ಕ್ರೀಡೆ

Paris Olympics 2024: ಮುಕ್ತಾಯ ಸಮಾರಂಭದಲ್ಲಿ ಧ್ವಜ ಹಿಡಿದು ಸಾಗಲಿರುವ ಮನು ಭಾಕರ್‌

ಪ್ಯಾರಿಸ್‌: ವಿಶ್ವ ವಿಖ್ಯಾತ ಕ್ರೀಡಾಕೂಟ ಒಲಂಪಿಕ್ಸ್‌ ಮುಕ್ತಾಯ ಸಮಾರಂಭ ಇದೇ ಭಾನುವಾರ (ಆ.11) ನಡೆಯಲಿದ್ದು, ಇದರಲ್ಲಿ ಭಾರತದ ಪರವಾಗಿ ಶೂಟರ್‌ ಮನು ಭಾಕರ್‌ ಅವರು ಭಾರತದ ಧ್ವಜ ಹಿಡಿದು ಸಾಗಲಿದ್ದಾರೆ.

ಪ್ರಸಕ್ತ ಪ್ಯಾರಿಸ್‌ ಒಲಂಪಿಕ್ಸ್‌ ಕ್ರೀಡಾಕೂಟದಲ್ಲಿ ಸತತ ಎರಡು ಪದಕಗಳನ್ನು ಗೆದ್ದಿರುವ ಮನು ಭಾಕರ್‌ ಅವರು ಮುಕ್ತಾಯ ಸಮಾರಂಭದಲ್ಲಿ ಭಾರತ ಧ್ವಜ ಹಿಡಿದು ಸಾಗುವ ಗೌರವಕ್ಕೆ ಭಾಜನರಾಗಿದ್ದಾರೆ.

ಒಲಂಪಿಕ್ಸ್‌ನಲ್ಲಿ ಅದ್ಬುತ ಪ್ರದರ್ಶನ ತೋರಿರುವ ಭಾಕರ್‌ ಅವರು ಧ್ವಜ ಹಿಡಿಯುವ ಗೌರವಕ್ಕೆ ಅರ್ಹರು. ಭಾಕರ್‌ ಅವರು ಮುಕ್ತಾಯ ಸಮಾರಂಭದಲ್ಲಿ ಭಾರತ ಧ್ವಜ ಹಿಡಿದು ಸಾಗಲಿದ್ದಾರೆ ಎಂದು ಭಾರತೀಯ ಒಲಂಪಿಕ್ಸ್‌ ಸಂಸ್ಥೆ (ಐಒಎ) ಹೇಳಿಕೆ ನೀಡಿದೆ.

22 ವರ್ಷದ ಹರ್ಯಾಣದ ಮನು ಭಾಕರ್‌ ಅವರು ತಮ್ಮ ಚೊಚ್ಚಲ ಪ್ಯಾರಿಸ್‌ ಒಲಂಪಿಕ್ಸ್‌ನಲ್ಲಿ 10 ಮೀ ಏರ್‌ ಪಿಸ್ತೂಲ್‌ನಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ದೇಶಕ್ಕೆ ಮೊದಲ ಪದಕ ಗೆದ್ದುಕೊಟ್ಟರು. ಇದಾದ ಬಳಿಕ ಶರಬ್ಜೋತ್‌ ಸಿಂಗ್‌ ಜೊತೆ ಮಿಶ್ರ ಡಬಲ್ಸ್‌ನಲ್ಲಿಯೂ ಸಹಾ ಕಂಚಿನ ಪದಕ ಗೆದ್ದುಕೊಟ್ಟರು. ಭಾರತಕ್ಕೆ ಬಂದಿರುವ ಮೂರು ಮೆಡಲ್‌ಗಳು ಶೂಟಿಂಗ್‌ನಿಂದಲೇ ಬಂದಿದ್ದರೇ, ಅದರಲ್ಲಿ ಎರಡು ಪದಕಗಳನ್ನು ಭಾಕರ್‌ ಅವರು ಗೆದ್ದುಕೊಟ್ಟಿದ್ದಾರೆ.

ಇನ್ನು ಮುಕ್ತಾ ಸಮಾರಂಭದಲ್ಲಿ ಭಾರತ ಪರವಾಗಿ ಧ್ವಜ ಹಿಡಿಯಲಿರುವ ಪುರುಷ ಕ್ರೀಡಾಪಟು ಬಗ್ಗೆ ಯಾವುದೇ ಮಾಹಿತಿ ಈವರೆಗೆ ಲಭ್ಯವಾಗಿಲ್ಲ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

2.20ಕೋಟಿ ರೂ.ಮೌಲ್ಯದ ಚಿನ್ನಾಭರಣ ವಶ ; 26 ಮಂದಿ ಬಂಧನ.

ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…

4 hours ago

ತಳಸಮುದಾಯಕ್ಕೆ ಆರ್ಥಿಕ ಸಾಮಾಜಿಕ ಶಕ್ತಿ ಅಗತ್ಯ : ಸಿಎಂ

ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…

4 hours ago

ಅಭಿವೃದ್ಧಿ ವಿಷಯದಲ್ಲಿ ರಾಜ್ಯ ಸರ್ಕಾರದ ಜತೆ ನಿಲ್ಲುತ್ತೇನೆ : ಕೇಂದ್ರ ಸಚಿವ ಎಚ್‌ಡಿಕೆ

ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…

5 hours ago

IPL 2026 | ಮುಂಬೈ ವಿರುದ್ಧ ಡೆಲ್ಲಿಗೆ ಭರ್ಜರಿ ಜಯ

ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…

5 hours ago

ಇರಾನ್ ಮೇಲೆ ಕ್ಷಿಪಣಿ ದಾಳಿ ; ಬುಶೆಹರ್ ಅಣುಸ್ಥಾವರದ ಬಳಿ ಹಾನಿ

ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…

5 hours ago

ಇಂಧನ ವ್ಯತ್ಯಯ ಆತಂಕ ; ಎಲೆಕ್ಟ್ರಿಕ್‌ ವಾಹನ ಮಾರಾಟದಲ್ಲಿ ಏರಿಕೆ

ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…

6 hours ago