ಕ್ರೀಡೆ

ವಿರಾಟ್‌ ಕೊಹ್ಲಿಯಿಂದ ವಿಶೇಷ ಗಿಫ್ಟ್‌ ಪಡೆದ ಮ್ಯಾಕ್ಸಿ!

ಅಹ್ಮದಾಬಾದ್‌ :  ಐಸಿಸಿ ಏಕದಿನ ವಿಶ್ವಕಪ್‌ ೨೦೨೩ ಫೈನಲ್‌ನಲ್ಲಿ  ಭಾರತ ತಂಡವು ಆಸೀಸ್‌ ವಿರುದ್ಧ ಮುಗ್ಗರಿಸಿ ಪ್ರಶಸ್ತಿ ರನ್ನರ್ಸ್‌ ಪಟ್ಟ ಪಡೆಯಿತು. ಇದೆಲ್ಲದರ ಹೊರತಾಗಿಯೂ ರನ್ ಮೆಷಿನ್‌ ವಿರಾಟ್‌ ಕೊಹ್ಲಿ ತಮ್ಮ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ) ತಂಡದ ಆಟಗಾರನೊಬ್ಬನಿಗೆ ವಿಶೇಷ ಉಡುಗೊರೆ ನೀಡಿದ್ದಾರೆ.

ಭಾನುವಾರ ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್‌ ಪಂದ್ಯದಲ್ಲಿ ಅರ್ಧ ಶತಕ ದಾಖಲಿಸಿದ ವಿರಾಟ್‌ ಕೊಹ್ಲಿ ವರ್ಲ್ಡ್‌ಕಪ್‌ ೨೩ರ ಗರಿಷ್ಠ ರನ್‌ ಸ್ಕೋರರ್‌ ಆಗಿ ಹೊರಹೊಮ್ಮಿದ ಬೆನ್ನಲ್ಲೇ ಇದೀಗ ಆಸ್ಟ್ರೇಲಿಯಾ ತಂಡದ ಆಲ್‌ರೌಂಡರ್‌ ಆಟಗಾರ ಮ್ಯಾಕ್ಸ್‌ವೆಲ್‌ ಅವರಿಗೆ ತಾವು ಸಹಿ ಮಾಡಿದ ಇಂಡಿಯಾ ಜೆರ್ಸಿಯನ್ನು ಉಡುಗೊರೆಯಾಗಿ ನೀಡುವ ಮೂಲಕ ಮತ್ತೊಮ್ಮೆ ಕ್ರೀಡಾಸ್ಪೂರ್ತಿ ಮೆರೆದಿದ್ದಾರೆ.

ಈ ಪಂದ್ಯದಲ್ಲಿ ರನ್‌ ಮೆಷಿನ್‌ ವಿರಾಟ್‌ ಕೊಹ್ಲಿ ಅವರು ೫೪ ರನ್‌ ಬಾರಿಸುವ ಮೂಲಕ ಈ ಟೂರ್ನಿಯ ಅತ್ಯಧಿಕ ರನ್‌ ಸ್ಕೋರರ್‌ ಆದರು. ಹಾಗೂ ಗಾಡ್‌ ಆಫ್‌ ಕ್ರಿಕೆಟ್‌ ಸಚಿನ್‌ ತೆಂಡುಲ್ಕರ್‌ ಅವರ ದಾಖಲೆಯನ್ನು ಸಹಾ ಸರಿಗಟ್ಟಿದರು.

ಫೈನಲ್‌ನಲ್ಲಿ ಭಾರತ ತಂಡ ಕೊಹ್ಲಿ (೫೪), ನಾಯಕ ರೋಹಿತ್‌ ಶರ್ಮಾ(೪೭), ಕನ್ನಡಿಗ ರಾಹುಲ್‌ (೬೬) ಹೊರತಾಗಿ ಭಾರತ ೨೪೧ ರನ್‌ ಗುರಿ ನೀಡಿತು.

ಮಿಚೆಲ್‌ ಸ್ಟಾರ್ಕ್‌ ೫೭ಕ್ಕೆ೩ ಹಾಗೂ ಫೈನಲ್‌ ಪಂದ್ಯದ ಪಂದ್ಯ ಶ್ರೇಷ್ಠ ಟ್ರಾವಿಸ್‌ ಹೆಡ್‌ (೧೩೭) ಅವರ ಅಮೊಘ ಪ್ರದರ್ಶ ಮೂಲಕ ಭಾರತ ತಂಡ ವಿರುದ್ಧ ಆಸೀಸ್‌ ಜಯ ಗಳಿಸಿ ತಮ್ಮ ೬ನೇ ಟ್ರೋಫಿಯನ್ನು ತನ್ನದಾಗಿಸಿಕೊಂಡಿತು.

https://x.com/cricketworldcup/status/1726426465355341832?s=20

andolanait

Recent Posts

ನಾಳೆ ಕೇಂದ್ರ ಬಜೆಟ್‌ ಮಂಡನೆ ಮಂಡನೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ನಾಳೆ 9ನೇ ಬಾರಿಗೆ ಬಜೆಟ್‌ ಮಂಡನೆ ಮಾಡಲಿದ್ದಾರೆ. ಈ ಮೂಲಕ…

26 mins ago

ಬನ್ನೇರುಘಟ್ಟದ ಕಾಸಾಗ್ರ್ಯಾಂಡ್‌ನಲ್ಲಿ ಇಂದು ಸಂಜೆ ಉದ್ಯಮಿ ಸಿ.ಜೆ.ರಾಯ್ ಅಂತ್ಯಕ್ರಿಯೆ

ಬೆಂಗಳೂರು: ಖ್ಯಾತ ಉದ್ಯಮಿ ಮತ್ತು ಕಾನ್ಪಿಡೆಂಟ್‌ ಗ್ರೂಪ್‌ ಸಂಸ್ಥಾಪಕ ಹಾಗೂ ಅಧ್ಯಕ್ಷರಾಗಿದ್ದ ಸಿ.ಜೆ.ರಾಯ್‌ ಅವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು,…

1 hour ago

ಓದುಗರ ಪತ್ರ: ಮೈಸೂರಿನಲ್ಲಿ ಮಳೆ ನೀರು ಕೊಯ್ಲು ಥೀಮ್ ಪಾರ್ಕ್ ಕನ್ನಡಿಯೊಳಗಿನ ಗಂಟು

ಮೈಸೂರು ನಗರದಲ್ಲಿ ಮಳೆನೀರು ಕೊಯ್ಲು ಥೀಮ್ ಪಾರ್ಕ್ ಸ್ಥಾಪಿಸುವ ಹಿಂದಿನ ಹಾಗೂ ಈಗಿನ ಸರ್ಕಾರಗಳ ಭರವಸೆ ಇನ್ನೂ ಕನ್ನಡಿಯೊಳಗಿನ ಗಂಟಾಗಿಯೇ…

4 hours ago

ಓದುಗರ ಪತ್ರ: ಅಂಕೇಗೌಡರಿಗೆ ಸಿಕ್ಕ ಪದ್ಮಶ್ರೀ ಸಾರಸ್ವತ ಲೋಕಕ್ಕೆ ಸಂದ ಗೌರವ

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಹರಳಹಳ್ಳಿಯ ಪುಸ್ತಕ ಪ್ರೇಮಿ ೭೮ ವರ್ಷದ ಅಂಕೇಗೌಡ ಅವರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿರುವುದು ಕನ್ನಡ…

4 hours ago

ಓದುಗರ ಪತ್ರ: ರಾಮಕೃಷ್ಣನಗರಕ್ಕೆ ಮತ್ತಷ್ಟು ಬಸ್ ಸೌಲಭ್ಯ ಕಲ್ಪಿಸಿ

ಮೈಸೂರಿನ ರಾಮಕೃಷ್ಣನಗರ ಮಾರ್ಗಕ್ಕೆ ಪ್ರತಿದಿನ ನಗರ ಸಾರಿಗೆ ಬಸ್ಸುಗಳು ಸಂಚರಿಸುತ್ತವೆ. ಆದರೆ ಈ ಮಾರ್ಗದಲ್ಲಿ ಓಡಾಡುವ ಬಸ್ಸುಗಳ ಸಂಖ್ಯೆ ಮಾತ್ರ…

4 hours ago

ವಿಜೃಂಭಣೆಯಿಂದ ನಡೆದ ಸಂತೆ ಮಾಸ್ತಮ್ಮನವರ ಜಾತ್ರೆ

ಸರಗೂರು: ಪಟ್ಟಣದಲ್ಲಿ ಗ್ರಾಮದೇವತೆ ಶ್ರೀ ಸಂತೆ ಮಾಸ್ತಮ್ಮನವರ ೩೧ನೇ ಜಾತ್ರಾ ಮಹೋತ್ಸವ ಹಾಗೂ ಕೊಂಡೋತ್ಸವ ಶುಕ್ರವಾರ ವಿಜೃಂಭಣೆಯಿಂದ ನೆರವೇರಿತು. ಜಾತ್ರಾ…

4 hours ago