ಕ್ರೀಡೆ

ಮನೀಶ್ ಪಾಂಡೆ ಏಕಾಂಗಿ ಹೋರಾಟ: ರೈಲ್ವೇಸ್ ವಿರುದ್ಧ ಕರ್ನಾಟಕಕ್ಕೆ ರೋಚಕ ಜಯ

ಸೂರತ್ : ಗುಜರಾತಿನ ಸೂರತ್‌ನಲ್ಲಿ ಭಾನುವಾರ ನಡೆದ 2024ರ ರಣಜಿ ಟ್ರೋಫಿ ಪಂದ್ಯಾವಳಿಯ ಎಲೈಟ್ ಗ್ರೂಪ್ ಸಿ ಪಂದ್ಯದಲ್ಲಿ ರೈಲ್ವೇಸ್ ವಿರುದ್ಧ ಕರ್ನಾಟಕ ತಂಡವು ಒಂದು ವಿಕೆಟ್‌ ಅಂತರದ ರೋಚಕ ಗೆಲುವು ಸಾಧಿಸಿದೆ.

ಒತ್ತಡದಲ್ಲಿಯೂ ಕರ್ನಾಟಕ ತಂಡದ ಗೆಲುವಿಗೆ ಸ್ಟಾರ್ ಬ್ಯಾಟರ್ ಮನೀಶ್ ಪಾಂಡೆ ಏಕಾಂಗಿ ಹೋರಾಟ ನಡೆಸಿ ಪಂದ್ಯವನ್ನು ಗೆಲ್ಲಿಸಿದರು.

ಗೆಲುವಿಗೆ ರೈಲ್ವೇಸ್ ನೀಡಿದ 226 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಕರ್ನಾಟಕ ತಂಡಕ್ಕೆ ಮನೀಶ್ ಪಾಂಡೆ 121 ಎಸೆತಗಳಲ್ಲಿ 6 ಬೌಂಡರಿ ಹಾಗೂ 1 ಸಿಕ್ಸರ್ ಸಮೇತ ಅಜೇಯ 67 ರನ್ ಗಳಿಸಿ ಆಸರೆಯಾದರು.

ಎದುರಾಳಿ ತಂಡದ ಬೌಲರ್ಗಳು 6 ವಿಕೆಟ್‌ಗೆ 99 ರನ್‌ಗಳಿಸಿ ತಗ್ಗಿಸಿದ ನಂತರ, ಮನೀಶ್ ಪಾಂಡೆ ಅವರು ಶ್ರೀನಿವಾಸ್ ಶರತ್ ಮತ್ತು ವಿಜಯ್ಕುಮಾರ್ ವೈಶಾಕ್ ಅವರೊಂದಿಗೆ ನಿರ್ಣಾಯಕ ಜೊತೆಯಾಟದ ಮೂಲಕ ಕರ್ನಾಟಕ ತಂಡವನ್ನು ಗೆಲುವಿನೆಡೆಗೆ ಕೊಂಡೊಯ್ದರು. ಅಲ್ಲದೆ ಕೊನೆಯಲ್ಲಿ ವಿದ್ವತ್ ಕಾವೇರಪ್ಪ ಮತ್ತು ವಾಸವಿ ಕೌಶಿಕ್ ಜೊತೆಗೂಡಿ ಮನೀಶ್ ಪಾಂಡೆ ತಮ್ಮ ತಂಡವನ್ನು ಗೆಲುವಿನ ದಡ ಸೇರಿಸಿದರು.

ಕರ್ನಾಟಕ ತಂಡದ ಇನ್ನಿಂಗ್ಸ್ ಆರಂಭಿಸಿದ ಡಿ. ನಿಶ್ಚಲ್ ಮತ್ತು ರವಿಕುಮಾರ್ ಸಮರ್ಥ್ ಉತ್ತಮ ಆರಂಭ ನೀಡಲಿಲ್ಲ. ಕೇವಲ 1 ರನ್ ಗಳಿಸಿದ್ದ ಡಿ. ನಿಶ್ಚಲ್ ಔಟಾದರು. ನಂತರ ಬಂದ ಕೆವಿ ಅನೀಶ್ ಮತ್ತೊಂದು ಕಡೆಯಿಂದ ಸಮರ್ಥ್ ಉತ್ತಮ ಸಾಥ್ ನೀಡಿದರು.

ಕೆವಿ ಅನೀಶ್ ನಿರ್ಗಮಿಸಿದ ಬಳಿಕ ಒಂದರ ಹಿಂದೆ ಒಂದು ವಿಕೆಟ್ಗಳು ಬೀಳಲು ಪ್ರಾರಂಭಿಸಿದವು. ಟರ್ನ್ ಮತ್ತು ಬೌನ್ಸ್ ಕರ್ನಾಟಕದ ಮಧ್ಯಮ ಕ್ರಮಾಂಕದ ಬ್ಯಾಟರ್ಗಳು ಹೆಣಗಾಡಿದರು. ನಿಕಿನ್ ಜೋಸ್ ಸೊನ್ನೆ ಸುತ್ತಿದರೆ, ಹಾರ್ದಿಕ್ ರಾಜ್ 14 ರನ್ ಗಳಿಸಿದರು. ಕಿಶನ್ ಬೆದರೆ ಸೊನ್ನೆಗೆ ಔಟಾದರು. ಆಗ ಕರ್ನಾಟಕವು ಸೋಲಿನತ್ತ ಮುಖ ಮಾಡಿತ್ತು. ಆಗ ಬಂದ ಶ್ರೀನಿವಾಸ್ ಶರತ್ 23 ರನ್ ಗಳಿಸಿ ಮನೀಶ್ ಪಾಂಡೆಗೆ ಬೆಂಬಲ ನೀಡಿದರೆ, ವಿಜಯ್ ಕುಮಾರ್‌ ವೈಶಾಕ್ 38 ರನ್ ಗಳಿಸಿದರು. ಕೊನೆಯಲ್ಲಿ ವಿಧ್ವತ್ ಕಾವೇರಪ್ಪ 8 ರನ್ ಮತ್ತು ವಾಸುಕಿ ಕೌಶಿಕ್ 1 ರನ್ ಗಳಿಸಿ ಕರ್ನಾಟಕ ಗೆಲ್ಲಲು ನೆರವಾದರು.

ರೈಲ್ವೇಸ್ ತಂಡದ ಪರ ಆಕಾಶ್ ಪಾಂಡೆ 34.4 ಓವರ್ಗಳಲ್ಲಿ 94 ರನ್ ನೀಡಿ 5 ವಿಕೆಟ್ ಕಬಳಿಸಿದರೆ, ಹಿಮಾಂಶು ಸಂಗ್ವಾನ್ 2 ವಿಕೆಟ್, ಮೊಹಮ್ಮದ್ ಸೈಫ್ 2 ವಿಕೆಟ್ ಪಡೆದರು.

ಇದಕ್ಕೂ ಮುನ್ನ ಮೊದಲ ಇನ್ನಿಂಗ್ಸ್ನಲ್ಲಿ ರೈಲ್ವೇಸ್ ತಂಡ 155 ರನ್ಗಳಿಗೆ ಆಲೌಟ್ ಆಗಿತ್ತು. ಪ್ರತ್ಯುತ್ತರವಾಗಿ, ಕರ್ನಾಟಕ ತಂಡ ತನ್ನ ಮೊದಲ ಇನ್ನಿಂಗ್ಸ್ ಆರಂಭಿಸಿ 174 ರನ್‌ಗಳಿಗೆ ಸರ್ವಪತನ ಕಂಡಿತು ಮತ್ತು 19 ರನ್‌ಗಳ ಅಲ್ಪ ಮುನ್ನಡೆ ಸಾಧಿಸಿತು. ನಂತರ ತನ್ನ ಎರಡನೇ ಇನ್ನಿಂಗ್ಸ್ ಆಡಿದ ರೈಲ್ವೇಸ್ ತಂಡ 244 ರನ್‌ಗಳಿಗೆ ಮತ್ತೆ ಆಲೌಟ್ ಆಯಿತು. ಕೊನೆಯ ಇನ್ನಿಂಗ್ಸ್‌ನಲ್ಲಿ ಗೆಲುವಿಗೆ 226 ರನ್‌ ಗುರಿ ಪಡೆ ಕರ್ನಾಟಕ ತಂಡ 9 ವಿಕೆಟ್ ಕಳೆದುಕೊಂಡು ಗುರಿ ತಲುಪಿತು.

ಈ ಮೂಲಕ 2024ರ ರಣಜಿ ಟ್ರೋಫಿಯಲ್ಲಿ ಕರ್ನಾಟಕ ತಂಡ ಆಡಿದ 5 ಪಂದ್ಯಗಳಲ್ಲಿ 3 ಗೆಲುವು, 1 ಸೋಲು ಮತ್ತು 1 ಡ್ರಾದೊಂದಿಗೆ ಅಂಕಪಟ್ಟಿಯಲ್ಲಿ 21 ಅಂಕಗಳನ್ನು ಕಲೆಹಾಕಿದ್ದು, ಸಿ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ.

andolanait

Recent Posts

ಸಾರಿಗೆ ನೌಕರರ ಒತ್ತಡಕ್ಕೆ ಮಣಿದ ಸರ್ಕಾರ : ವೇತನ ಪರಿಷ್ಕರಣೆಗೆ ಒಪ್ಪಿದೆ ; ರದ್ದಾಗುತ್ತಾ ಮುಷ್ಕರ?

ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯ ಸಾರಿಗೆ ನಿಗಮಗಳ (KSRTC, BMTC, NWKRTC, KKRTC) ಸಿಬ್ಬಂದಿಗೆ 26 ತಿಂಗಳ ಬಾಕಿ…

2 hours ago

ಮಹಾರಾಷ್ಟ್ರ | ಮುಸ್ಲಿಮರಿಗೆ ನೀಡಲಾಗಿದ್ದ ಶೇ.5ಮೀಸಲಾತಿ ರದ್ದು

ಮುಂಬೈ : ಮಹಾರಾಷ್ಟ್ರದ ಮಹಾಯುತಿ ಸರ್ಕಾರವು ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಲಾಗಿದ್ದ ಶೇಕಡಾ 5ರಷ್ಟು ಮೀಸಲಾತಿಯನ್ನು…

2 hours ago

ಮೈಸೂರು | ಹೀಲಿಯಂ ಅನಿಲ ಬಲೂನ್‌ ನಿಷೇಧ ; ಕಮಿಷನರ್‌ ಆದೇಶ

ಮೈಸೂರು : ಇತ್ತೀಚಿಗೆ ನಗರದ ಅರಮನೆ ಸಮೀಪದಲ್ಲಿ ಸಂಭವಿಸಿದ ಹೀಲಿಯಂ ಸಿಲಿಂಡರ್ ಸ್ಪೋಟ ಘಟನೆಗೆ ಸಂಬಂಧಿದಂತೆ, ಸಾರ್ವಜನಿಕ ಶಾಂತಿ, ಸುರಕ್ಷತೆ…

3 hours ago

ನಮೀಬಿಯಾ ವಿರುದ್ಧ ಗೆಲುವು : ಸೂಪರ್‌ 8 ಸುತ್ತಿಗೆ ಎಂಟ್ರಿ ಕೊಟ್ಟ ಪಾಕಿಸ್ತಾನ

ಕೊಲಂಬೊ : ಐಸಿಸಿ ಪುರುಷರ ಟಿ20 ವರ್ಲ್ಡ್ ಕಪ್ 2026ರಲ್ಲಿ ಪಾಕಿಸ್ತಾನ ತಂಡವು ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ನಮೀಬಿಯಾವನ್ನು…

3 hours ago

ಸೇನಾ ವಿಚಾರ ಪ್ರಸ್ತಾಪಿಸಿದ ರಾಹುಲ್‌ ಗಾಂಧಿ: ಲೋಕಸಭೆಯಲ್ಲಿ ಗದ್ದಲ, ಕೋಲಾಹಲ

ನವದೆಹಲಿ: ಎಂ.ಎಂ.ನರವಣೆ ಅವರ ಅಪ್ರಕಟಿತ ಪುಸ್ತಕದ ಕುರಿತು ನಿಯತಕಾಲಿಕೆಯೊಂದರಲ್ಲಿ ಪ್ರಕಟವಾದ ಲೇಖನದ ಪ್ರತಿಯನ್ನು ರಾಹುಲ್‌ ಗಾಂಧಿ ಸದನದಲ್ಲಿ ಪ್ರದರ್ಶಿಸಿದರು. ಈ…

3 hours ago

ಭಾರತದಲ್ಲಿ ಎಐ ಪ್ರಯಾಣ ಅಸಾಧಾರಣವಾಗಿರಲಿದೆ : ಗೂಗಲ್‌ ಸಿಇಒ ಸುಂದರ್‌ ಪಿಚೈ

ಹೊಸದಿಲ್ಲಿ : ಗೂಗಲ್ ಸಿಇಒ ಸುಂದರ್ ಪಿಚೈ ಅವರು ಭಾರತದ ಕೃತಕ ಬುದ್ಧಿಮತ್ತೆ (AI) ಪ್ರಯಾಣವು "ಅಸಾಧಾರಣ" ಆಗಿರುವುದಾಗಿ ಹೇಳಿದ್ದಾರೆ.…

3 hours ago