ಕ್ರೀಡೆ

ಮಹಾರಾಜ ಟ್ರೋಫಿ: ಗುಲ್ಬರ್ಗ ಮೈಸ್ಟಿಕ್ಸ್‌ಗೆ “ದೇವದತ್ತ” ಜಯ

ಬೆಂಗಳೂರು: ದೇವದತ್ತ ಪಡಿಕ್ಕಲ್‌ (78*) ಅವರ ಆಕರ್ಷಕ ಅರ್ಧ ಶತಕ ಮತ್ತು ವಿದ್ವತ್‌ ಕಾವೇರಪ್ಪ ಮತ್ತು ಮನೋಜ್‌ ಅವರ ಆಕರ್ಷಕ ಬೌಲಿಂಗ್‌ ನೆರವಿನಿಂದ ಮಹಾರಾಜ ಟ್ರೋಫಿಯಲ್ಲಿ ಗುಲ್ಬರ್ಗ ಮೈಸ್ಟಿಕ್ಸ್‌ ತಂಡ ಬೆಂಗಳೂರು ಬ್ಲಾಸ್ಟರ್ಸ್‌ ವಿರುದ್ಧ 6 ವಿಕೆಟ್‌ ಗಳ ಜಯ ಗಳಿಸಿದೆ.

ಜಯ ಗಳಿಸಲು 145 ರನ್‌ಗಳ ಅಲ್ಪ ಮೊತ್ತವನ್ನು ಬೆಂಬತ್ತಿದ ಗುಲ್ಬರ್ಗ ಮೈಸ್ಟಿಕ್ಸ್‌ ದೇವದತ್ತ ಪಡಿಕ್ಕಲ್‌ ಅವರು ಅಜೇಯ 78 ರನ್‌ (61 ಎಸೆತ, 7 ಬೌಂಡರಿ 4 ಸಿಕ್ಸರ್‌) ನೆರವಿನಿಂದ ಇನ್ನೂ 15 ಎಸೆತ ಬಾಕಿ ಇರುವಾಗಲೇ ಗುರಿ ತಲುಪಿತು. ಬೆಂಗಳೂರು ಪರ ಜಗದೀಶ ಸುಚಿತ್‌ ಹಾಗೂ ರೋನಿತ್‌ ಮೋರೆ ತಲಾ 1 ವಿಕೆಟ್‌ ಗಳಿಸಿದರು.

ಸಾಧಾರಣ ಮೊತ್ತ ಗಳಿಸಿದ ಬೆಂಗಳೂರು:
ಗುಲ್ಬರ್ಗ ಮೈಸ್ಟಿಕ್ಸ್‌ನ ವಿದ್ವತ್‌ ಕಾವೇರಪ್ಪ (31ಕ್ಕೆ 3) ಹಾಗೂ ಮನೋಜ್‌ ಭಾಂಡಗೆ (23ಕ್ಕೆ3) ಅವರ ಬೌಲಿಂಗ್‌ ದಾಳಿಗೆ ತತ್ತರಿಸಿದ ಬೆಂಗಳೂರು ಬ್ಲಾಸ್ಟರ್ಸ್‌ ತಂಡ ಮಹಾರಾಜ ಟ್ರೋಪಿಯಲ್ಲಿ 21ನೇ ಪಂದ್ಯದಲ್ಲಿ 144 ರನ್‌ಗಳ ಸಾಧಾರಣ ಮೊತ್ತ ಕಲೆಹಾಕಿದೆ.

ಟಾಸ್‌ ಗೆದ್ದ ಗುಲ್ಬರ್ಗ ಮೈಸ್ಟಿಕ್ಸ್‌ ನಾಯಕ ಮನೀಶ್‌ ಪಾಂಡೆ ಪೀಲ್ಡಿಂಗ್‌ ಆಯ್ಕೆ ಮಾಡಿಕೊಂಡಿರುವುದನ್ನು ತಂಡದ ಬೌಲರ್‌ಗಳು ಉತ್ತಮ ರೀತಿಯಲ್ಲಿಯೇ ಸಮರ್ಥಿಸಿಕೊಂಡರು. ನಿನ್ನೆ ಶತಕ ಸಿಡಿಸಿದ್ದ ಎಲ್‌.ಆರ್‌. ಚೇತನ್‌ ಕೇವಲ 6 ರನ್‌ ಗಳಿಸಿ ವಿಕೆಟ್‌ ಒಪ್ಪಿಸಿದ್ದು ತಂಡದ ರನ್‌ ಗಳಿಕೆಗೆ ಆರಂಭದಲ್ಲೇ ಕಡಿವಾಣ ಬೀಳುವಂತೆ ಮಾಡಿತು.

ನಾಯಕ ಮಯಾಂಕ್‌ ಆಗರ್ವಾಲ್‌ (28) ಅಲ್ಪ ಮೊತ್ತಕ್ಕೆ ಪೆವಿಲಿಯನ್‌ ಸೇರಿದ್ದು ತಂಡದ ಬೃಹತ್‌ ಮೊತ್ತದ ಗುರಿಗೆ ಅಡ್ಡಿಯಾಯಿತು. ಕೆ.ವಿ. ಅನೀಶ್‌ (20), ಶಿವಕುಮಾರ್‌ ರಕ್ಷಿತ್‌ (16), ಕ್ರಾಂತಿ ಕುಮಾರ್‌ (17), ಜಗದೀಶ ಸುಚಿತ್‌ (17) ಹೀಗೆ ಬೆಂಗಳೂರಿನ ಬ್ಲಾಸ್ಟರ್ಸ್‌ನ ಬ್ಯಾಟ್ಸ್‌ಮನ್‌ಗಳು ಅಲ್ಪ ಮೊತ್ತಕ್ಕೆ ಪೆವಿಲಿಯನ್‌ ಹಾದಿ ಹಿಡಿದರು.

ಗುಲ್ಬರ್ಗ ಮೈಸ್ಟಿಕ್ಸ್‌ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಉತ್ತಮ ರೀತಿಯ ಬೌಲಿಂಗ್‌ ಪ್ರದರ್ಶಿಸಿರುವುದು ಗಮನಾರ್ಹ. ವಿದ್ವತ್‌ ಕಾವೇರಪ್ಪ ಹಾಗೂ ಮನೋಜ್‌ ಭಾಂಡಗೆ ಉತ್ತಮ ಬೌಲಿಂಗ್‌ ಪ್ರದರ್ಶಿಸಿ ಒಟ್ಟು ಆರು ವಿಕೆಟ್‌ ಹಂಚಿಕೊಂಡರು. ವಿದ್ವತ್‌ ಕಾವೇರಪ್ಪ 31 ರನ್‌ಗೆ 3 ವಿಕೆಟ್‌ ಗಳಿಸಿದರೆ, ಮನೋಜ್‌ ಭಾಂಡಗೆ 23 ರನ್‌ಗೆ 3 ವಿಕೆಟ್‌ ಗಳಿಸಿ ಬೆಂಗಳೂರಿನ ರನ್‌ ಗಳಿಕೆಗೆ ಕಡಿವಾಣ ಹಾಕಿದರು. ಹಿಂದೆ ಮೈಸೂರು ವಾರಿಯರ್ಸ್‌ ಪರ ಆಡುತ್ತಿದ್ದ ಕುಶಲ್‌ ವಾಧ್ವಾನಿ ಈ ಬಾರಿ ಬೆಂಗಳೂರು ತಂಡದಲ್ಲಿದ್ದು, ಮಹಾರಾಜ ಟ್ರೋಫಿಯ ಮೊದಲ ಪಂದ್ಯದಲ್ಲೇ ಬೆಂಗಳೂರಿನ ನಾಯಕ ಮಯಾಂಕ್‌ ಅಗರ್ವಾಲ್‌ ಅವರ ವಿಕೆಟ್‌ ಕಬಳಿಸಿ ತಂಡಕ್ಕೆ ಉತ್ತಮ ರೀತಿಯಲ್ಲಿ ನೆರವಾದರು. ಮನೋಜ್‌ ಭಾಂಡಗೆ ಮಧ್ಯಮ ಕ್ರಮಾಂಕದ ಆಟಗಾರರ ವಿಕೆಟ್‌ ಗಳಿಸಿ ಯಶಸ್ವಿ ಬೌಲರ್‌ ಎನಿಸಿದರು. ವಾಧ್ವಾನಿ 17 ರನ್‌ಗೆ 2 ವಿಕೆಟ್‌ ಗಳಿಸುವುದರೊಂದಿಗೆ ಬೆಂಗಳೂರು ಬ್ಲಾಸ್ಟರ್ಸ್‌ 9 ವಿಕೆಟ್‌ ನಷ್ಟಕ್ಕೆ ​144 ರನ್‌ಗಳ ಸಾಧಾರಣ ಮೊತ್ತ ಪೇರಿಸಿತು.

ಸಂಕ್ಷಿಪ್ತ ಸ್ಕೋರ್‌:
ಬೆಂಗಳೂರು ಬ್ಲಾಸ್ಟರ್ಸ್‌: 20 ಓವರ್‌ಗಳಲ್ಲಿ 9 ವಿಕೆಟ್‌ಗೆ 144 (ಮಯಾಂಕ್‌ ಅಗರ್ವಾಲ್‌ 28, ಅನೀಶ್‌ 20, ಕ್ರಾಂತಿ ಕುಮಾರ್‌ 17, ಕಾವೇರಪ್ಪ 31ಕ್ಕೆ 3, ಮನೋಜ್‌ 23ಕ್ಕೆ 3, ಕುಶಾಲ್‌ ವಾಧ್ವಾನಿ 17 ಕ್ಕೆ 2).

ಗುಲ್ಬರ್ಗ ಮೈಸ್ಟಿಕ್ಸ್‌: 17.3 ಓವರ್‌ಗಳಲ್ಲಿ 4 ವಿಕೆಟ್‌ಗೆ 150 (ದೇವದತ್ತ ಪಡಿಕ್ಕಲ್‌ 78*). ಜಸ್ವತ್‌ ಆಚಾರ್ಯ 18, ಮನೀಶ್‌ ಪಾಂಡೆ 13, ಕ್ರಾಂತಿ ಕುಮಾರ್‌ 16ಕ್ಕೆ 1)

andolana

Recent Posts

ಸಂಪ್‌ಗೆ ಬಿದ್ದು ಎರಡು ವರ್ಷದ ಮಗು ಸಾವು

ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್‌ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

8 hours ago

ಬಸ್-ಲಾರಿ ನಡುವೆ ಡಿಕ್ಕಿ; ಹಲವರಿಗೆ ಗಾಯ

ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್‌ಟಿಸಿ ಬಸ್…

8 hours ago

ಸಿಡಿಲು ಬಡಿದು ರೈತ ಸಾವು

ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಎಸ್.ಟಿ.ಆನಂದ್ (೬೦)…

9 hours ago

ಟಾಟಾ ಏಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ…

9 hours ago

ಒಂದು ವಾರ ವಿದೇಶಕ್ಕೆ ಹಾರಿದ ಪ್ರಧಾನಿ ಮೋದಿ: ಫ್ರಾನ್ಸ್, ಸ್ಲೋವಾಕಿಯಾ ಪ್ರವಾಸ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…

10 hours ago

ಉಡುಪಿ ಶ್ರೀಕೃಷ್ಣಮಠಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿ

ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…

11 hours ago