ಕ್ರೀಡೆ

ಮನೀಶ್‌ ಪಾಂಡೆ ಪಡೆಗೆ ರೋಚಕ ಜಯ

ಮೈಸೂರು :ಬ್ಯಾಟಿಂಗ್‌ ಮತ್ತು ಬೌಲಿಂಗ್‌ನಲ್ಲಿ ಮಿಂಚಿದ ಗುಲ್ಬರ್ಗ ಮಿಸ್ಟಿಕ್ಸ್‌ ತಂಡ ಮಹಾರಾಜ ಟ್ರೋಫಿಯಲ್ಲಿ ಮಂಗಳೂರು ಯುನೈಟೆಡ್‌ ವಿರುದ್ಧದ ಪಂದ್ಯದಲ್ಲಿ 28 ರನ್‌ಗಳ ಅಂತರದಲ್ಲಿ ಅದ್ಭುತ ಜಯ ದಾಖಲಿಸಿದೆ.

ಜಯ ಗಳಿಸಲು ಗುಲ್ಬರ್ಗ ತಂಡ ಮಂಗಳೂರಿಗೆ 165 ರನ್‌ಗಳ ಕಠಿಣ ಸವಾಲು ನೀಡಿತ್ತು. ಅಭಿನವ್‌ ಮನೋಹರ್‌ (51) ಕ್ರೀಸಿನಲ್ಲಿ ಇರುವವರೆಗೂ ಮಂಗಳೂರು ಗೆಲ್ಲುವ ಲಕ್ಷಣ ತೋರಿತ್ತು, ಆದರೆ ಗುಲ್ಬರ್ಗದ ಬೌಲರ್‌ಗಳಾದ ವಾಧ್ವಾನಿ ಹಾಗೂ ಕಾರ್ತಿಕ್‌ ಎರಡು ಓವರ್‌ಗಳಲ್ಲಿ 5 ವಿಕೆಟ್‌ ಹಂಚಿಕೊಳ್ಳುವ ಮೂಲಕ ಮಂಗಳೂರು ಸೋಲಿನ ಅಂಚಿಗೆ ಸಿಲುಕಿತು. ಅಂತಿಮವಾಗಿ 8 ಎಸೆತ ಬಾಕಿ ಇರುವಾಗಲೇ ಮಂಗಳೂರು 136 ರನ್‌ ಗಳಿಸಿ ಸರ್ವ ಪತನ ಕಂಡಿತು.

ಸವಾಲಿನ ಮೊತ್ತ ಗಳಿಸಿದ ಗುಲ್ಬರ್ಗ:

ನಾಯಕ ಮನೀಶ್‌ ಪಾಂಡೆ (58) ಹಾಗೂ ಕೋದಂಡ ಅಜಿತ್‌ (38) ಅವರ ಆಕರ್ಷಕ ಬ್ಯಾಟಿಂಗ್‌ ನೆರವಿನಿಂದ ಗುಲ್ಬರ್ಗಾ ಮಿಸ್ಟಿಕ್ಸ್‌ ತಂಡ ಮಂಗಳೂರು ಯುನೈಟೆಡ್‌ ವಿರುದ್ಧ 6 ವಿಕೆಟ್‌ಗೆ 164 ರನ್‌ ಗಳಿಸಿತು. ದೇವದತ್ತ ಪಡಿಕ್ಕಲ್‌ 25 ರನ್‌ ಗಳಿಸಿ ಗುಲ್ಬರ್ಗಕ್ಕೆ ಉತ್ತಮ ಆರಂಭ ಕಲ್ಪಿಸಿದ್ದರು.

ನಾಯಕ ಪಾಂಡೆ 40 ಎಸೆಗಳನ್ನೆದುರಿಸಿ 4 ಬೌಂಡರಿ ಹಾಗೂ 2 ಸಿಕ್ಸರ್‌ ನೆರವಿನಿಂದ 58 ರನ್‌ ಗಳಿಸಿ ಕುಸಿದ ತಂಡಕ್ಕೆ ನೆರವಾದರು. ಪಡಿಕ್ಕಲ್‌ ಅವರ ಇನ್ನಿಂಗ್ಸ್‌ನಲ್ಲಿ 4 ಬೌಂಡರಿ ಸೇರಿತ್ತು. ಅಜಿತ್‌ ಕಾರ್ತಿಕ್‌ 38* ರನ್‌ ಗಳಿಸಲು 5.2 ಓವರ್‌ಗಳಲ್ಲು ವಿವಿಯೋಗಿಸಿದರು. ಇದು ಮಂದಗತಿಯ ರನ್‌ ಗಳಿಕೆಯಾಗಿ ಕಾಣಬಹುದು, ಆದರೆ ವಿಕೆಟ್‌ ಉರುಳುತ್ತಿರುವಾಗ ನಾಯಕನಿಗೆ ಉತ್ತಮ ರೀತಿಯಲ್ಲಿ ಸಾಥ್‌ ನೀಡಿ ಇನ್ನಿಂಗ್ಸ್‌ ಕಟ್ಟುವುದೂ ಮುಖ್ಯವಾಗಿತ್ತು. ಕಾರ್ತಿಕ್‌ ಇನ್ನಿಂಗ್ಸ್‌ನಲ್ಲಿ 3 ಬೌಂಡರಿ ಹಾಗೂ 1 ಸಿಕ್ಸರ್‌ ಸೇರಿತ್ತು.

ಕೊನೆಯ ಕ್ಷಣದಲ್ಲಿ ರಿತೇಶ್‌ ಭಟ್ಕಳ್‌ 6 ಎಸೆತಗಳನ್ನೆದುರಿಸಿ ಗಳಿಸಿದ 18 ರನ್‌ನಿಂದಾಗಿ ಗುಲ್ಬರ್ಗ ಸವಾಲಿನ ಮೊತ್ತ ಗಳಿಸುವಲ್ಲಿ ಯಶಸ್ವಿಯಾಯಿತು. ಮಂಗಳೂರು ಯುನೈಟೆಡ್‌ ಪರ ಎಚ್‌.ಎಸ್‌ ಶರತ್‌ ಹಾಗೂ ವೈಶಾಖ್‌ ವಿಜಯ್‌ ಕುಮಾರ್‌ ತಲಾ 2 ವಿಕೆಟ್‌ ಗಳಿಸಿದರು.

ಸಂಕ್ಷಿಪ್ತ ಸ್ಕೋರ್‌:

ಗುಲ್ಬರ್ಗ ಮಿಸ್ಟಿಕ್ಸ್‌: 20 ಓವರ್‌ಗಳಲ್ಲಿ 6 ವಿಕೆಟ್‌ಗೆ 164 (ಮನೀಶ್‌ ಪಾಂಡೆ 58, ದೇವದತ್ತ ಪಡಿಕ್ಕಲ್‌ 25, ಅಜಯ್‌ ಕಾರ್ತಿಕ್‌ 38* ವೈಶಾಖ್‌ ವಿಜಯ್‌ ಕುಮಾರ್‌ 31ಕ್ಕೆ 2, ಶರತ್‌ 43ಕ್ಕೆ 2)

ಮಂಗಳೂರು ಯುನೈಟೆಡ್‌: 18.4 ಓವರ್‌ಗಳಲ್ಲಿ 136 (ಅಭಿನವ್‌ ಮನೋಹರ್‌ 51, ಸುಜಯ್‌ ಸತರ್‌ 22, ಕೌಶಲ್‌ ವಾಧ್ವಾನಿ 48ಕ್ಕೆ 3, ಕಾರ್ತಿಕ್‌ 9ಕ್ಕೆ 2, ಪವನ್‌ ಭಾಟಿಯಾ 26ಕ್ಕೆ 2)

andolanait

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

6 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

14 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

14 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

14 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

17 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

17 hours ago