ಕ್ರೀಡೆ

Paris Olympics 2024: ಕಂಚಿನ ಪದಕ ಗೆಲ್ಲುವ ಮೂಲಕ ವಿಶ್ವದಾಖಲೆ ಬರೆದ ಭಾಕರ್‌!

ಪ್ಯಾರಿಸ್‌: ಹರ್ಯಾಣ ಮೂಲದ 22 ವರ್ಷದ ಮನು ಭಾಕರ್‌ ಅವರು ಇಲ್ಲಿನ ಪ್ಯಾರಿಸ್‌ ಒಲಂಪಿಕ್ಸ್‌ನ ಕ್ರೀಡಾಕೂಟದಲ್ಲಿ ತಮ್ಮ ವೈಯಕ್ತಿಕ ಎರಡನೇ ಕಂಚಿನ ಪದಕ ಗೆಲ್ಲುವ ಮೂಲಕ ವಿಶ್ವ ದಾಖಲೆಯನ್ನು ರಚಿಸಿದ್ದಾರೆ.

ಭಾರತದ ಆಟಗಾರ್ತಿಯೊಬ್ಬರು ಒಂದೇ ಒಲಂಪಿಕ್ಸ್‌ನಲ್ಲಿ ಒಂದಕ್ಕಿಂತ ಎರಡು ಮೆಡಲ್‌ಗಳನ್ನು ಗೆದ್ದ ಏಕೈಕ ಆಟಗಾರ್ತಿ ಎಂಬ ಹಿರಿಮೆ ಪಾತ್ರರಾಗಿದ್ದಾರೆ.

10 ಮೀ ಏರ್‌ ಪಿಸ್ತೂಲ್‌ ಮಿಶ್ರ ತಂಡ ಸ್ಪರ್ಧೆಯಲ್ಲಿ ದಕ್ಷಿಣ ಕೊರಿಯಾ ವಿರುದ್ಧ ಕಂಚಿಗಾಗಿ ನಡೆದ ಕಾದಾಟದಲ್ಲಿ ಭಾರತದ ಮನು ಭಾಕರ್‌ ಹಾಗೂ ಶರಬ್ಜೋತ್‌ ಸಿಂಗ್‌ ಗೆಲ್ಲುವ ಮೂಲಕ ಕಂಚಿನ ಪದಕಕ್ಕೆ ಮುತ್ತಿಕ್ಕಿದ್ದಾರೆ.

ಈ ಜೋಡಿಯು ರೊಪಬ್ಲಿಕ್‌ ಆಫ್‌ ಕೊರಿಯಾ ಜೋಡಿಯಾದ ಓಹ್‌ ಯೆ ಜಿನ್‌ ಹಾಗೂ ಲೀ ವೋನ್ಹೋ ಅವರ ವಿರುದ್ಧ 10-16 ರ ಅಂತರದಿಂದ ಭಾರತದ ಸ್ಪರ್ಧಿಗಳು ವಿಜೇತರಾಗಿದ್ದಾರೆ.

ಇದರೊಂದಿಗೆ ಭಾರತಕ್ಕೆ ಎರಡನೇ ಪದಕ ಹಾಗೂ ಮುನ ಭಾಕರ್‌ ಅವರಿಗೂ ಸಹಾ ವೈಯಕ್ತಿಕ ಎರಡನೇ ಪದಕ ಬಂದಂತಾಗಿದೆ. ಇನ್ನು ಮನು ಭಾಕರ್‌ ಅವರು 25 ಮೀ ಎರ್‌ ರೈಫಲ್‌ ಶೂಟಿಂಗ್‌ ನಲ್ಲಿಯೂ ಭಾಗವಹಿಸುತ್ತಿದ್ದು, ಭಾರತೀಯರಿಗೆ ಮತ್ತೊಂದ ಪದಕದ ನಿರೀಕ್ಷೆ ಹುಟ್ಟಿಸಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

4 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

7 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

11 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

13 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

14 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

15 hours ago