ಕ್ರೀಡೆ

ಮಂಗಳೂರಿಗೆ ಸೋಲುಣಿಸಿದ ಶಿವಮೊಗ್ಗ ಸ್ಟ್ರೈಕರ್ಸ್‌

ಬೆಂಗಳೂರು : ಮೊದಲ ಬಾರಿಗೆ ಬೌಲಿಂಗ್‌ ಮತ್ತು ಬ್ಯಾಟಿಂಗ್‌ನಲ್ಲಿ ಮಿಂಚಿದ ಶಿವಮೊಗ್ಗ ಸ್ಟ್ರೈಕರ್ಸ್‌ ತಂಡ ಮಹಾರಾಜ ಟ್ರೋಫಿಯಲ್ಲಿ ಮಂಗಳೂರು ಯುನೈಟೆಡ್‌ ವಿರುದ್ಧ 8 ವಿಕೆಟ್‌ ಅಂತರದಲ್ಲಿ ಜಯ ಗಳಿಸಿದೆ.

ನಾಯಕ ಕೃಷ್ಣಪ್ಪ ಗೌತಮ್‌ (72) ಹಾಗೂ ಸ್ಟಾಲಿನ್‌ ಹೂವರ್‌ (53*) ಅವರ ಆರ್ಕಷಕ ಅರ್ಧ ಶತದಕ ನೆರವಿನಿಂದ ಶಿವಮೊಗ್ಗ 137 ರನ್‌ಗಳ ಜಯದ ಗುರಿಯನ್ನು ಇನ್ನೂ 46 ಎಸೆತಗಳು ಬಾಕಿ ಇರುವಾಗಲೇ ಕೇವಲ 2 ವಿಕೆಟ್‌ ಕಳೆದುಕೊಂಡು ತಲುಪಿತು. ಈಗಾಗಲೇ ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿರುವ ಶಿವಮೊಗ್ಗಕ್ಕೆ ಈ ಜಯ ಆತ್ಮವಿಶ್ವಾಸವನ್ನು ಹೆಚ್ಚಿಸಿತೇ ಹೊರತು, ಅಂಕಪಟ್ಟಿಯಲ್ಲಿ ಯಾವುದೇ ಬದಲಾವಣೆಯನ್ನುಂಟು ಮಾಡಲಿಲ್ಲ.
ನಾಯಕನ ಜವಾಬ್ದಾರಿಯುತ ಆಟ ಪ್ರದರ್ಶಿಸಿದ ಗೌತಮ್‌ ಅವರ ಇನ್ನಿಂಗ್ಸ್‌ನಲ್ಲಿ 7 ಬೌಂಡರಿ ಹಾಗೂ 4 ಸಿಕ್ಸರ್‌ ಸೇರಿತ್ತು. ಸ್ಟಾಲಿನ್‌ ಹೂವರ್‌ ಕೇವಲ 35 ಎಸೆತಗಳನ್ನು ಎದುರಿಸಿ 3 ಬೌಂಡರಿ ಹಾಗೂ 4 ಸಿಕ್ಸರ್‌ ನೆರವಿನಿಂದ ಅಜೇಯ 53 ರನ್‌ ಗಳಿಸಿದರು. ಕೃಷ್ಣಪ್ಪ ಗೌತಮ್‌ ಹಾಗೂ ಹೂವರ್‌ 131 ರನ್‌ ಜೊತೆಯಾಟವಾಡಿದರು.

ಅಲ್ಪ ಮೊತ್ತಕ್ಕೆ ತೃಪ್ತಿಪಟ್ಟ ಮಂಗಳೂರು:
ನಾಯಕ ಕೃಷ್ಣಪ್ಪ ಗೌತಮ್‌ ಅವರ ಬೌಲಿಂಗ್‌ ದಾಳಿಗೆ ಸಿಲುಕಿದ ಮಂಗಳೂರು ಯುನೈಟೆಡ್‌ ಕೇವಲ 136 ರನ್‌ ಗಳಿಸಿದೆ. ಟಾಸ್‌ ಗೆದ್ದು ಫೀಲ್ಡಿಂಗ್‌ ಆಯ್ದುಕೊಂಡ ಶಿವಮೊಗ್ಗ ಸ್ಟ್ರೈಕರ್ಸ್‌, ನಿಕಿನ್‌ ಜೋಸ್‌ (38) ಹಾಗೂ ಅಭಿನವ್‌ ಮನೋಹರ್‌

andolana

Recent Posts

ನೀಟ್-ಯುಜಿ ಮರುಪರೀಕ್ಷೆ : ಪರೀಕ್ಷೆ ಬರೆದ 22 ಲಕ್ಷ ವಿದ್ಯಾರ್ಥಿಗಳು

ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…

40 mins ago

ತಮಿಳುನಾಡು ಸೀಫುಡ್‌ ಘಟಕದಲ್ಲಿ ಅನಿಲ ಸೋರಿಕೆ ; 7 ಜನ ಸಾವು, ಹಲವರು ಗಂಭೀರ

ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…

1 hour ago

ಬೆಂಗಾಳಿಗಳನ್ನು ಬಾಂಗ್ಲಾ ವಲಸಿಗರೆಂದು ಗ್ರಹಿಕೆ ; ಮೈಸೂರು ರೈಲ್ವೆ ನಿಲ್ದಾಣದಲ್ಲಿ ಕೆಲಕಾಲ ಆತಂಕ

ಆಧಾರ್‌ ಕಾರ್ಡ್‌ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…

2 hours ago

ಚಾ.ನಗರ | ಸಿದ್ದಲಿಂಗಪುರ ಬಳಿ ಹುಲಿ ದಾಳಿ ; 4 ಮೇಕೆಗಳು ಸಾವು

ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…

3 hours ago

ಕರ್ನಾಟಕದಲ್ಲಿ ಮುಂಗಾರು ವಿಳಂಬ: ಕಂಗಾಲಾದ ರೈತರು

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…

7 hours ago

ಇದು ಕೇವಲ ಆರಂಭ: ಮುಂದೆ ಹೋರಾಟ ದೊಡ್ಡಮಟ್ಟದಲ್ಲಿ ಇದೆ ಎಂದ ನಿಖಿಲ್‌ ಕುಮಾರಸ್ವಾಮಿ

ರಾಮನಗರ: ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್‌ ಕೈಗೊಂಡಿರುವ ಕೈಗೊಂಡಿರುವ ಬೃಹತ್‌ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್‌ ಕುಮಾರಸ್ವಾಮಿ ಇದು ಕೇವಲ…

7 hours ago