ಕ್ರೀಡೆ

ಮನೀಶ್‌ ಪಾಂಡೆ ಪಡೆಗೆ ರೋಚಕ ಜಯ

ಮೈಸೂರು :ಬ್ಯಾಟಿಂಗ್‌ ಮತ್ತು ಬೌಲಿಂಗ್‌ನಲ್ಲಿ ಮಿಂಚಿದ ಗುಲ್ಬರ್ಗ ಮಿಸ್ಟಿಕ್ಸ್‌ ತಂಡ ಮಹಾರಾಜ ಟ್ರೋಫಿಯಲ್ಲಿ ಮಂಗಳೂರು ಯುನೈಟೆಡ್‌ ವಿರುದ್ಧದ ಪಂದ್ಯದಲ್ಲಿ 28 ರನ್‌ಗಳ ಅಂತರದಲ್ಲಿ ಅದ್ಭುತ ಜಯ ದಾಖಲಿಸಿದೆ.

ಜಯ ಗಳಿಸಲು ಗುಲ್ಬರ್ಗ ತಂಡ ಮಂಗಳೂರಿಗೆ 165 ರನ್‌ಗಳ ಕಠಿಣ ಸವಾಲು ನೀಡಿತ್ತು. ಅಭಿನವ್‌ ಮನೋಹರ್‌ (51) ಕ್ರೀಸಿನಲ್ಲಿ ಇರುವವರೆಗೂ ಮಂಗಳೂರು ಗೆಲ್ಲುವ ಲಕ್ಷಣ ತೋರಿತ್ತು, ಆದರೆ ಗುಲ್ಬರ್ಗದ ಬೌಲರ್‌ಗಳಾದ ವಾಧ್ವಾನಿ ಹಾಗೂ ಕಾರ್ತಿಕ್‌ ಎರಡು ಓವರ್‌ಗಳಲ್ಲಿ 5 ವಿಕೆಟ್‌ ಹಂಚಿಕೊಳ್ಳುವ ಮೂಲಕ ಮಂಗಳೂರು ಸೋಲಿನ ಅಂಚಿಗೆ ಸಿಲುಕಿತು. ಅಂತಿಮವಾಗಿ 8 ಎಸೆತ ಬಾಕಿ ಇರುವಾಗಲೇ ಮಂಗಳೂರು 136 ರನ್‌ ಗಳಿಸಿ ಸರ್ವ ಪತನ ಕಂಡಿತು.

ಸವಾಲಿನ ಮೊತ್ತ ಗಳಿಸಿದ ಗುಲ್ಬರ್ಗ:

ನಾಯಕ ಮನೀಶ್‌ ಪಾಂಡೆ (58) ಹಾಗೂ ಕೋದಂಡ ಅಜಿತ್‌ (38) ಅವರ ಆಕರ್ಷಕ ಬ್ಯಾಟಿಂಗ್‌ ನೆರವಿನಿಂದ ಗುಲ್ಬರ್ಗಾ ಮಿಸ್ಟಿಕ್ಸ್‌ ತಂಡ ಮಂಗಳೂರು ಯುನೈಟೆಡ್‌ ವಿರುದ್ಧ 6 ವಿಕೆಟ್‌ಗೆ 164 ರನ್‌ ಗಳಿಸಿತು. ದೇವದತ್ತ ಪಡಿಕ್ಕಲ್‌ 25 ರನ್‌ ಗಳಿಸಿ ಗುಲ್ಬರ್ಗಕ್ಕೆ ಉತ್ತಮ ಆರಂಭ ಕಲ್ಪಿಸಿದ್ದರು.

ನಾಯಕ ಪಾಂಡೆ 40 ಎಸೆಗಳನ್ನೆದುರಿಸಿ 4 ಬೌಂಡರಿ ಹಾಗೂ 2 ಸಿಕ್ಸರ್‌ ನೆರವಿನಿಂದ 58 ರನ್‌ ಗಳಿಸಿ ಕುಸಿದ ತಂಡಕ್ಕೆ ನೆರವಾದರು. ಪಡಿಕ್ಕಲ್‌ ಅವರ ಇನ್ನಿಂಗ್ಸ್‌ನಲ್ಲಿ 4 ಬೌಂಡರಿ ಸೇರಿತ್ತು. ಅಜಿತ್‌ ಕಾರ್ತಿಕ್‌ 38* ರನ್‌ ಗಳಿಸಲು 5.2 ಓವರ್‌ಗಳಲ್ಲು ವಿವಿಯೋಗಿಸಿದರು. ಇದು ಮಂದಗತಿಯ ರನ್‌ ಗಳಿಕೆಯಾಗಿ ಕಾಣಬಹುದು, ಆದರೆ ವಿಕೆಟ್‌ ಉರುಳುತ್ತಿರುವಾಗ ನಾಯಕನಿಗೆ ಉತ್ತಮ ರೀತಿಯಲ್ಲಿ ಸಾಥ್‌ ನೀಡಿ ಇನ್ನಿಂಗ್ಸ್‌ ಕಟ್ಟುವುದೂ ಮುಖ್ಯವಾಗಿತ್ತು. ಕಾರ್ತಿಕ್‌ ಇನ್ನಿಂಗ್ಸ್‌ನಲ್ಲಿ 3 ಬೌಂಡರಿ ಹಾಗೂ 1 ಸಿಕ್ಸರ್‌ ಸೇರಿತ್ತು.

ಕೊನೆಯ ಕ್ಷಣದಲ್ಲಿ ರಿತೇಶ್‌ ಭಟ್ಕಳ್‌ 6 ಎಸೆತಗಳನ್ನೆದುರಿಸಿ ಗಳಿಸಿದ 18 ರನ್‌ನಿಂದಾಗಿ ಗುಲ್ಬರ್ಗ ಸವಾಲಿನ ಮೊತ್ತ ಗಳಿಸುವಲ್ಲಿ ಯಶಸ್ವಿಯಾಯಿತು. ಮಂಗಳೂರು ಯುನೈಟೆಡ್‌ ಪರ ಎಚ್‌.ಎಸ್‌ ಶರತ್‌ ಹಾಗೂ ವೈಶಾಖ್‌ ವಿಜಯ್‌ ಕುಮಾರ್‌ ತಲಾ 2 ವಿಕೆಟ್‌ ಗಳಿಸಿದರು.

ಸಂಕ್ಷಿಪ್ತ ಸ್ಕೋರ್‌:

ಗುಲ್ಬರ್ಗ ಮಿಸ್ಟಿಕ್ಸ್‌: 20 ಓವರ್‌ಗಳಲ್ಲಿ 6 ವಿಕೆಟ್‌ಗೆ 164 (ಮನೀಶ್‌ ಪಾಂಡೆ 58, ದೇವದತ್ತ ಪಡಿಕ್ಕಲ್‌ 25, ಅಜಯ್‌ ಕಾರ್ತಿಕ್‌ 38* ವೈಶಾಖ್‌ ವಿಜಯ್‌ ಕುಮಾರ್‌ 31ಕ್ಕೆ 2, ಶರತ್‌ 43ಕ್ಕೆ 2)

ಮಂಗಳೂರು ಯುನೈಟೆಡ್‌: 18.4 ಓವರ್‌ಗಳಲ್ಲಿ 136 (ಅಭಿನವ್‌ ಮನೋಹರ್‌ 51, ಸುಜಯ್‌ ಸತರ್‌ 22, ಕೌಶಲ್‌ ವಾಧ್ವಾನಿ 48ಕ್ಕೆ 3, ಕಾರ್ತಿಕ್‌ 9ಕ್ಕೆ 2, ಪವನ್‌ ಭಾಟಿಯಾ 26ಕ್ಕೆ 2)

andolanait

Recent Posts

ವಾಹನ ದಟ್ಟನೆ : ಸುಗಮ ಸಂಚಾರಕ್ಕೆ ರೈಲ್ವೆ ಅಂಡರ್‌ ಬ್ರಿಡ್ಜ್‌ ವಿಸ್ತರಿಸಲು ಮನವಿ

ಮೈಸೂರು : ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ನಿಯಂತ್ರಣ ಹಾಗೂ ಸುಗಮ ಸಂಚಾರಕ್ಕಾಗಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು…

6 hours ago

ಮೈಸೂರು–ಜಲ್ಪೈಗುಡಿ ನಡುವೆ ವಿಶೇಷ ರೈಲು ಸಂಚಾರ

ಮೈಸೂರು : ಬೇಸಿಗೆ ರಜೆಯಲ್ಲಿ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು, ನೈರುತ್ಯ ರೈಲ್ವೆಯು ಮೈಸೂರು- ಜಲ್ಪೈಗುರಿ ಜಂಕ್ಷನ್‌ ನಡುವೆ ವಿಶೇಷ ಎಕ್ಸ್‌ಪ್ರೆಸ್…

6 hours ago

ಯಮುನಾ ನದಿಯಲ್ಲಿ ಮುಳುಗಿದ ಪ್ರವಾಸಿಗರ ದೋಣಿ ; 6 ಮಂದಿ ಸಾವು, ಹಲವರು ನಾಪತ್ತೆ

ಮಥುರಾ : ಬೃಂದಾವನದ ಕೇಶಿ ಘಾಟ್ ಸಮೀಪ ಯಮುನಾ ನದಿಯಲ್ಲಿ ಪ್ರವಾಸಿಗರಿಂದ ತುಂಬಿದ ದೋಣಿ ಪಲ್ಟಿಯಾಗಿ ಆರು ಮಂದಿ ಸ್ಥಳದಲ್ಲೇ…

7 hours ago

ಹಡಗುಗಳ ಮೇಲಿನ ಶುಲ್ಕ ನಿಲ್ಲಿಸಿ ; ಇರಾನ್‌ಗೆ ಟ್ರಂಪ್ ಸೂಚನೆ

ಟೆಹ್ರಾನ್ : ಇರಾನ್ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳ ಮೇಲೆ ಶುಲ್ಕ ವಿಧಿಸುತ್ತಿದ್ದರೆ, ಅದು ತಕ್ಷಣವೇ ಅದನ್ನು ನಿಲ್ಲಿಸಬೇಕು…

8 hours ago

ನಂಜನಗೂಡು | ದೇವರಾಯಶೆಟ್ಟಿಪುರದಲ್ಲಿ ಚಿರತೆ ಪ್ರತ್ಯಕ್ಷ ; ಗ್ರಾಮಸ್ಥರಲ್ಲಿ ಆತಂಕ

ಮಲ್ಕುಂಡಿ : ರಾತ್ರಿ ವೇಳೆ ರಸ್ತೆ ಮಧ್ಯೆ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ದೇವರಾಯಶೆಟ್ಟಿಪುರ ಗ್ರಾಮದಿಂದ ಹುರ ಗ್ರಾಮಕ್ಕೆ ತೆರಳುವ ಮುಖ್ಯ…

8 hours ago

ಹನೂರು | ಪ್ರತ್ಯೇಕ ಮನೆಕಳ್ಳತನ ; ಐವರ ಬಂಧನ

ಹನೂರು : ಮೂರು ಪ್ರತ್ಯೇಕ ಮನೆಗಳಲ್ಲಿ ಕಳ್ಳತನ ನಡೆಸಿ ನಗದು ಹಾಗೂ ಚಿನ್ನ ದೋಚಿಕೊಂಡು ಪರಾರಿಯಾಗಿದ್ದ ಐವರು ಆರೋಪಿಗಳನ್ನು ರಾಮಾಪುರ…

10 hours ago