ಪ್ಯಾರಿಸ್: ವಿಶ್ವ ವಿಖ್ಯಾತ ಕ್ರೀಡಾಕೂಟ ಒಲಂಪಿಕ್ಸ್ ಮುಕ್ತಾಯ ಸಮಾರಂಭ ಇದೇ ಭಾನುವಾರ (ಆ.11) ನಡೆಯಲಿದ್ದು, ಇದರಲ್ಲಿ ಭಾರತದ ಪರವಾಗಿ ಶೂಟರ್ ಮನು ಭಾಕರ್ ಅವರು ಭಾರತದ ಧ್ವಜ ಹಿಡಿದು ಸಾಗಲಿದ್ದಾರೆ.
ಪ್ರಸಕ್ತ ಪ್ಯಾರಿಸ್ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಸತತ ಎರಡು ಪದಕಗಳನ್ನು ಗೆದ್ದಿರುವ ಮನು ಭಾಕರ್ ಅವರು ಮುಕ್ತಾಯ ಸಮಾರಂಭದಲ್ಲಿ ಭಾರತ ಧ್ವಜ ಹಿಡಿದು ಸಾಗುವ ಗೌರವಕ್ಕೆ ಭಾಜನರಾಗಿದ್ದಾರೆ.
ಒಲಂಪಿಕ್ಸ್ನಲ್ಲಿ ಅದ್ಬುತ ಪ್ರದರ್ಶನ ತೋರಿರುವ ಭಾಕರ್ ಅವರು ಧ್ವಜ ಹಿಡಿಯುವ ಗೌರವಕ್ಕೆ ಅರ್ಹರು. ಭಾಕರ್ ಅವರು ಮುಕ್ತಾಯ ಸಮಾರಂಭದಲ್ಲಿ ಭಾರತ ಧ್ವಜ ಹಿಡಿದು ಸಾಗಲಿದ್ದಾರೆ ಎಂದು ಭಾರತೀಯ ಒಲಂಪಿಕ್ಸ್ ಸಂಸ್ಥೆ (ಐಒಎ) ಹೇಳಿಕೆ ನೀಡಿದೆ.
22 ವರ್ಷದ ಹರ್ಯಾಣದ ಮನು ಭಾಕರ್ ಅವರು ತಮ್ಮ ಚೊಚ್ಚಲ ಪ್ಯಾರಿಸ್ ಒಲಂಪಿಕ್ಸ್ನಲ್ಲಿ 10 ಮೀ ಏರ್ ಪಿಸ್ತೂಲ್ನಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ದೇಶಕ್ಕೆ ಮೊದಲ ಪದಕ ಗೆದ್ದುಕೊಟ್ಟರು. ಇದಾದ ಬಳಿಕ ಶರಬ್ಜೋತ್ ಸಿಂಗ್ ಜೊತೆ ಮಿಶ್ರ ಡಬಲ್ಸ್ನಲ್ಲಿಯೂ ಸಹಾ ಕಂಚಿನ ಪದಕ ಗೆದ್ದುಕೊಟ್ಟರು. ಭಾರತಕ್ಕೆ ಬಂದಿರುವ ಮೂರು ಮೆಡಲ್ಗಳು ಶೂಟಿಂಗ್ನಿಂದಲೇ ಬಂದಿದ್ದರೇ, ಅದರಲ್ಲಿ ಎರಡು ಪದಕಗಳನ್ನು ಭಾಕರ್ ಅವರು ಗೆದ್ದುಕೊಟ್ಟಿದ್ದಾರೆ.
ಇನ್ನು ಮುಕ್ತಾ ಸಮಾರಂಭದಲ್ಲಿ ಭಾರತ ಪರವಾಗಿ ಧ್ವಜ ಹಿಡಿಯಲಿರುವ ಪುರುಷ ಕ್ರೀಡಾಪಟು ಬಗ್ಗೆ ಯಾವುದೇ ಮಾಹಿತಿ ಈವರೆಗೆ ಲಭ್ಯವಾಗಿಲ್ಲ.
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…
ರಾಜ್ಯದಲ್ಲಿ ನಕಲಿ ಔಷಧಗಳ ಜಲವು ನಾಗರಿಕರ ಪ್ರಾಣದೊಂದಿಗೆ ಚೆಟವಾಡುತ್ತಿರುವುದು ತೀವ್ರ ಆತಂಕಕಾರಿ ಮತ್ತು ಅಕ್ಷಮ್ಯ. ತನಿಖೆಯಲ್ಲಿ ಸುಮಾರು ೩,೫೦೦ ಔಷಧ…
ಮಡಿಕೇರಿ: ಮೋಡ ಬಿತ್ತನೆಯ ಚರ್ಚೆಯ ನಡುವೆಯೇ ಕೊಡಗು ಜಿಲ್ಲೆಯಲ್ಲಿ ಮತ್ತೆ ಮಳೆಯ ಅಬ್ಬರ ಹೆಚ್ಚಾಗಿದೆ. ನಿನ್ನೆ ರಾತ್ರಿಯಿಂದ ಜಿಲ್ಲೆಯ ಹಲವೆಡೆ…
ಡಾ.ರಘುಪತಿ ಮಹದೇಶ್ವರ ಬೆಟ್ಟಕ್ಕೆ ಹೋಗುವಾಗ ಹನೂರು ದಾಟಿದರೆ ನಿಮಗೆ ದೊಡ್ಡಿ ಹೆಸರಿನ ಹಲವು ಹಳ್ಳಿಗಳು ಸಿಗುತ್ತವೆ. ಹಾಗೆಯೇ ನೂರಾರು ದನಗಳೂ,ಅದೂ…