ಕ್ರೀಡೆ

ಮಹಾರಾಜ ಟ್ರೋಫಿ: ಟೂರ್ನಿಯ ಮೊದಲ ಗೆಲುವಿನ ರುಚಿ ಕಂಡ ಬೆಂಗಳೂರು ಬ್ಲಾಸ್ಟರ್ಸ್!

ಬೆಂಗಳೂರು : ನಾಯಕ ಮಯಾಂಕ್ ಅಗರ್ವಾಲ್ ಅವರ ಅಮೋಘ ಶತಕದ ಬಲದಿಂದಾಗಿ ಬೆಂಗಳೂರು ಬ್ಲಾಸ್ಟರ್ಸ್ ತಂಡವು ಮೈಸೂರು ವಾರಿಯರ್ಸ್‌ ವಿರುದ್ಧ 10 ರನ್‌ಗಳ ಅಂತರದ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದೆ. ಆ ಮೂಲಕ ಮಹಾರಾಜ ಟೂರ್ನಿಯ 2023ನೇ ಆವೃತ್ತಿಯಲ್ಲಿ ಮೊದಲ ಗೆಲುವು ಸಾಧಿಸಿದೆ.

ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ಮಾಡಿದ ಬೆಂಗಳೂರು ಬ್ಲಾಸ್ಟರ್ಸ್ ತಂಡಕ್ಕೆ ನಾಯಕ ಹಾಗೂ ಆರಂಭಿಕ ಆಟಗಾರ ಮಯಾಂಕ್ ಅಗರ್ವಾಲ್  (57 ಎಸೆತ 105 ರನ್‌) ಗಳಿಸಿ ಔಟಾಗಿದ್ದಾರೆ. ಈ ಸ್ಪೋಟಕ ಇನ್ನಿಂಗ್ಸ್‌ನಲ್ಲಿ 9 ಬೌಂಡರಿ ಹಾಗೂ 6 ಸಿಕ್ಸರ್‌ಗಳು ಒಳಗೊಂಡಿತ್ತು. 19ನೇ ಓವರ್‌ನಲ್ಲಿ ಮಯಾಂಕ್ ಗೌತಮ್ ಮಿಶ್ರಾಗೆ ವಿಕೆಟ್ ಒಪ್ಪಿಸುವ ಮೂಲಕ ತಮ್ಮ ಇನ್ನಿಂಗ್ಸ್ ಅಂತ್ಯಗೊಳಿಸಿದರು. ಇನ್ನು ಬೆಂಗಳೂರು ಬ್ಲಾಸ್ಟರ್ಸ್ 200ರೆ ಗಡಿ ದಾಟಲು ಕಾರಣವಾದ ಮತ್ತೋರ್ವ ಆಟಗಾರನೆಂದರೆ ಸೂರಜ್ ಅಹುಜಾ. ಕೇವಲ 10 ಎಸೆತಗಳಲ್ಲಿ 35 ರನ್‌ಗಳನ್ನು ಬಾರಿಸಿ ಮಿಂಚಿದರು. ಹೀಗಾಗಿ ಬ್ಲಾಸ್ಟರ್ಸ್ ತಂಡ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್‌ ಕಳೆದುಕೊಂಡು 212 ರನ್‌ಗಳನ್ನು ಗಳಿಸಿತು.

ಇನ್ನು ಈ ಮೊತ್ತವನ್ನು ಬೆನ್ನಟ್ಟಿದ ಮೈಸೂರು ವಾರಿಯರ್ಸ್ ಅದ್ಭುತ ಆರಂಭ ಪಡೆಯಿತು. ಮೊದಲ ವಿಕೆಟ್‌ಗೆ 4.5 ಓವರ್‌ಗಳಲ್ಲಿ 60 ರನ್‌ಗಳಿಸುವ ಮೂಲಕ ದಿಟ್ಟವಾಗಿ ರನ್ ಬೆನ್ನಟ್ಟುವ ಮುನ್ಸುಆಚನೆ ನೀಡಿತು. ಆರಂಭಿಕ ಆಟಗಾರ ಎಸ್‌ಯು ಕಾರ್ತಿಕ್  70 (30) ತಂಡಕ್ಕೆ ಚೇತರಿಕೆ ನೀಡಿದರು. ಅವರಿಗೆ ಜೊತೆಯಾಗಿ ಸಮರ್ಥ್‌ 35(16) ರನ್‌ ಹೊಳೆ ಹರಿಸಿದರು.

ಮೈಸೂರು ವಾರಿಯರ್ಸ್ ಎರಡನೇ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್‌ಗೆ ಇಳಿದಾಗ ಬೌಂಡರಿಗಳ ಮಳೆ ಸುರಿಯುತ್ತಿತ್ತು, ಏಕೆಂದರೆ ಆರಂಭಿಕರಾದ ಮತ್ತು ರವಿಕುಮಾರ್ ಸಮರ್ಥ್ (16 ಎಸೆತಗಳಲ್ಲಿ 35) ಸಮರ್ಥ್ ಔಟಾಗುವ ಮೊದಲು 29 ಎಸೆತಗಳಲ್ಲಿ 60 ರನ್‌ಗಳ ಜೊತೆಯಾಟ ನಡೆಸಿದರು. ಕಾರ್ತಿಕ್ 22 ಎಸೆತಗಳಲ್ಲಿ ಪಂದ್ಯಾವಳಿಯ ಅತ್ಯಂತ ವೇಗದ ಅರ್ಧಶತಕವನ್ನು ತಂದಾಗ ದಾಳಿಯು ಮುಂದುವರೆಯಿತು, ಆರು ಓವರ್‌ಗಳ ನಂತರ ತಂಡವನ್ನು 88-1 ಕ್ಕೆ ಕೊಂಡೊಯ್ಯಿತು, ಇದು ಈ ಆವೃತ್ತಿಯಲ್ಲಿ ಪವರ್‌ಪ್ಲೇಯ ಕೊನೆಯಲ್ಲಿ ಅತ್ಯಧಿಕ ಸ್ಕೋರ್ ಆಗಿತ್ತು.

ನಾಯಕ ಕರುಣ್‌ ನಾಯರ್‌ 32(34) ಮಂದಗತಿಯ ಆಟ ತಂಡಕ್ಕೆ ಚೇತರಿಕೆ ನೀಡಿತಾದರು ಗೆಲ್ಲುವಲ್ಲಿ ವಿಫಲವಾಯಿತು. ಅಂತಿಮವಾಗಿ 20 ಓವರ್‌ಗಳಲ್ಲಿ 8 ವಿಕೆಟ್‌ ಕಳೆದುಕೊಂಡು 202ರನ್‌ ಗಳಿಸಲಷ್ಟೇ ಶಕ್ತವಾಯಿತು. ಆಮೂಲಕ ಬೆಂಗಳೂರು ತನ್ನ ಮೊದಲ ಗೆಲುವನ್ನು ದಾಖಲಿಸಿತು.

ಸಂಕ್ಷಿಪ್ತ ಸ್ಕೋರ್‌

ಕಲ್ಯಾಣಿ ಬೆಂಗಳೂರು ಬ್ಲಾಸ್ಟರ್ಸ್ 20 ಓವರ್‌ಗಳಲ್ಲಿ 212-4: ಮಯಾಂಕ್ ಅಗರ್ವಾಲ್ 105( 57) 105, ಸೂರಜ್ ಅಹುಜಾ  35*(10), ಡಿ ನಿಶ್ಚಲ್  29(25), ಜಗದೀಶ ಸುಚಿತ್ 2-34, ಮೋನಿಶ್ ರೆಡ್ಡಿ 1-32, ಗೌತಮ್ ಮಿಶ್ರಾ 1-32

ಮೈಸೂರು ವಾರಿಯರ್ಸ್ 20 ಓವರ್‌ಗಳಲ್ಲಿ 202-8: ಎಸ್‌ಯು ಕಾರ್ತಿಕ್ 70(30), ರವಿಕುಮಾರ್ ಸಮರ್ಥ್ 35(16), ಕರುಣ್ ನಾಯರ್ 32(34), ಮೊಹ್ಸಿನ್ ಖಾನ್ 4-35, ಸರ್ಫರಾಜ್ ಅಶ್ರಫ್ 2-23, ಎಲ್ ಆರ್ ಕುಮಾರ್ 1-46

ಪಂದ್ಯಶ್ರೇಷ್ಠ : ಮಯಾಂಕ್‌ ಅಗರ್ವಾಲ್‌

andolanait

Recent Posts

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

54 mins ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

1 hour ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

2 hours ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

2 hours ago

ಒಬ್ಬ ಹುಡುಗ ಯಾವ ಕಾರಣಕ್ಕೆ ʼಗೇʼ ಆಗುತ್ತಾನೆ?

ವಸುಧೇಂದ್ರ ಹುಡುಗನೊಬ್ಬನಿಗೆ ಮತ್ತೊಬ್ಬ ಹುಡುಗನ ಮೇಲೆ ಅದು ಹೇಗೆ ಆಕರ್ಷಣೆ ಮೂಡುತ್ತದೆ? ಅದು ಅವನ ಆಯ್ಕೆಯೆ? ಕಲಿತ ದುಶ್ಚಟವೆ? ವಿಷಮ…

2 hours ago

ಮ.ಬೆಟ್ಟ | ಬಾಲಕನ ಮೇಲೆ ದಾಳಿ ಮಾಡಿದ್ದ ಚಿರತೆ ಸೆರೆ

ಹನೂರು : ಶ್ರೀ ಕ್ಷೇತ್ರ ನಾಗಮಲೆಗೆ ತೆರಳುತ್ತಿದ್ದ ಬಾಲಕನ ಮೇಲೆ ದಾಳಿ ಮಾಡಿ ಸಾವಿಗೆ ಕಾರಣವಾಗಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ…

4 hours ago