ಕ್ರೀಡೆ

Paris Olympics 2024: ಮುಕ್ತಾಯ ಸಮಾರಂಭದಲ್ಲಿ ಧ್ವಜ ಹಿಡಿದು ಸಾಗಲಿರುವ ಮನು ಭಾಕರ್‌

ಪ್ಯಾರಿಸ್‌: ವಿಶ್ವ ವಿಖ್ಯಾತ ಕ್ರೀಡಾಕೂಟ ಒಲಂಪಿಕ್ಸ್‌ ಮುಕ್ತಾಯ ಸಮಾರಂಭ ಇದೇ ಭಾನುವಾರ (ಆ.11) ನಡೆಯಲಿದ್ದು, ಇದರಲ್ಲಿ ಭಾರತದ ಪರವಾಗಿ ಶೂಟರ್‌ ಮನು ಭಾಕರ್‌ ಅವರು ಭಾರತದ ಧ್ವಜ ಹಿಡಿದು ಸಾಗಲಿದ್ದಾರೆ.

ಪ್ರಸಕ್ತ ಪ್ಯಾರಿಸ್‌ ಒಲಂಪಿಕ್ಸ್‌ ಕ್ರೀಡಾಕೂಟದಲ್ಲಿ ಸತತ ಎರಡು ಪದಕಗಳನ್ನು ಗೆದ್ದಿರುವ ಮನು ಭಾಕರ್‌ ಅವರು ಮುಕ್ತಾಯ ಸಮಾರಂಭದಲ್ಲಿ ಭಾರತ ಧ್ವಜ ಹಿಡಿದು ಸಾಗುವ ಗೌರವಕ್ಕೆ ಭಾಜನರಾಗಿದ್ದಾರೆ.

ಒಲಂಪಿಕ್ಸ್‌ನಲ್ಲಿ ಅದ್ಬುತ ಪ್ರದರ್ಶನ ತೋರಿರುವ ಭಾಕರ್‌ ಅವರು ಧ್ವಜ ಹಿಡಿಯುವ ಗೌರವಕ್ಕೆ ಅರ್ಹರು. ಭಾಕರ್‌ ಅವರು ಮುಕ್ತಾಯ ಸಮಾರಂಭದಲ್ಲಿ ಭಾರತ ಧ್ವಜ ಹಿಡಿದು ಸಾಗಲಿದ್ದಾರೆ ಎಂದು ಭಾರತೀಯ ಒಲಂಪಿಕ್ಸ್‌ ಸಂಸ್ಥೆ (ಐಒಎ) ಹೇಳಿಕೆ ನೀಡಿದೆ.

22 ವರ್ಷದ ಹರ್ಯಾಣದ ಮನು ಭಾಕರ್‌ ಅವರು ತಮ್ಮ ಚೊಚ್ಚಲ ಪ್ಯಾರಿಸ್‌ ಒಲಂಪಿಕ್ಸ್‌ನಲ್ಲಿ 10 ಮೀ ಏರ್‌ ಪಿಸ್ತೂಲ್‌ನಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ದೇಶಕ್ಕೆ ಮೊದಲ ಪದಕ ಗೆದ್ದುಕೊಟ್ಟರು. ಇದಾದ ಬಳಿಕ ಶರಬ್ಜೋತ್‌ ಸಿಂಗ್‌ ಜೊತೆ ಮಿಶ್ರ ಡಬಲ್ಸ್‌ನಲ್ಲಿಯೂ ಸಹಾ ಕಂಚಿನ ಪದಕ ಗೆದ್ದುಕೊಟ್ಟರು. ಭಾರತಕ್ಕೆ ಬಂದಿರುವ ಮೂರು ಮೆಡಲ್‌ಗಳು ಶೂಟಿಂಗ್‌ನಿಂದಲೇ ಬಂದಿದ್ದರೇ, ಅದರಲ್ಲಿ ಎರಡು ಪದಕಗಳನ್ನು ಭಾಕರ್‌ ಅವರು ಗೆದ್ದುಕೊಟ್ಟಿದ್ದಾರೆ.

ಇನ್ನು ಮುಕ್ತಾ ಸಮಾರಂಭದಲ್ಲಿ ಭಾರತ ಪರವಾಗಿ ಧ್ವಜ ಹಿಡಿಯಲಿರುವ ಪುರುಷ ಕ್ರೀಡಾಪಟು ಬಗ್ಗೆ ಯಾವುದೇ ಮಾಹಿತಿ ಈವರೆಗೆ ಲಭ್ಯವಾಗಿಲ್ಲ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

6 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

8 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

8 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

9 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

9 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

10 hours ago