ನವದೆಹಲಿ: ಭಾರತ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಗುರುವಾರ ಮುಂಬಯಿಯ ಆಸ್ಪತ್ರೆಯಲ್ಲಿ ಎಡ ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.
ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ಐದನೇ ಐಪಿಎಲ್ ಪ್ರಶಸ್ತಿ ಗೆದ್ದ ಬಳಿಕ ಅಹಮದಾಬಾದ್ನಿಂದ ಮುಂಬಯಿಗೆ ತೆರಳಿದ್ದರು ಮತ್ತು ಬಿಸಿಸಿಐ ವೈದ್ಯಕೀಯ ಸಮಿತಿಯಲ್ಲಿರುವ ಖ್ಯಾತ ಕ್ರೀಡಾ ಮೂಳೆ ಶಸ್ತ್ರಚಿಕಿತ್ಸಕ ಡಾ| ದಿನ್ಶಾ ಪರ್ದಿವಾಲಾ ಅವರೊಂದಿಗೆ ಸಮಾಲೋಚನೆ ನಡೆಸಿದರು.
ಪರ್ದಿವಾಲಾ ಅವರು ಇತ್ತೀಚೆಗೆ ರಿಷಬ್ ಪಂತ್ ಸಹಿತ ಪ್ರಮುಖ ಕ್ರಿಕೆಟಿಗರಿಗೆ ಶಸ್ತ್ರಚಿಕಿತ್ಸೆ ಮಾಡಿದ ಅನುಭವ ಹೊಂದಿದ್ದಾರೆ.
“ಹೌದು, ಗುರುವಾರ ಮುಂಬಯಿಯ ಆಸ್ಪತ್ರೆಯಲ್ಲಿ ಧೋನಿ ಮೊಣಕಾಲಿನ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು ಇದೀಗ ಅವರು ಆರೋಗ್ಯವಾಗಿದ್ದಾರೆ ಮತ್ತು 2 ದಿನಗಳಲ್ಲಿ ಬಿಡುಗಡೆಯಾಗಲಿದ್ದಾರೆ.
ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…
ಮೈಸೂರು : ಬುಧವಾರವಷ್ಟೇ ಹೆಬ್ಬಾಳ್ನಲ್ಲಿ ಶೆಡ್ವೊಂದರ ಮೇಲೆ ದಾಳಿ ನಡೆಸಿದ್ದ ಎನ್ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…
ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…
ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…
ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…