ಪ್ಯಾರಿಸ್: ವಿಶ್ವ ವಿಖ್ಯಾತ ಕ್ರೀಡಾಕೂಟ ಒಲಂಪಿಕ್ಸ್ ಮುಕ್ತಾಯ ಸಮಾರಂಭ ಇದೇ ಭಾನುವಾರ (ಆ.11) ನಡೆಯಲಿದ್ದು, ಇದರಲ್ಲಿ ಭಾರತದ ಪರವಾಗಿ ಶೂಟರ್ ಮನು ಭಾಕರ್ ಅವರು ಭಾರತದ ಧ್ವಜ ಹಿಡಿದು ಸಾಗಲಿದ್ದಾರೆ.
ಪ್ರಸಕ್ತ ಪ್ಯಾರಿಸ್ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಸತತ ಎರಡು ಪದಕಗಳನ್ನು ಗೆದ್ದಿರುವ ಮನು ಭಾಕರ್ ಅವರು ಮುಕ್ತಾಯ ಸಮಾರಂಭದಲ್ಲಿ ಭಾರತ ಧ್ವಜ ಹಿಡಿದು ಸಾಗುವ ಗೌರವಕ್ಕೆ ಭಾಜನರಾಗಿದ್ದಾರೆ.
ಒಲಂಪಿಕ್ಸ್ನಲ್ಲಿ ಅದ್ಬುತ ಪ್ರದರ್ಶನ ತೋರಿರುವ ಭಾಕರ್ ಅವರು ಧ್ವಜ ಹಿಡಿಯುವ ಗೌರವಕ್ಕೆ ಅರ್ಹರು. ಭಾಕರ್ ಅವರು ಮುಕ್ತಾಯ ಸಮಾರಂಭದಲ್ಲಿ ಭಾರತ ಧ್ವಜ ಹಿಡಿದು ಸಾಗಲಿದ್ದಾರೆ ಎಂದು ಭಾರತೀಯ ಒಲಂಪಿಕ್ಸ್ ಸಂಸ್ಥೆ (ಐಒಎ) ಹೇಳಿಕೆ ನೀಡಿದೆ.
22 ವರ್ಷದ ಹರ್ಯಾಣದ ಮನು ಭಾಕರ್ ಅವರು ತಮ್ಮ ಚೊಚ್ಚಲ ಪ್ಯಾರಿಸ್ ಒಲಂಪಿಕ್ಸ್ನಲ್ಲಿ 10 ಮೀ ಏರ್ ಪಿಸ್ತೂಲ್ನಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ದೇಶಕ್ಕೆ ಮೊದಲ ಪದಕ ಗೆದ್ದುಕೊಟ್ಟರು. ಇದಾದ ಬಳಿಕ ಶರಬ್ಜೋತ್ ಸಿಂಗ್ ಜೊತೆ ಮಿಶ್ರ ಡಬಲ್ಸ್ನಲ್ಲಿಯೂ ಸಹಾ ಕಂಚಿನ ಪದಕ ಗೆದ್ದುಕೊಟ್ಟರು. ಭಾರತಕ್ಕೆ ಬಂದಿರುವ ಮೂರು ಮೆಡಲ್ಗಳು ಶೂಟಿಂಗ್ನಿಂದಲೇ ಬಂದಿದ್ದರೇ, ಅದರಲ್ಲಿ ಎರಡು ಪದಕಗಳನ್ನು ಭಾಕರ್ ಅವರು ಗೆದ್ದುಕೊಟ್ಟಿದ್ದಾರೆ.
ಇನ್ನು ಮುಕ್ತಾ ಸಮಾರಂಭದಲ್ಲಿ ಭಾರತ ಪರವಾಗಿ ಧ್ವಜ ಹಿಡಿಯಲಿರುವ ಪುರುಷ ಕ್ರೀಡಾಪಟು ಬಗ್ಗೆ ಯಾವುದೇ ಮಾಹಿತಿ ಈವರೆಗೆ ಲಭ್ಯವಾಗಿಲ್ಲ.
ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…
ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…
ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…
ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…
ಮೋಹಿತ್ ಎಸ್ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…