ಕ್ರೀಡೆ

Paris Olympics 2024: ಮನು ಭಾಕರ್‌ ಗುರಿ ತಪ್ಪಿದ ಮೂರನೇ ಪದಕ

ಪ್ಯಾರಿಸ್‌: ಸತತ ಎರಡು ಪದಕಗಳನ್ನು ಗೆದ್ದು ಇತಿಹಾಸ ನಿರ್ಮಿಸಿದ್ದ ಮನು ಭಾಕರ್‌ ಅವರು ಮೂರನೇ ಪದಕ ಗೆಲ್ಲುವಲ್ಲಿ ವಿಫಲರಾಗಿದ್ದಾರೆ. ಆಗಿದ್ದರೂ ಪ್ಯಾರಿಸ್‌ ಒಲಂಪಿಕ್ಸ್‌ನಲ್ಲಿ ವಿನೂತನ ದಾಖಲೆಯೊಂದನ್ನು ಬರೆದಿದ್ದಾರೆ.

25 ಮೀ ಏರ್‌ ಪಿಸ್ತೂಲ್‌ ವಿಭಾಗದಲ್ಲಿ ನಾಲ್ಕನೇ ಸ್ಥಾನ ಪಡೆಯುವ ಮೂಲಕ ತಮ್ಮ ಅಭಿಯಾನವನ್ನು ಅಂತ್ಯಗೊಳಿಸಿದ್ದಾರೆ. ಈ ಹಿಂದೆ ಇದೇ ಒಲಂಪಿಕ್ಸ್‌ನಲ್ಲಿ 10 ಮೀ. ಏರ್‌ ಪಿಸ್ತೂಲ್‌ ಹಾಗೂ 10 ಮೀ. ಏರ್‌ ಪಿಸ್ತೂಲ್‌ ಮಿಶ್ರ ಸ್ಪರ್ಧೆಯಲ್ಲಿ ಕ್ರಮವಾಗಿ ಕಂಚಿನ ಪದಕ ಗೆಲ್ಲುವ ಮೂಲಕ ನೂತನ ಸಾಧನೆ ಮಾಡಿದ್ದರು. ಆದರೆ ಮೂರನೇ ಪದಕ ಜಯಿಸುವಲ್ಲಿ ಮನು ಭಾಕರ್‌ ಅವರು ವಿಫಲರಾಗಿದ್ದಾರೆ.

ಮನು ಭಾಕರ್‌ ಪದಕ ಸುತ್ತಿನಲ್ಲಿ ಕೇವಲ 28 ಅಂಕ ಗಳಿಸಿ ನಾಲ್ಕನೇ ಸ್ಥಾನ ಪಡೆದರು. ದ. ಕೊರಿಯಾದ ಜಿ ಯಾಂಗ್‌ ಅವರು 37 ಅಂಕಗಳನ್ನು ಪಡೆಯುವ ಮೂಲಕ ಚಿನ್ನದ ಪದಕಕ್ಕೆ ಮುತ್ತಿಕ್ಕಿದ್ದರು. ಫ್ರಾನ್ಸ್‌ನ ಕ್ಯಾಮಿಲೆ 37 ಅಂಕ ಗಳಿಸಿ ಬೆಳ್ಳಿ ಪದಕ ಪಡೆದರು. ಇನ್ನು ಹಂಗೇರಿಯಾ ವೆರೋನಿಕಾ 31 ಅಂಕ ಗಳಿಸಿ ಕಂಚಿನ ಪದಕ ಗೆದ್ದರು. ಮನು ಭಾಕರ್‌ ನಾಲ್ಕನೆಯವರಾಗಿ ಹೊರ ನಡೆದರು.

ಇನ್ನು ಈ ಬಾರಿಯ ಪ್ಯಾರಿಸ್‌ ಒಲಂಪಿಕ್ಸ್‌ನಲ್ಲಿ ಸತತ ಎರಡು ಮೆಡಲ್‌ ಗೆಲ್ಲುವ ಮೂಲಕ ಶೂಟಿಂಗ್‌ನಲ್ಲಿ ಒಂದೇ ಆವೃತ್ತಿಯಲ್ಲಿ ಎರಡು ಪದಕ ಗೆದ್ದ ಮೊದಲ ಆಟಗಾರ್ತಿ ಎಂಬ ದಾಖಲೆಯನ್ನು ಮನು ಭಾಕರ್‌ ಬರೆದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಕಾಕ್ರೋಚ್‌ ಪ್ರತಿಭಟನೆ ; ವಿದ್ಯಾರ್ಥಿಗಳ ರಕ್ಷಣೆಗೆ ಪೊಲೀಸ್‌ ವ್ಯಾನ್‌ ತಡೆದ ಜೇನ್‌-ಝಿ ಕಿಡ್‌

ಮುಂಬೈ : ನೀಟ್‌ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್‌ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…

36 mins ago

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

13 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

13 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

13 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

13 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

14 hours ago