ಕ್ರೀಡೆ

ಮಂಗಳೂರಿಗೆ ಸೋಲುಣಿಸಿದ ಶಿವಮೊಗ್ಗ ಸ್ಟ್ರೈಕರ್ಸ್‌

ಬೆಂಗಳೂರು : ಮೊದಲ ಬಾರಿಗೆ ಬೌಲಿಂಗ್‌ ಮತ್ತು ಬ್ಯಾಟಿಂಗ್‌ನಲ್ಲಿ ಮಿಂಚಿದ ಶಿವಮೊಗ್ಗ ಸ್ಟ್ರೈಕರ್ಸ್‌ ತಂಡ ಮಹಾರಾಜ ಟ್ರೋಫಿಯಲ್ಲಿ ಮಂಗಳೂರು ಯುನೈಟೆಡ್‌ ವಿರುದ್ಧ 8 ವಿಕೆಟ್‌ ಅಂತರದಲ್ಲಿ ಜಯ ಗಳಿಸಿದೆ.

ನಾಯಕ ಕೃಷ್ಣಪ್ಪ ಗೌತಮ್‌ (72) ಹಾಗೂ ಸ್ಟಾಲಿನ್‌ ಹೂವರ್‌ (53*) ಅವರ ಆರ್ಕಷಕ ಅರ್ಧ ಶತದಕ ನೆರವಿನಿಂದ ಶಿವಮೊಗ್ಗ 137 ರನ್‌ಗಳ ಜಯದ ಗುರಿಯನ್ನು ಇನ್ನೂ 46 ಎಸೆತಗಳು ಬಾಕಿ ಇರುವಾಗಲೇ ಕೇವಲ 2 ವಿಕೆಟ್‌ ಕಳೆದುಕೊಂಡು ತಲುಪಿತು. ಈಗಾಗಲೇ ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿರುವ ಶಿವಮೊಗ್ಗಕ್ಕೆ ಈ ಜಯ ಆತ್ಮವಿಶ್ವಾಸವನ್ನು ಹೆಚ್ಚಿಸಿತೇ ಹೊರತು, ಅಂಕಪಟ್ಟಿಯಲ್ಲಿ ಯಾವುದೇ ಬದಲಾವಣೆಯನ್ನುಂಟು ಮಾಡಲಿಲ್ಲ.
ನಾಯಕನ ಜವಾಬ್ದಾರಿಯುತ ಆಟ ಪ್ರದರ್ಶಿಸಿದ ಗೌತಮ್‌ ಅವರ ಇನ್ನಿಂಗ್ಸ್‌ನಲ್ಲಿ 7 ಬೌಂಡರಿ ಹಾಗೂ 4 ಸಿಕ್ಸರ್‌ ಸೇರಿತ್ತು. ಸ್ಟಾಲಿನ್‌ ಹೂವರ್‌ ಕೇವಲ 35 ಎಸೆತಗಳನ್ನು ಎದುರಿಸಿ 3 ಬೌಂಡರಿ ಹಾಗೂ 4 ಸಿಕ್ಸರ್‌ ನೆರವಿನಿಂದ ಅಜೇಯ 53 ರನ್‌ ಗಳಿಸಿದರು. ಕೃಷ್ಣಪ್ಪ ಗೌತಮ್‌ ಹಾಗೂ ಹೂವರ್‌ 131 ರನ್‌ ಜೊತೆಯಾಟವಾಡಿದರು.

ಅಲ್ಪ ಮೊತ್ತಕ್ಕೆ ತೃಪ್ತಿಪಟ್ಟ ಮಂಗಳೂರು:
ನಾಯಕ ಕೃಷ್ಣಪ್ಪ ಗೌತಮ್‌ ಅವರ ಬೌಲಿಂಗ್‌ ದಾಳಿಗೆ ಸಿಲುಕಿದ ಮಂಗಳೂರು ಯುನೈಟೆಡ್‌ ಕೇವಲ 136 ರನ್‌ ಗಳಿಸಿದೆ. ಟಾಸ್‌ ಗೆದ್ದು ಫೀಲ್ಡಿಂಗ್‌ ಆಯ್ದುಕೊಂಡ ಶಿವಮೊಗ್ಗ ಸ್ಟ್ರೈಕರ್ಸ್‌, ನಿಕಿನ್‌ ಜೋಸ್‌ (38) ಹಾಗೂ ಅಭಿನವ್‌ ಮನೋಹರ್‌

andolana

Recent Posts

ಅಂಬೇಡ್ಕರ್ ದೇಶ ಕಂಡ ಅಪರೂಪದ ನಾಯಕ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಅಂಬೇಡ್ಕರ್ ಅವರೊಬ್ಬ ಮಹಾನ್ ವ್ಯಕ್ತಿ ಹಾಗೂ ದೇಶ ಕಂಡ ಒಬ್ಬ ಅಪರೂಪದ ನಾಯಕ. ದಲಿತರಿಗೆ ಮಾತ್ರವಲ್ಲದೆ ಎಲ್ಲಾ ಶೋಷಿತರಿಗೆ…

7 mins ago

ದರ್ಶನ್‌ಗೆ ಫಿಸಿಯೊಥೆರಪಿ ಸ್ಟಾಪ್‌ ಮಾಡಿದ ವೈದ್ಯರು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ದರ್ಶನ್‌ಗೆ ಬೆನ್ನುನೋವು ಮಾಯವಾಯ್ತಾ ಎಂಬ ಕುತೂಹಲ ಮನೆ ಮಾಡಿದೆ. ದರ್ಶನ್‌…

32 mins ago

ಶಾರುಖ್‌ ಖಾನ್‌ ಪುತ್ರನಿಂದ ದುರ್ವತನೆ ಪ್ರಕರಣ: ಡಿಜಿ & ಡಿಜಿಪಿಗೆ ದೂರು ಸಲ್ಲಿಕೆ

ಬೆಂಗಳೂರು: ಬಾಲಿವುಡ್‌ ನಟ ಶಾರುಖ್‌ ಖಾನ್‌ ಪುತ್ರ ಆರ್ಯನ್‌ ಖಾನ್‌ ಬೆಂಗಳೂರಿನ ಪಬ್‌ನಲ್ಲಿ ಮಿಡಲ್‌ ಫಿಂಗಲ್‌ ತೋರಿಸಿ ದುರ್ವತನೆ ಮೆರೆದಿದ್ದು,…

52 mins ago

1000ಕ್ಕೂ ಹೆಚ್ಚು ಇಂಡಿಗೋ ವಿಮಾನಗಳ ಹಾರಾಟ ರದ್ದು: ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ಪ್ರಯಾಣಿಕರು

ನವದೆಹಲಿ: ಶನಿವಾರ ಐದನೇ ದಿನವೂ ಇಂಡಿಗೋ ವಿಮಾನ ಹಾರಾಟ ಅಡಚಣೆಗಳು ಮುಂದುವರೆದಿದ್ದು, ದೇಶಾದ್ಯಂತ ಹಲವಾರು ವಿಮಾನಗಳು ರದ್ದಾಗಿವೆ. ಕಳೆದ ನಾಲ್ಕು…

1 hour ago

9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ: ಕಾಮುಕನನ್ನು ಹಿಡಿದು ಥಳಿಸಿದ ಗ್ರಾಮಸ್ಥರು

ಮೈಸೂರು: 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕನನ್ನು ಗ್ರಾಮಸ್ಥರು ಹಿಡಿದು ಥಳಿಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ…

2 hours ago

ಓದುಗರ ಪತ್ರ: ಕೆ.ಕೆ.ಮಹಮದ್ ಅವರ ಹೇಳಿಕೆ ಪ್ರಬುದ್ಧ ನಡೆ

ಕೇರಳದ ಕೋಯಿಕ್ಕೋಡಿನಲ್ಲಿ ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್‌ಐ) ಮಾಜಿ ಪ್ರಾದೇಶಿಕ ನಿರ್ದೇಶಕರಾದ ಕೆ.ಕೆ. ಮಹಮ್ಮದ್…

2 hours ago