ಪ್ಯಾರಿಸ್: ವಿಶ್ವ ವಿಖ್ಯಾತ ಕ್ರೀಡಾಕೂಟ ಒಲಂಪಿಕ್ಸ್ ಮುಕ್ತಾಯ ಸಮಾರಂಭ ಇದೇ ಭಾನುವಾರ (ಆ.11) ನಡೆಯಲಿದ್ದು, ಇದರಲ್ಲಿ ಭಾರತದ ಪರವಾಗಿ ಶೂಟರ್ ಮನು ಭಾಕರ್ ಅವರು ಭಾರತದ ಧ್ವಜ ಹಿಡಿದು ಸಾಗಲಿದ್ದಾರೆ.
ಪ್ರಸಕ್ತ ಪ್ಯಾರಿಸ್ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಸತತ ಎರಡು ಪದಕಗಳನ್ನು ಗೆದ್ದಿರುವ ಮನು ಭಾಕರ್ ಅವರು ಮುಕ್ತಾಯ ಸಮಾರಂಭದಲ್ಲಿ ಭಾರತ ಧ್ವಜ ಹಿಡಿದು ಸಾಗುವ ಗೌರವಕ್ಕೆ ಭಾಜನರಾಗಿದ್ದಾರೆ.
ಒಲಂಪಿಕ್ಸ್ನಲ್ಲಿ ಅದ್ಬುತ ಪ್ರದರ್ಶನ ತೋರಿರುವ ಭಾಕರ್ ಅವರು ಧ್ವಜ ಹಿಡಿಯುವ ಗೌರವಕ್ಕೆ ಅರ್ಹರು. ಭಾಕರ್ ಅವರು ಮುಕ್ತಾಯ ಸಮಾರಂಭದಲ್ಲಿ ಭಾರತ ಧ್ವಜ ಹಿಡಿದು ಸಾಗಲಿದ್ದಾರೆ ಎಂದು ಭಾರತೀಯ ಒಲಂಪಿಕ್ಸ್ ಸಂಸ್ಥೆ (ಐಒಎ) ಹೇಳಿಕೆ ನೀಡಿದೆ.
22 ವರ್ಷದ ಹರ್ಯಾಣದ ಮನು ಭಾಕರ್ ಅವರು ತಮ್ಮ ಚೊಚ್ಚಲ ಪ್ಯಾರಿಸ್ ಒಲಂಪಿಕ್ಸ್ನಲ್ಲಿ 10 ಮೀ ಏರ್ ಪಿಸ್ತೂಲ್ನಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ದೇಶಕ್ಕೆ ಮೊದಲ ಪದಕ ಗೆದ್ದುಕೊಟ್ಟರು. ಇದಾದ ಬಳಿಕ ಶರಬ್ಜೋತ್ ಸಿಂಗ್ ಜೊತೆ ಮಿಶ್ರ ಡಬಲ್ಸ್ನಲ್ಲಿಯೂ ಸಹಾ ಕಂಚಿನ ಪದಕ ಗೆದ್ದುಕೊಟ್ಟರು. ಭಾರತಕ್ಕೆ ಬಂದಿರುವ ಮೂರು ಮೆಡಲ್ಗಳು ಶೂಟಿಂಗ್ನಿಂದಲೇ ಬಂದಿದ್ದರೇ, ಅದರಲ್ಲಿ ಎರಡು ಪದಕಗಳನ್ನು ಭಾಕರ್ ಅವರು ಗೆದ್ದುಕೊಟ್ಟಿದ್ದಾರೆ.
ಇನ್ನು ಮುಕ್ತಾ ಸಮಾರಂಭದಲ್ಲಿ ಭಾರತ ಪರವಾಗಿ ಧ್ವಜ ಹಿಡಿಯಲಿರುವ ಪುರುಷ ಕ್ರೀಡಾಪಟು ಬಗ್ಗೆ ಯಾವುದೇ ಮಾಹಿತಿ ಈವರೆಗೆ ಲಭ್ಯವಾಗಿಲ್ಲ.
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಆಡಳಿತ ನಡೆಸಲು ಬಿಜೆಪಿಗೆ ಒಂದು ಅವಕಾಶ ಕೊಡಿ. ಭಯ, ಭ್ರಷ್ಟಾಚಾರ ಹಾಗೂ ದುರಾಡಳಿತವನ್ನು ಉತ್ತಮ ಆಡಳಿತದೊಂದಿಗೆ…
ಬೆಂಗಳೂರು: ದೇಶದಾದ್ಯಂತ ಕೇಂದ್ರ ಚುನಾವಣಾ ಆಯೋಗ ಕೈಗೆತ್ತಿಕೊಂಡಿರುವ ವಿಶೇಷ ಮತದಾರರ ಪರಿಷ್ಕರಣೆ (ಎಸ್ಐಆರ್)ಯನ್ನು ಕರ್ನಾಟಕದಲ್ಲೂ ನಡೆಸಬೇಕೆಂದು ಕೇಂದ್ರ ಸಚಿವೆ ಶೋಭಾ…
ಹುಣಸೂರು: ಮೈಸೂರು ಜಿಲ್ಲೆ ಹುಣಸೂರು ಪಟ್ಟಣದಲ್ಲಿ ನಡೆದ ಚಿನ್ನಾಭರಣ ದರೋಡೆ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮಾಹಿತಿ ಪ್ರಕಾರ…
ಟಿ.ನರಸೀಪುರ: ಇಂದು ವೈಕುಂಠ ಏಕಾದಶಿಯ ಸಂಭ್ರಮ ಮನೆಮಾಡಿದ್ದು, ಟಿ.ನರಸೀಪುರದ ಪ್ರಸಿದ್ಧ ಶ್ರೀ ಗುಂಜಾನರಸಿಂಹಸ್ವಾಮಿ ದೇವಾಲಯದಲ್ಲಿ ಏಕಾದಶಿ ಪ್ರಯುಕ್ತ ವಿಶೇಷ ಪೂಜಾ…
ಬೆಂಗಳೂರು: ಕೋಗಿಲು ಲೇಔಟ್ನಲ್ಲಿ ಅಕ್ರಮ ಶೆಡ್ ತೆರವುಗೊಳಿಸಿದ ಹಿನ್ನೆಲೆಯಲ್ಲಿ ಮನೆ ಕಳೆದುಕೊಂಡ ನಿರಾಶ್ರಿತರಿಗೆ ಮನೆ ಕೊಡುವ ಕುರಿತು ಗೃಹ ಸಚಿವ…
ಡಾಕಾ: ಮಾಜಿ ಪ್ರಧಾನಿ ಮತ್ತು ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷದ ಅಧ್ಯಕ್ಷೆ ಬೇಗಂ ಖಲೀದಾ ಜಿಯಾ ಇಂದು ಬೆಳಿಗ್ಗೆ ಡಾಕಾದ ಎವರ್ಕೇರ್…