ಪ್ಯಾರಿಸ್: ವಿಶ್ವ ವಿಖ್ಯಾತ ಕ್ರೀಡಾಕೂಟ ಒಲಂಪಿಕ್ಸ್ ಮುಕ್ತಾಯ ಸಮಾರಂಭ ಇದೇ ಭಾನುವಾರ (ಆ.11) ನಡೆಯಲಿದ್ದು, ಇದರಲ್ಲಿ ಭಾರತದ ಪರವಾಗಿ ಶೂಟರ್ ಮನು ಭಾಕರ್ ಅವರು ಭಾರತದ ಧ್ವಜ ಹಿಡಿದು ಸಾಗಲಿದ್ದಾರೆ.
ಪ್ರಸಕ್ತ ಪ್ಯಾರಿಸ್ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಸತತ ಎರಡು ಪದಕಗಳನ್ನು ಗೆದ್ದಿರುವ ಮನು ಭಾಕರ್ ಅವರು ಮುಕ್ತಾಯ ಸಮಾರಂಭದಲ್ಲಿ ಭಾರತ ಧ್ವಜ ಹಿಡಿದು ಸಾಗುವ ಗೌರವಕ್ಕೆ ಭಾಜನರಾಗಿದ್ದಾರೆ.
ಒಲಂಪಿಕ್ಸ್ನಲ್ಲಿ ಅದ್ಬುತ ಪ್ರದರ್ಶನ ತೋರಿರುವ ಭಾಕರ್ ಅವರು ಧ್ವಜ ಹಿಡಿಯುವ ಗೌರವಕ್ಕೆ ಅರ್ಹರು. ಭಾಕರ್ ಅವರು ಮುಕ್ತಾಯ ಸಮಾರಂಭದಲ್ಲಿ ಭಾರತ ಧ್ವಜ ಹಿಡಿದು ಸಾಗಲಿದ್ದಾರೆ ಎಂದು ಭಾರತೀಯ ಒಲಂಪಿಕ್ಸ್ ಸಂಸ್ಥೆ (ಐಒಎ) ಹೇಳಿಕೆ ನೀಡಿದೆ.
22 ವರ್ಷದ ಹರ್ಯಾಣದ ಮನು ಭಾಕರ್ ಅವರು ತಮ್ಮ ಚೊಚ್ಚಲ ಪ್ಯಾರಿಸ್ ಒಲಂಪಿಕ್ಸ್ನಲ್ಲಿ 10 ಮೀ ಏರ್ ಪಿಸ್ತೂಲ್ನಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ದೇಶಕ್ಕೆ ಮೊದಲ ಪದಕ ಗೆದ್ದುಕೊಟ್ಟರು. ಇದಾದ ಬಳಿಕ ಶರಬ್ಜೋತ್ ಸಿಂಗ್ ಜೊತೆ ಮಿಶ್ರ ಡಬಲ್ಸ್ನಲ್ಲಿಯೂ ಸಹಾ ಕಂಚಿನ ಪದಕ ಗೆದ್ದುಕೊಟ್ಟರು. ಭಾರತಕ್ಕೆ ಬಂದಿರುವ ಮೂರು ಮೆಡಲ್ಗಳು ಶೂಟಿಂಗ್ನಿಂದಲೇ ಬಂದಿದ್ದರೇ, ಅದರಲ್ಲಿ ಎರಡು ಪದಕಗಳನ್ನು ಭಾಕರ್ ಅವರು ಗೆದ್ದುಕೊಟ್ಟಿದ್ದಾರೆ.
ಇನ್ನು ಮುಕ್ತಾ ಸಮಾರಂಭದಲ್ಲಿ ಭಾರತ ಪರವಾಗಿ ಧ್ವಜ ಹಿಡಿಯಲಿರುವ ಪುರುಷ ಕ್ರೀಡಾಪಟು ಬಗ್ಗೆ ಯಾವುದೇ ಮಾಹಿತಿ ಈವರೆಗೆ ಲಭ್ಯವಾಗಿಲ್ಲ.
ವಿಶಾಖಪಟ್ಟಣಂ: ಭಾರತೀಯ ನೌಕಾಪಡೆಯ ವಿಶ್ವದ ವಿವಿಧ ದೇಶಗಳ ನೌಕಾಪಡೆಗಳೊಂದಿಗೆ ಸೇರಿ ತನ್ನ ಅಪ್ರತಿಮ ಶೌರ್ಯ ಹಾಗೂ ಸನ್ನದ್ಧತೆಯನ್ನು ಬುಧವಾರ ವಿಶಾಖಪಟ್ಟಣಂ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಮಾದಾಪಟ್ಟಣ ಗ್ರಾಮದಲ್ಲಿ ಹಸುವಿನ ಮೇಲೆ ಹುಲಿ ದಾಳಿ ನಡೆಸಿ ಕೊಂದು…
ಬೆಂಗಳೂರು: ವಿಧಾನಸೌಧಕ್ಕೆ ಮಾಧ್ಯಮಗಳ ಪ್ರವೇಶಕ್ಕೆ ನಿರ್ಬಂಧ ಹೇರಿರುವ ರಾಜ್ಯ ಸರ್ಕಾರದ ಕ್ರಮದ ವಿರುದ್ಧ ಜೆಡಿಎಸ್ ಲೇವಡಿ ಮಾಡಿದೆ. ಪ್ರಶ್ನೆ ಕೇಳುವ…
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಮಾಧ್ಯಮಗಳಿಗೆ ರಾಜ್ಯದ ಆಡಳಿತ ಶಕ್ತಿ ಕೇಂದ್ರ ವಿಧಾನಸೌಧದಲ್ಲಿ ನಿರ್ಬಂಧ ಹೇರಲಿದೆ. ಈ ಕುರಿತು ಸರ್ಕಾರದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಐದು ದಿನಗಳ ಕಾಲ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಕೊನೆಯ ದಿನವಾದ…