ಕ್ರೀಡೆ

ಪ್ಯಾರಿಸ್‌ ಪ್ಯಾರಾಲಿಂಪಿಕ್ಸ್‌ 2024: 10ಮೀ ಏರ್‌ ರೈಫಲ್‌ನಲ್ಲಿ ಮನೀಶ್‌ ನರ್ವಾಲ್‌ಗೆ ಬೆಳ್ಳಿ

ಪ್ಯಾರಿಸ್‌: ಇಲ್ಲಿ ನಡೆಯುತ್ತಿರುವ 2024ರ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮೊದಲ ಬೆಳ್ಳಿ ಸಂದಿದೆ.

10ಮೀ ಏರ್‌ ರೈಫಲ್‌ (ಎಸ್‌ಎಚ್‌-1) ನಲ್ಲಿ ಉತ್ತಮ ಪ್ರದರ್ಶನ ತೋರಿದ ಭಾರತದ ಶೂಟರ್‌ ಮನೀಶ ನರ್ವಾಲ್‌ ಅವರು ಬೆಳ್ಳಿ ಪದಕ ಗೆದ್ದು ಬೀಗಿದರು. ಆ ಮೂಲಕ ಭಾರತಕ್ಕೆ ಒಂದೇ ದಿನದಲ್ಲಿ ನಾಲ್ಕು ಪದಕಗಳು ಬಂದಿವೆ.

ಮನೀಶ್‌ ನರ್ವಾಲ್‌ 10ಮೀ ಏರ್‌ ರೈಫಲ್‌ನಲ್ಲಿ ಫೈನಲ್ಸ್‌ನಲ್ಲಿ ಅವರು ಒಟ್ಟು 24 ಸುತ್ತುಗಳಲ್ಲಿ ಒಟ್ಟಾರೆಯಾಗಿ 234.9 ಅಂಕ ಗಳಿಸುವ ಮೂಲಕ ಬೆಳ್ಳಿ ಪದಕ ಜಯಿಸಿದರು. ಆ ಮೂಲಕ ಇಂದು ಒಂದೇ ದಿನ ಭಾರತಕ್ಕೆ ನಾಲ್ಕು ಪದಕಗಳು ಬಂದಿದೆ. ಶೂಟಿಂಗ್‌ನಲ್ಲಿ ಒಂದರಲ್ಲೇ ಒಟ್ಟು ಮೂರು ಪದಕಗಳು (ಒಂದು ಚಿನ್ನ, ಬೆಳ್ಳಿ ಹಾಗೂ ಕಂಚು) ಬಂದಿದೆ.

ದಕ್ಷಿಣ ಕೊರಿಯಾದ ಜಿಯೋಂಗ್ಡು ಜೋ ಅವರು 237.4 ಅಂಕ ಗಳಿಸಿ ಚಿನ್ನ ಗೆದ್ದರು. ಭಾರತದ ನರ್ವಾಲ್‌ 234.9 ಅಂಕದೊಂದಿಗೆ ಬೆಳ್ಳಿ ಗೆದ್ದರೇ, ಚೀನಾದಾ ಚಾವೊ ಯಾಂಗ್‌ ಅವರು ಕಂಚಿನ ಪದಕ ಗೆದ್ದರು.

ಕಳೆದ ಟೋಕಿಯೋ ಒಲಂಪಿಕ್ಸ್‌ನಲ್ಲಿ ಮನೀಶ್‌ ನರ್ವಾಲ್‌ ಅವರು 234.9 ಅಂಕದೊಂದಿಗೆ ಚಿನ್ನ ಗೆದ್ದಿದ್ದರು. ಇಂದು ಬೆಳ್ಳಿ ಗೆದ್ದಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆ: ಮನಸ್ಸುಗಳಿಗಿಲ್ಲ ‘ಕೂಲ್‌ಕೂಲ್’

ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್‌ ಫಾರ್ಮ್‌ಗಳಲ್ಲಿ  ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್‌ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…

2 hours ago

ಓದುಗರ ಪತ್ರ: ಕೆಎಸ್‌ಪಿಸಿಬಿಯನ್ನು ರಾಜಕೀಯ ಮುಕ್ತಗೊಳಿಸಿ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…

2 hours ago

ಓದುಗರ ಪತ್ರ: ಪರಸ್ಪರ ಗೌರವಕ್ಕೆ ಮತ್ತೊಮ್ಮೆ ಕನ್ನಡಿ

ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…

2 hours ago

ನಡೆಯದ ಸಂಸತ್ ಕಲಾಪ; ಕುಗ್ಗಿದ ಮೋದಿ-ಶಾ ವರ್ಚಸ್ಸು

ದೆಹಲಿ ಕಣ್ಣೋಟ ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…

2 hours ago

ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಅಂತ್ಯ

5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)…

11 hours ago