ಪ್ಯಾರಿಸ್: ವಿಶ್ವ ವಿಖ್ಯಾತ ಕ್ರೀಡಾಕೂಟ ಒಲಂಪಿಕ್ಸ್ ಮುಕ್ತಾಯ ಸಮಾರಂಭ ಇದೇ ಭಾನುವಾರ (ಆ.11) ನಡೆಯಲಿದ್ದು, ಇದರಲ್ಲಿ ಭಾರತದ ಪರವಾಗಿ ಶೂಟರ್ ಮನು ಭಾಕರ್ ಅವರು ಭಾರತದ ಧ್ವಜ ಹಿಡಿದು ಸಾಗಲಿದ್ದಾರೆ.
ಪ್ರಸಕ್ತ ಪ್ಯಾರಿಸ್ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಸತತ ಎರಡು ಪದಕಗಳನ್ನು ಗೆದ್ದಿರುವ ಮನು ಭಾಕರ್ ಅವರು ಮುಕ್ತಾಯ ಸಮಾರಂಭದಲ್ಲಿ ಭಾರತ ಧ್ವಜ ಹಿಡಿದು ಸಾಗುವ ಗೌರವಕ್ಕೆ ಭಾಜನರಾಗಿದ್ದಾರೆ.
ಒಲಂಪಿಕ್ಸ್ನಲ್ಲಿ ಅದ್ಬುತ ಪ್ರದರ್ಶನ ತೋರಿರುವ ಭಾಕರ್ ಅವರು ಧ್ವಜ ಹಿಡಿಯುವ ಗೌರವಕ್ಕೆ ಅರ್ಹರು. ಭಾಕರ್ ಅವರು ಮುಕ್ತಾಯ ಸಮಾರಂಭದಲ್ಲಿ ಭಾರತ ಧ್ವಜ ಹಿಡಿದು ಸಾಗಲಿದ್ದಾರೆ ಎಂದು ಭಾರತೀಯ ಒಲಂಪಿಕ್ಸ್ ಸಂಸ್ಥೆ (ಐಒಎ) ಹೇಳಿಕೆ ನೀಡಿದೆ.
22 ವರ್ಷದ ಹರ್ಯಾಣದ ಮನು ಭಾಕರ್ ಅವರು ತಮ್ಮ ಚೊಚ್ಚಲ ಪ್ಯಾರಿಸ್ ಒಲಂಪಿಕ್ಸ್ನಲ್ಲಿ 10 ಮೀ ಏರ್ ಪಿಸ್ತೂಲ್ನಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ದೇಶಕ್ಕೆ ಮೊದಲ ಪದಕ ಗೆದ್ದುಕೊಟ್ಟರು. ಇದಾದ ಬಳಿಕ ಶರಬ್ಜೋತ್ ಸಿಂಗ್ ಜೊತೆ ಮಿಶ್ರ ಡಬಲ್ಸ್ನಲ್ಲಿಯೂ ಸಹಾ ಕಂಚಿನ ಪದಕ ಗೆದ್ದುಕೊಟ್ಟರು. ಭಾರತಕ್ಕೆ ಬಂದಿರುವ ಮೂರು ಮೆಡಲ್ಗಳು ಶೂಟಿಂಗ್ನಿಂದಲೇ ಬಂದಿದ್ದರೇ, ಅದರಲ್ಲಿ ಎರಡು ಪದಕಗಳನ್ನು ಭಾಕರ್ ಅವರು ಗೆದ್ದುಕೊಟ್ಟಿದ್ದಾರೆ.
ಇನ್ನು ಮುಕ್ತಾ ಸಮಾರಂಭದಲ್ಲಿ ಭಾರತ ಪರವಾಗಿ ಧ್ವಜ ಹಿಡಿಯಲಿರುವ ಪುರುಷ ಕ್ರೀಡಾಪಟು ಬಗ್ಗೆ ಯಾವುದೇ ಮಾಹಿತಿ ಈವರೆಗೆ ಲಭ್ಯವಾಗಿಲ್ಲ.
ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು…
ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…
ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್ ಆಗಿದೆ. ಅಕ್ಟೋಬರ್.11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…
ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…
ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…
ಬೀಜಿಂಗ್: ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…