ಸೂರತ್ : ಗುಜರಾತಿನ ಸೂರತ್ನಲ್ಲಿ ಭಾನುವಾರ ನಡೆದ 2024ರ ರಣಜಿ ಟ್ರೋಫಿ ಪಂದ್ಯಾವಳಿಯ ಎಲೈಟ್ ಗ್ರೂಪ್ ಸಿ ಪಂದ್ಯದಲ್ಲಿ ರೈಲ್ವೇಸ್ ವಿರುದ್ಧ ಕರ್ನಾಟಕ ತಂಡವು ಒಂದು ವಿಕೆಟ್ ಅಂತರದ ರೋಚಕ ಗೆಲುವು ಸಾಧಿಸಿದೆ.
ಒತ್ತಡದಲ್ಲಿಯೂ ಕರ್ನಾಟಕ ತಂಡದ ಗೆಲುವಿಗೆ ಸ್ಟಾರ್ ಬ್ಯಾಟರ್ ಮನೀಶ್ ಪಾಂಡೆ ಏಕಾಂಗಿ ಹೋರಾಟ ನಡೆಸಿ ಪಂದ್ಯವನ್ನು ಗೆಲ್ಲಿಸಿದರು.
ಗೆಲುವಿಗೆ ರೈಲ್ವೇಸ್ ನೀಡಿದ 226 ರನ್ಗಳ ಗುರಿಯನ್ನು ಬೆನ್ನಟ್ಟಿದ ಕರ್ನಾಟಕ ತಂಡಕ್ಕೆ ಮನೀಶ್ ಪಾಂಡೆ 121 ಎಸೆತಗಳಲ್ಲಿ 6 ಬೌಂಡರಿ ಹಾಗೂ 1 ಸಿಕ್ಸರ್ ಸಮೇತ ಅಜೇಯ 67 ರನ್ ಗಳಿಸಿ ಆಸರೆಯಾದರು.
ಎದುರಾಳಿ ತಂಡದ ಬೌಲರ್ಗಳು 6 ವಿಕೆಟ್ಗೆ 99 ರನ್ಗಳಿಸಿ ತಗ್ಗಿಸಿದ ನಂತರ, ಮನೀಶ್ ಪಾಂಡೆ ಅವರು ಶ್ರೀನಿವಾಸ್ ಶರತ್ ಮತ್ತು ವಿಜಯ್ಕುಮಾರ್ ವೈಶಾಕ್ ಅವರೊಂದಿಗೆ ನಿರ್ಣಾಯಕ ಜೊತೆಯಾಟದ ಮೂಲಕ ಕರ್ನಾಟಕ ತಂಡವನ್ನು ಗೆಲುವಿನೆಡೆಗೆ ಕೊಂಡೊಯ್ದರು. ಅಲ್ಲದೆ ಕೊನೆಯಲ್ಲಿ ವಿದ್ವತ್ ಕಾವೇರಪ್ಪ ಮತ್ತು ವಾಸವಿ ಕೌಶಿಕ್ ಜೊತೆಗೂಡಿ ಮನೀಶ್ ಪಾಂಡೆ ತಮ್ಮ ತಂಡವನ್ನು ಗೆಲುವಿನ ದಡ ಸೇರಿಸಿದರು.
ಕರ್ನಾಟಕ ತಂಡದ ಇನ್ನಿಂಗ್ಸ್ ಆರಂಭಿಸಿದ ಡಿ. ನಿಶ್ಚಲ್ ಮತ್ತು ರವಿಕುಮಾರ್ ಸಮರ್ಥ್ ಉತ್ತಮ ಆರಂಭ ನೀಡಲಿಲ್ಲ. ಕೇವಲ 1 ರನ್ ಗಳಿಸಿದ್ದ ಡಿ. ನಿಶ್ಚಲ್ ಔಟಾದರು. ನಂತರ ಬಂದ ಕೆವಿ ಅನೀಶ್ ಮತ್ತೊಂದು ಕಡೆಯಿಂದ ಸಮರ್ಥ್ ಉತ್ತಮ ಸಾಥ್ ನೀಡಿದರು.
ಕೆವಿ ಅನೀಶ್ ನಿರ್ಗಮಿಸಿದ ಬಳಿಕ ಒಂದರ ಹಿಂದೆ ಒಂದು ವಿಕೆಟ್ಗಳು ಬೀಳಲು ಪ್ರಾರಂಭಿಸಿದವು. ಟರ್ನ್ ಮತ್ತು ಬೌನ್ಸ್ ಕರ್ನಾಟಕದ ಮಧ್ಯಮ ಕ್ರಮಾಂಕದ ಬ್ಯಾಟರ್ಗಳು ಹೆಣಗಾಡಿದರು. ನಿಕಿನ್ ಜೋಸ್ ಸೊನ್ನೆ ಸುತ್ತಿದರೆ, ಹಾರ್ದಿಕ್ ರಾಜ್ 14 ರನ್ ಗಳಿಸಿದರು. ಕಿಶನ್ ಬೆದರೆ ಸೊನ್ನೆಗೆ ಔಟಾದರು. ಆಗ ಕರ್ನಾಟಕವು ಸೋಲಿನತ್ತ ಮುಖ ಮಾಡಿತ್ತು. ಆಗ ಬಂದ ಶ್ರೀನಿವಾಸ್ ಶರತ್ 23 ರನ್ ಗಳಿಸಿ ಮನೀಶ್ ಪಾಂಡೆಗೆ ಬೆಂಬಲ ನೀಡಿದರೆ, ವಿಜಯ್ ಕುಮಾರ್ ವೈಶಾಕ್ 38 ರನ್ ಗಳಿಸಿದರು. ಕೊನೆಯಲ್ಲಿ ವಿಧ್ವತ್ ಕಾವೇರಪ್ಪ 8 ರನ್ ಮತ್ತು ವಾಸುಕಿ ಕೌಶಿಕ್ 1 ರನ್ ಗಳಿಸಿ ಕರ್ನಾಟಕ ಗೆಲ್ಲಲು ನೆರವಾದರು.
ರೈಲ್ವೇಸ್ ತಂಡದ ಪರ ಆಕಾಶ್ ಪಾಂಡೆ 34.4 ಓವರ್ಗಳಲ್ಲಿ 94 ರನ್ ನೀಡಿ 5 ವಿಕೆಟ್ ಕಬಳಿಸಿದರೆ, ಹಿಮಾಂಶು ಸಂಗ್ವಾನ್ 2 ವಿಕೆಟ್, ಮೊಹಮ್ಮದ್ ಸೈಫ್ 2 ವಿಕೆಟ್ ಪಡೆದರು.
ಇದಕ್ಕೂ ಮುನ್ನ ಮೊದಲ ಇನ್ನಿಂಗ್ಸ್ನಲ್ಲಿ ರೈಲ್ವೇಸ್ ತಂಡ 155 ರನ್ಗಳಿಗೆ ಆಲೌಟ್ ಆಗಿತ್ತು. ಪ್ರತ್ಯುತ್ತರವಾಗಿ, ಕರ್ನಾಟಕ ತಂಡ ತನ್ನ ಮೊದಲ ಇನ್ನಿಂಗ್ಸ್ ಆರಂಭಿಸಿ 174 ರನ್ಗಳಿಗೆ ಸರ್ವಪತನ ಕಂಡಿತು ಮತ್ತು 19 ರನ್ಗಳ ಅಲ್ಪ ಮುನ್ನಡೆ ಸಾಧಿಸಿತು. ನಂತರ ತನ್ನ ಎರಡನೇ ಇನ್ನಿಂಗ್ಸ್ ಆಡಿದ ರೈಲ್ವೇಸ್ ತಂಡ 244 ರನ್ಗಳಿಗೆ ಮತ್ತೆ ಆಲೌಟ್ ಆಯಿತು. ಕೊನೆಯ ಇನ್ನಿಂಗ್ಸ್ನಲ್ಲಿ ಗೆಲುವಿಗೆ 226 ರನ್ ಗುರಿ ಪಡೆ ಕರ್ನಾಟಕ ತಂಡ 9 ವಿಕೆಟ್ ಕಳೆದುಕೊಂಡು ಗುರಿ ತಲುಪಿತು.
ಈ ಮೂಲಕ 2024ರ ರಣಜಿ ಟ್ರೋಫಿಯಲ್ಲಿ ಕರ್ನಾಟಕ ತಂಡ ಆಡಿದ 5 ಪಂದ್ಯಗಳಲ್ಲಿ 3 ಗೆಲುವು, 1 ಸೋಲು ಮತ್ತು 1 ಡ್ರಾದೊಂದಿಗೆ ಅಂಕಪಟ್ಟಿಯಲ್ಲಿ 21 ಅಂಕಗಳನ್ನು ಕಲೆಹಾಕಿದ್ದು, ಸಿ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ.
ಬೆಂಗಳೂರು: ಕೊಳ್ಳೇಗಾಲ ನಗರಸಭೆ ವ್ಯಾಪ್ತಿಯ ಬಸ್ತೀಪುರದ ಬಡ ಕುಟುಂಬಗಳಿಗೆ ಹಕ್ಕು ಪತ್ರ ನೀಡುವ ಬಗ್ಗೆ ಸ್ಥಳೀಯ ಶಾಸಕರೊಂದಿಗೆ ಚರ್ಚಿಸಿ ಕ್ರಮ…
ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಾಣಿಗಳಿಗೆ ಕುಡಿಯುವ ನೀರಿನ ಸಮಸ್ಯೆಗೆ ಈಗ ಬ್ರೇಕ್ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಅರಣ್ಯಾಧಿಕಾರಿಗಳು…
ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.…
ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…
ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…
ಬೆಂಗಳೂರು: ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…