯ ಆಟ ತಂಡಕ್ಕೆ ಚೇತರಿಕೆ ನೀಡಿತಾದರು ಗೆಲ್ಲುವಲ್ಲಿ ವಿಫಲವಾಯಿತು. ಅಂತಿಮವಾಗಿ 20 ಓವರ್‌ಗಳಲ್ಲಿ 8 ವಿಕೆಟ್‌ ಕಳೆದುಕೊಂಡು 202ರನ್‌ ಗಳಿಸಲಷ್ಟೇ ಶಕ್ತವಾಯಿತು. ಆಮೂಲಕ ಬೆಂಗಳೂರು ತನ್ನ ಮೊದಲ ಗೆಲುವನ್ನು ದಾಖಲಿಸಿತು.

ಸಂಕ್ಷಿಪ್ತ ಸ್ಕೋರ್‌

ಕಲ್ಯಾಣಿ ಬೆಂಗಳೂರು ಬ್ಲಾಸ್ಟರ್ಸ್ 20 ಓವರ್‌ಗಳಲ್ಲಿ 212-4: ಮಯಾಂಕ್ ಅಗರ್ವಾಲ್ 105( 57) 105, ಸೂರಜ್ ಅಹುಜಾ  35*(10), ಡಿ ನಿಶ್ಚಲ್  29(25), ಜಗದೀಶ ಸುಚಿತ್ 2-34, ಮೋನಿಶ್ ರೆಡ್ಡಿ 1-32, ಗೌತಮ್ ಮಿಶ್ರಾ 1-32

ಮೈಸೂರು ವಾರಿಯರ್ಸ್ 20 ಓವರ್‌ಗಳಲ್ಲಿ 202-8: ಎಸ್‌ಯು ಕಾರ್ತಿಕ್ 70(30), ರವಿಕುಮಾರ್ ಸಮರ್ಥ್ 35(16), ಕರುಣ್ ನಾಯರ್ 32(34), ಮೊಹ್ಸಿನ್ ಖಾನ್ 4-35, ಸರ್ಫರಾಜ್ ಅಶ್ರಫ್ 2-23, ಎಲ್ ಆರ್ ಕುಮಾರ್ 1-46

ಪಂದ್ಯಶ್ರೇಷ್ಠ : ಮಯಾಂಕ್‌ ಅಗರ್ವಾಲ್‌

andolanait

Recent Posts

ಯುಗಾದಿ ವಿಶೇಷ | ಧಾರವಾಡದ ಮಣ್ಣಿನಲ್ಲಿ ಹಸಿರು ಚಿಗುರಿದ ಕಂಪನ

ಭಾಗ್ಯಜ್ಯೋತಿ ಹಿರೇಮಠ, ಗುಡಗೇರಿ, ಕಥೆಗಾರ್ತಿ ಮತ್ತು ಕವಯಿತ್ರಿ ಉತ್ತರ ಕರ್ನಾಟಕದ ಬಯಲು ಸೀಮೆಯಲ್ಲಿ ಚೈತ್ರದ ಬಿಸಿಲು ಅಪ್ಪಳಿಸುತ್ತಿದ್ದಂತೆಯೇ ಗಾಳಿಯಲ್ಲಿ ಒಣಗಿದ…

3 mins ago

ಬಡತನವಿದ್ದರೂ ಎಲ್ಲರೂ ಒಟ್ಟಾಗಿ ಹಬ್ಬ ಆಚರಿಸುವ ಉಗಾದಿ ಸುಖ

ಜೇನುಕುರುಬರ ಡೋಬಿ, ಮಾವುತ ಮತ್ತು ಗಾಯಕ ದುಬಾರೆ ಆನೆ ಶಿಬಿರ ಬಡತನವಿದ್ದರೂ ಎಲ್ಲರೂ ಒಟ್ಟಾಗಿ ಹಬ್ಬ ಆಚರಿಸುವ ಉಗಾದಿ ಸುಖ…

40 mins ago

ಮಂಡ್ಯ | ಕಬ್ಬಿನ ಗದ್ದೆಯಲ್ಲಿ ಮೂರು ಚಿರತೆ ಮರಿಗಳು ಪತ್ತೆ

ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…

14 hours ago

ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ದಾಳಿ : ಇರಾನಿನ ಕ್ಷಿಪಣಿ ತಾಣ ನಾಶ

ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…

15 hours ago

ಮರ್ಯಾದಾ ಹತ್ಯೆ ನಿಷೇಧ ಮಸೂದೆ ಮಂಡನೆ

ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…

16 hours ago

ಮೈಸೂರು ನಗರದಲ್ಲಿ ಮಳೆ ; ತಂಪಾದ ಇಳೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…

17 hours ago