ಕ್ರೀಡೆ

Paris Olympics 2024: ಶೂಟಿಂಗ್‌ನಲ್ಲಿ ಪದಕ ಗೆದ್ದ ಭಾಕರ್‌; ಭಾರತಕ್ಕೆ ಮೊದಲ ಪದಕ ಸಂಭ್ರಮ

ಪ್ಯಾರಿಸ್‌: ಪ್ರಸಕ್ತ ಒಲಂಪಿಕ್ಸ್‌ನಲ್ಲಿ ಭಾರತ ತನ್ನ ಮೊದಲ ಪದಕಕ್ಕೆ ಮುತ್ತಿಕ್ಕಿದೆ. ಮಹಿಳಾ ವಿಭಾಗದ 10 ಮೀ ಏರ್‌ ಪಿಸ್ತೂಲ್‌ ವಿಭಾಗದಲ್ಲಿ ಭಾರತದ ತಾರೆ ಮನು ಭಾಕರ್‌ ಅವರು ದೇಶಕ್ಕೆ ಮೊದಲ ಪದಕವನ್ನು ಜಯಿಸಿಕೊಟ್ಟಿದ್ದಾರೆ.

ಆ ಮೂಲಕ ಒಲಂಪಿಕ್ಸ್‌ನ ಏರ್‌ ಪಿಸ್ತೂಲ್‌ ವಿಭಾಗದಲ್ಲಿ ಕಂಚಿನ ಪದಕ ಗೆದ್ದ ಮೊದಲ ಮಹಿಳೆ ಎಂಬ ಕೀರ್ತಿಗೆ 22 ವರ್ಷದ ಮನು ಭಾಕರ್‌ ಪಾತ್ರರಾಗಿದ್ದಾರೆ.

ಕ್ರೀಡಾಕೂಟದಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ 2024ರ ಒಲಂಪಿಕ್ಸ್‌ನಲ್ಲಿ ಭಾರತ ತನ್ನ ಖಾತೆ ತೆರದಿದೆ.

ರಿಪಬ್ಲಿಕ್‌ ಆಫ್‌ ಕೊರಿಯಾದ ಓ ಯೆ ಜಿನ್‌ 243.2 ಅಂಕ ಗಳಿಸಿ ಚಿನ್ನಕ್ಕೆ ಮುತ್ತಿಟ್ಟರೆ, 241.3 ಅಂಕ ಗಳಿಸಿದ ಕಮ್‌ ಯೆಜಿ ಬೆಳ್ಳಿ ಗೆದ್ದರು. ಇನ್ನು 221.7 ಅಂಕ ಗಳಿಸಿದ ಮನು ಭಾಕರ್‌ ಅವರು ಕಂಚಿಗೆ ತೃಪ್ತಿಪಟ್ಟುಕೊಂಡರು.

ಮನು ಭಾಕರ್‌ ಅವರು ಈ ಪ್ರಶಸ್ತಿ ಗೆಲ್ಲುವ ಮೂಲಕ ಹನ್ನೆರೆಡು ವರ್ಷಗಳ ಬಳಿಕ ಭಾರತಕ್ಕೆ ಏರ್‌ ಪಿಸ್ತೂಲ್‌ ವಿಭಾಗದಲ್ಲಿ ಮೊಲದ ಪದಕ ಗೆದ್ದ ಕೀರ್ತಿಗೆ ಪಾತ್ರರಾದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಕಾಕ್ರೋಚ್‌ ಪ್ರತಿಭಟನೆ ; ವಿದ್ಯಾರ್ಥಿಗಳ ರಕ್ಷಣೆಗೆ ಪೊಲೀಸ್‌ ವ್ಯಾನ್‌ ತಡೆದ ಜೇನ್‌-ಝಿ ಕಿಡ್‌

ಮುಂಬೈ : ನೀಟ್‌ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್‌ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…

37 mins ago

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

13 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

13 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

13 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

14 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

14 hours ago