ಕ್ರೀಡೆ

ಮಂಗಳೂರಿಗೆ ಸೋಲುಣಿಸಿದ ಶಿವಮೊಗ್ಗ ಸ್ಟ್ರೈಕರ್ಸ್‌

ಬೆಂಗಳೂರು : ಮೊದಲ ಬಾರಿಗೆ ಬೌಲಿಂಗ್‌ ಮತ್ತು ಬ್ಯಾಟಿಂಗ್‌ನಲ್ಲಿ ಮಿಂಚಿದ ಶಿವಮೊಗ್ಗ ಸ್ಟ್ರೈಕರ್ಸ್‌ ತಂಡ ಮಹಾರಾಜ ಟ್ರೋಫಿಯಲ್ಲಿ ಮಂಗಳೂರು ಯುನೈಟೆಡ್‌ ವಿರುದ್ಧ 8 ವಿಕೆಟ್‌ ಅಂತರದಲ್ಲಿ ಜಯ ಗಳಿಸಿದೆ.

ನಾಯಕ ಕೃಷ್ಣಪ್ಪ ಗೌತಮ್‌ (72) ಹಾಗೂ ಸ್ಟಾಲಿನ್‌ ಹೂವರ್‌ (53*) ಅವರ ಆರ್ಕಷಕ ಅರ್ಧ ಶತದಕ ನೆರವಿನಿಂದ ಶಿವಮೊಗ್ಗ 137 ರನ್‌ಗಳ ಜಯದ ಗುರಿಯನ್ನು ಇನ್ನೂ 46 ಎಸೆತಗಳು ಬಾಕಿ ಇರುವಾಗಲೇ ಕೇವಲ 2 ವಿಕೆಟ್‌ ಕಳೆದುಕೊಂಡು ತಲುಪಿತು. ಈಗಾಗಲೇ ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿರುವ ಶಿವಮೊಗ್ಗಕ್ಕೆ ಈ ಜಯ ಆತ್ಮವಿಶ್ವಾಸವನ್ನು ಹೆಚ್ಚಿಸಿತೇ ಹೊರತು, ಅಂಕಪಟ್ಟಿಯಲ್ಲಿ ಯಾವುದೇ ಬದಲಾವಣೆಯನ್ನುಂಟು ಮಾಡಲಿಲ್ಲ.
ನಾಯಕನ ಜವಾಬ್ದಾರಿಯುತ ಆಟ ಪ್ರದರ್ಶಿಸಿದ ಗೌತಮ್‌ ಅವರ ಇನ್ನಿಂಗ್ಸ್‌ನಲ್ಲಿ 7 ಬೌಂಡರಿ ಹಾಗೂ 4 ಸಿಕ್ಸರ್‌ ಸೇರಿತ್ತು. ಸ್ಟಾಲಿನ್‌ ಹೂವರ್‌ ಕೇವಲ 35 ಎಸೆತಗಳನ್ನು ಎದುರಿಸಿ 3 ಬೌಂಡರಿ ಹಾಗೂ 4 ಸಿಕ್ಸರ್‌ ನೆರವಿನಿಂದ ಅಜೇಯ 53 ರನ್‌ ಗಳಿಸಿದರು. ಕೃಷ್ಣಪ್ಪ ಗೌತಮ್‌ ಹಾಗೂ ಹೂವರ್‌ 131 ರನ್‌ ಜೊತೆಯಾಟವಾಡಿದರು.

ಅಲ್ಪ ಮೊತ್ತಕ್ಕೆ ತೃಪ್ತಿಪಟ್ಟ ಮಂಗಳೂರು:
ನಾಯಕ ಕೃಷ್ಣಪ್ಪ ಗೌತಮ್‌ ಅವರ ಬೌಲಿಂಗ್‌ ದಾಳಿಗೆ ಸಿಲುಕಿದ ಮಂಗಳೂರು ಯುನೈಟೆಡ್‌ ಕೇವಲ 136 ರನ್‌ ಗಳಿಸಿದೆ. ಟಾಸ್‌ ಗೆದ್ದು ಫೀಲ್ಡಿಂಗ್‌ ಆಯ್ದುಕೊಂಡ ಶಿವಮೊಗ್ಗ ಸ್ಟ್ರೈಕರ್ಸ್‌, ನಿಕಿನ್‌ ಜೋಸ್‌ (38) ಹಾಗೂ ಅಭಿನವ್‌ ಮನೋಹರ್‌

andolana

Recent Posts

ಕಾರು ಚಾಲಕನ ಪುತ್ರನಿಗೆ ಟಿಕೆಟ್‌ ನೀಡಿ ಗೆಲ್ಲಿಸಿಕೊಂಡು ಬಂದ ದಳಪತಿ ವಿಜಯ್‌!

ಚೆನ್ನೈ : ತಮಿಳುನಾಡು ವಿಧಾನಸಭೆ ಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಟಿವಿಕೆ ಮುಖ್ಯಸ್ಥ ದಳಪತಿ ವಿಜಯ್‌ ಅವರ ಕಾರು ಚಾಲಕನ…

10 hours ago

ಬಿಜೆಪಿಗೆ ಮೂರು ರಾಜ್ಯಗಳಲ್ಲಿ ಗೆಲುವು : ಮೈಸೂರಲ್ಲಿ ಸಂಭ್ರಮಾಚರಣೆ

ಮೈಸೂರು : ಪಂಚ ರಾಜ್ಯ ಚುನಾವಣೆಯಲ್ಲಿ ಬಿಜೆಪಿಗೆ ಮೂರು ರಾಜ್ಯಗಳಲ್ಲಿ ಗೆಲುವು ಲಭಿಸಿದ ಹಿನ್ನೆಲೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬಿಜೆಪಿ…

10 hours ago

ವಿಜಯ್‌ ಭೇಟಿಯಾಗಿ ತ್ರಿಶಾ ಅಭಿನಂದನೆ

ಚೆನ್ನೈ : ನಟಿ ತ್ರಿಶಾ ಕೃಷ್ಣನ್ ತಮ್ಮ ಹುಟ್ಟುಹಬ್ಬದ ನಿಮಿತ್ತ ಸೋಮವಾರ ಬೆಳಿಗ್ಗೆ ತಿರುಮಲ ತಿರುಪತಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.…

11 hours ago

ತಮಿಳುನಾಡು| ಸಿಎಂ ಎಂ.ಕೆ.ಸ್ಟಾಲಿನ್‌ಗೆ ಸೋಲು

ಚೆನ್ನೈ: ತಮಿಳುನಾಡಿನ ಹಾಲಿ ಸಿಎಂ ಎಂ.ಕೆ.ಸ್ಟಾಲಿನ್‌ ಸ್ವ ಕ್ಷೇತ್ರದಲ್ಲೇ ಸೋಲು ಅನುಭವಿಸಿದ್ದಾರೆ. ಈ ಮೂಲಕ ಸತತ 2ನೇ ಬಾರಿಗೆ ಸರ್ಕಾರ…

14 hours ago

ದಾವಣಗೆರೆ ದಕ್ಷಿಣ ಉಪಚುನಾವಣೆ: ಕೈ ಅಭ್ಯರ್ಥಿ ಸಮರ್ಥ್‌ ಶಾಮನೂರು ಜಯಭೇರಿ

ದಾವಣಗೆರೆ: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಎರಡೂ ಕ್ಷೇತ್ರದಲ್ಲೂ ಕಾಂಗ್ರೆಸ್ ಜಯಭೇರಿ ಬಾರಿಸಿದೆ.…

14 hours ago

ಪ್ರಧಾನಿ ಮೋದಿ ದೂರದೃಷ್ಟಿಯ ನಾಯಕತ್ವಕ್ಕೆ ಎನ್‌ಡಿಎ ಭರ್ಜರಿ ಗೆಲುವು: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವ ಮತ್ತು ವಿಕಸಿತ ಭಾರತದ ಮೇಲೆ ಜನರು ಹೊಂದಿರುವ ನಂಬಿಕೆಯಿಂದಾಗಿ ಎನ್‌ಡಿಎ…

15 hours ago