ಕ್ರೀಡೆ

Paris Olympics 2024: ಮುಕ್ತಾಯ ಸಮಾರಂಭದಲ್ಲಿ ಧ್ವಜ ಹಿಡಿದು ಸಾಗಲಿರುವ ಮನು ಭಾಕರ್‌

ಪ್ಯಾರಿಸ್‌: ವಿಶ್ವ ವಿಖ್ಯಾತ ಕ್ರೀಡಾಕೂಟ ಒಲಂಪಿಕ್ಸ್‌ ಮುಕ್ತಾಯ ಸಮಾರಂಭ ಇದೇ ಭಾನುವಾರ (ಆ.11) ನಡೆಯಲಿದ್ದು, ಇದರಲ್ಲಿ ಭಾರತದ ಪರವಾಗಿ ಶೂಟರ್‌ ಮನು ಭಾಕರ್‌ ಅವರು ಭಾರತದ ಧ್ವಜ ಹಿಡಿದು ಸಾಗಲಿದ್ದಾರೆ.

ಪ್ರಸಕ್ತ ಪ್ಯಾರಿಸ್‌ ಒಲಂಪಿಕ್ಸ್‌ ಕ್ರೀಡಾಕೂಟದಲ್ಲಿ ಸತತ ಎರಡು ಪದಕಗಳನ್ನು ಗೆದ್ದಿರುವ ಮನು ಭಾಕರ್‌ ಅವರು ಮುಕ್ತಾಯ ಸಮಾರಂಭದಲ್ಲಿ ಭಾರತ ಧ್ವಜ ಹಿಡಿದು ಸಾಗುವ ಗೌರವಕ್ಕೆ ಭಾಜನರಾಗಿದ್ದಾರೆ.

ಒಲಂಪಿಕ್ಸ್‌ನಲ್ಲಿ ಅದ್ಬುತ ಪ್ರದರ್ಶನ ತೋರಿರುವ ಭಾಕರ್‌ ಅವರು ಧ್ವಜ ಹಿಡಿಯುವ ಗೌರವಕ್ಕೆ ಅರ್ಹರು. ಭಾಕರ್‌ ಅವರು ಮುಕ್ತಾಯ ಸಮಾರಂಭದಲ್ಲಿ ಭಾರತ ಧ್ವಜ ಹಿಡಿದು ಸಾಗಲಿದ್ದಾರೆ ಎಂದು ಭಾರತೀಯ ಒಲಂಪಿಕ್ಸ್‌ ಸಂಸ್ಥೆ (ಐಒಎ) ಹೇಳಿಕೆ ನೀಡಿದೆ.

22 ವರ್ಷದ ಹರ್ಯಾಣದ ಮನು ಭಾಕರ್‌ ಅವರು ತಮ್ಮ ಚೊಚ್ಚಲ ಪ್ಯಾರಿಸ್‌ ಒಲಂಪಿಕ್ಸ್‌ನಲ್ಲಿ 10 ಮೀ ಏರ್‌ ಪಿಸ್ತೂಲ್‌ನಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ದೇಶಕ್ಕೆ ಮೊದಲ ಪದಕ ಗೆದ್ದುಕೊಟ್ಟರು. ಇದಾದ ಬಳಿಕ ಶರಬ್ಜೋತ್‌ ಸಿಂಗ್‌ ಜೊತೆ ಮಿಶ್ರ ಡಬಲ್ಸ್‌ನಲ್ಲಿಯೂ ಸಹಾ ಕಂಚಿನ ಪದಕ ಗೆದ್ದುಕೊಟ್ಟರು. ಭಾರತಕ್ಕೆ ಬಂದಿರುವ ಮೂರು ಮೆಡಲ್‌ಗಳು ಶೂಟಿಂಗ್‌ನಿಂದಲೇ ಬಂದಿದ್ದರೇ, ಅದರಲ್ಲಿ ಎರಡು ಪದಕಗಳನ್ನು ಭಾಕರ್‌ ಅವರು ಗೆದ್ದುಕೊಟ್ಟಿದ್ದಾರೆ.

ಇನ್ನು ಮುಕ್ತಾ ಸಮಾರಂಭದಲ್ಲಿ ಭಾರತ ಪರವಾಗಿ ಧ್ವಜ ಹಿಡಿಯಲಿರುವ ಪುರುಷ ಕ್ರೀಡಾಪಟು ಬಗ್ಗೆ ಯಾವುದೇ ಮಾಹಿತಿ ಈವರೆಗೆ ಲಭ್ಯವಾಗಿಲ್ಲ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಪಚ್ಚೆದೊಡ್ಡಿ ಗ್ರಾಮಕ್ಕೆ ತ್ರಿಸದಸ್ಯ ಸಮಿತಿ ತಂಡ ಭೇಟಿ

ಸಾರಿಗೆ ವ್ಯವಸ್ಥೆ ಕಲ್ಪಿಸಲು ಆಗ್ರಹಿಸಿ ಸಿಎಂಗೆ ಪತ್ರ ಬರೆದಿದ್ದ ಗ್ರಾಮದ ವಿದ್ಯಾರ್ಥಿಗಳು ಹನೂರು: ತಾಲ್ಲೂಕಿನ ಪಚ್ಚೆದೊಡ್ಡಿ ಗ್ರಾಮದ ನಿವಾಸಿಗಳಿಗೆ ಸಮರ್ಪಕ…

1 hour ago

ತ್ರಿಪುರ ಸುಂದರಿ ಅಮ್ಮನವರ ಜಾತ್ರೆಗೆ ಸಕಲ ಸಿದ್ಧತೆ

ಎಂ.ನಾರಾಯಣ್ ತಿ.ನರಸೀಪುರ ತಾಲ್ಲೂಕಿನ ಮೂಗೂರಿನಲ್ಲಿ ಜ.೩ರಂದು ಆಕರ್ಷಕ ಬಂಡಿ ಉತ್ಸವ; ೫ರಂದು ರಥೋತ್ಸವ ತಿ.ನರಸೀಪುರ: ಪುರಾಣ ಪ್ರಸಿದ್ಧ ತಾಲ್ಲೂಕಿನ ಮೂಗೂರಿನ…

1 hour ago

ಮತ್ತೆ ಆರಂಭವಾದ ಕೋಟೆ ಪೊಲೀಸ್ ಕ್ಯಾಂಟೀನ್

ಶಾಸಕರ ಸೂಚನೆಯ ಮೇರೆಗೆ ಕ್ಯಾಂಟೀನ್ ಆರಂಭ; ಬಡವರು, ಕಾರ್ಮಿಕರು, ವಿದ್ಯಾರ್ಥಿಗಳಿಗೆ ಸಂತಸ ಎಚ್.ಡಿ.ಕೋಟೆ: ಕಡಿಮೆ ದರದಲ್ಲಿ ರುಚಿಕರವಾದ ತಿಂಡಿ, ಊಟ…

1 hour ago

ಗುಬ್ಬಚ್ಚಿ ಶಾಲೆಯಲ್ಲಿ ಬರೀ 12 ವಿದ್ಯಾರ್ಥಿಗಳು!

ವರಹಳ್ಳಿ ಆನಂದ ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ೧ರಿಂದ ೭ನೇ ತರಗತಿವರೆಗೆ ಪ್ರವೇಶಾವಕಾಶ ಇರುವ ಸ.ಹಿ.ಪ್ರಾ. ಶಾಲೆ ಮೈಸೂರು: ನೂರಾರು…

1 hour ago

ಕೊಡಗು‌ ಸಿದ್ದಾಪುರ ದರೋಡೆ ಪ್ರಕರಣ ಭೇದಿಸಲು ವಿಶೇಷ ಕಾರ್ಯಪಡೆ ಸಜ್ಜು

ಸಿದ್ದಾಪುರ :- ನಗರದಲ್ಲಿ ನಡೆದ ದರೋಡೆ ಪ್ರಕರಣ ಭೇದಿಸಲು ಜಿಲ್ಲಾ ಹೆಚ್ಚುವರಿ ಪೋಲೀಸ್ ಅಧೀಕ್ಷರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿದೆ…

11 hours ago