ಕ್ರೀಡೆ

Paris Olympics 2024: ಮನು ಭಾಕರ್‌ ಗುರಿ ತಪ್ಪಿದ ಮೂರನೇ ಪದಕ

ಪ್ಯಾರಿಸ್‌: ಸತತ ಎರಡು ಪದಕಗಳನ್ನು ಗೆದ್ದು ಇತಿಹಾಸ ನಿರ್ಮಿಸಿದ್ದ ಮನು ಭಾಕರ್‌ ಅವರು ಮೂರನೇ ಪದಕ ಗೆಲ್ಲುವಲ್ಲಿ ವಿಫಲರಾಗಿದ್ದಾರೆ. ಆಗಿದ್ದರೂ ಪ್ಯಾರಿಸ್‌ ಒಲಂಪಿಕ್ಸ್‌ನಲ್ಲಿ ವಿನೂತನ ದಾಖಲೆಯೊಂದನ್ನು ಬರೆದಿದ್ದಾರೆ.

25 ಮೀ ಏರ್‌ ಪಿಸ್ತೂಲ್‌ ವಿಭಾಗದಲ್ಲಿ ನಾಲ್ಕನೇ ಸ್ಥಾನ ಪಡೆಯುವ ಮೂಲಕ ತಮ್ಮ ಅಭಿಯಾನವನ್ನು ಅಂತ್ಯಗೊಳಿಸಿದ್ದಾರೆ. ಈ ಹಿಂದೆ ಇದೇ ಒಲಂಪಿಕ್ಸ್‌ನಲ್ಲಿ 10 ಮೀ. ಏರ್‌ ಪಿಸ್ತೂಲ್‌ ಹಾಗೂ 10 ಮೀ. ಏರ್‌ ಪಿಸ್ತೂಲ್‌ ಮಿಶ್ರ ಸ್ಪರ್ಧೆಯಲ್ಲಿ ಕ್ರಮವಾಗಿ ಕಂಚಿನ ಪದಕ ಗೆಲ್ಲುವ ಮೂಲಕ ನೂತನ ಸಾಧನೆ ಮಾಡಿದ್ದರು. ಆದರೆ ಮೂರನೇ ಪದಕ ಜಯಿಸುವಲ್ಲಿ ಮನು ಭಾಕರ್‌ ಅವರು ವಿಫಲರಾಗಿದ್ದಾರೆ.

ಮನು ಭಾಕರ್‌ ಪದಕ ಸುತ್ತಿನಲ್ಲಿ ಕೇವಲ 28 ಅಂಕ ಗಳಿಸಿ ನಾಲ್ಕನೇ ಸ್ಥಾನ ಪಡೆದರು. ದ. ಕೊರಿಯಾದ ಜಿ ಯಾಂಗ್‌ ಅವರು 37 ಅಂಕಗಳನ್ನು ಪಡೆಯುವ ಮೂಲಕ ಚಿನ್ನದ ಪದಕಕ್ಕೆ ಮುತ್ತಿಕ್ಕಿದ್ದರು. ಫ್ರಾನ್ಸ್‌ನ ಕ್ಯಾಮಿಲೆ 37 ಅಂಕ ಗಳಿಸಿ ಬೆಳ್ಳಿ ಪದಕ ಪಡೆದರು. ಇನ್ನು ಹಂಗೇರಿಯಾ ವೆರೋನಿಕಾ 31 ಅಂಕ ಗಳಿಸಿ ಕಂಚಿನ ಪದಕ ಗೆದ್ದರು. ಮನು ಭಾಕರ್‌ ನಾಲ್ಕನೆಯವರಾಗಿ ಹೊರ ನಡೆದರು.

ಇನ್ನು ಈ ಬಾರಿಯ ಪ್ಯಾರಿಸ್‌ ಒಲಂಪಿಕ್ಸ್‌ನಲ್ಲಿ ಸತತ ಎರಡು ಮೆಡಲ್‌ ಗೆಲ್ಲುವ ಮೂಲಕ ಶೂಟಿಂಗ್‌ನಲ್ಲಿ ಒಂದೇ ಆವೃತ್ತಿಯಲ್ಲಿ ಎರಡು ಪದಕ ಗೆದ್ದ ಮೊದಲ ಆಟಗಾರ್ತಿ ಎಂಬ ದಾಖಲೆಯನ್ನು ಮನು ಭಾಕರ್‌ ಬರೆದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಉಪಟಳ ನೀಡುತ್ತಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಜನತೆ

ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…

6 hours ago

ಮೃಗಾಲಯದ ಬೇಟೆ ಚೀತಾ ‘ಬ್ರೂಕ್’ ಇನ್ನಿಲ್ಲ

ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…

7 hours ago

ಸಿಲಿಂಡರ್‌ ಸ್ಫೋಟ ಪ್ರಕರಣ : ತನಿಖೆ ತೀವ್ರ ; ಮೈಸೂರಲ್ಲಿ ಖಾಕಿ ಕಟ್ಟೆಚ್ಚರ

ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…

7 hours ago

ಎಚ್.ಡಿ.ಕೋಟೆ | ತಾಲ್ಲೂಕಿನ ಶೈಕ್ಷಣಿಕ ಪ್ರಗತಿಗೆ ಮಾದರಿ ಕಾರ್ಯಕ್ರಮ

ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…

7 hours ago

ಹೊಗೇನಕಲ್‌ ಜಲಪಾತಕ್ಕೆ ಪ್ರವಾಸಿಗರ ದಂಡು

ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…

7 hours ago

ಪುಷ್ಪ-2 ಕಾಲ್ತುಳಿತ ಪ್ರಕರಣ ; ವರ್ಷದ ಬಳಿಕ ಚಾರ್ಜ್‌ಶೀಟ್‌ ಸಲ್ಲಿಕೆ

ಹೈದರಾಬಾದ್‌ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…

7 hours ago