ಕ್ರೀಡೆ

ವಿರಾಟ್‌ ಕೊಹ್ಲಿಯಿಂದ ವಿಶೇಷ ಗಿಫ್ಟ್‌ ಪಡೆದ ಮ್ಯಾಕ್ಸಿ!

ಅಹ್ಮದಾಬಾದ್‌ :  ಐಸಿಸಿ ಏಕದಿನ ವಿಶ್ವಕಪ್‌ ೨೦೨೩ ಫೈನಲ್‌ನಲ್ಲಿ  ಭಾರತ ತಂಡವು ಆಸೀಸ್‌ ವಿರುದ್ಧ ಮುಗ್ಗರಿಸಿ ಪ್ರಶಸ್ತಿ ರನ್ನರ್ಸ್‌ ಪಟ್ಟ ಪಡೆಯಿತು. ಇದೆಲ್ಲದರ ಹೊರತಾಗಿಯೂ ರನ್ ಮೆಷಿನ್‌ ವಿರಾಟ್‌ ಕೊಹ್ಲಿ ತಮ್ಮ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ) ತಂಡದ ಆಟಗಾರನೊಬ್ಬನಿಗೆ ವಿಶೇಷ ಉಡುಗೊರೆ ನೀಡಿದ್ದಾರೆ.

ಭಾನುವಾರ ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್‌ ಪಂದ್ಯದಲ್ಲಿ ಅರ್ಧ ಶತಕ ದಾಖಲಿಸಿದ ವಿರಾಟ್‌ ಕೊಹ್ಲಿ ವರ್ಲ್ಡ್‌ಕಪ್‌ ೨೩ರ ಗರಿಷ್ಠ ರನ್‌ ಸ್ಕೋರರ್‌ ಆಗಿ ಹೊರಹೊಮ್ಮಿದ ಬೆನ್ನಲ್ಲೇ ಇದೀಗ ಆಸ್ಟ್ರೇಲಿಯಾ ತಂಡದ ಆಲ್‌ರೌಂಡರ್‌ ಆಟಗಾರ ಮ್ಯಾಕ್ಸ್‌ವೆಲ್‌ ಅವರಿಗೆ ತಾವು ಸಹಿ ಮಾಡಿದ ಇಂಡಿಯಾ ಜೆರ್ಸಿಯನ್ನು ಉಡುಗೊರೆಯಾಗಿ ನೀಡುವ ಮೂಲಕ ಮತ್ತೊಮ್ಮೆ ಕ್ರೀಡಾಸ್ಪೂರ್ತಿ ಮೆರೆದಿದ್ದಾರೆ.

ಈ ಪಂದ್ಯದಲ್ಲಿ ರನ್‌ ಮೆಷಿನ್‌ ವಿರಾಟ್‌ ಕೊಹ್ಲಿ ಅವರು ೫೪ ರನ್‌ ಬಾರಿಸುವ ಮೂಲಕ ಈ ಟೂರ್ನಿಯ ಅತ್ಯಧಿಕ ರನ್‌ ಸ್ಕೋರರ್‌ ಆದರು. ಹಾಗೂ ಗಾಡ್‌ ಆಫ್‌ ಕ್ರಿಕೆಟ್‌ ಸಚಿನ್‌ ತೆಂಡುಲ್ಕರ್‌ ಅವರ ದಾಖಲೆಯನ್ನು ಸಹಾ ಸರಿಗಟ್ಟಿದರು.

ಫೈನಲ್‌ನಲ್ಲಿ ಭಾರತ ತಂಡ ಕೊಹ್ಲಿ (೫೪), ನಾಯಕ ರೋಹಿತ್‌ ಶರ್ಮಾ(೪೭), ಕನ್ನಡಿಗ ರಾಹುಲ್‌ (೬೬) ಹೊರತಾಗಿ ಭಾರತ ೨೪೧ ರನ್‌ ಗುರಿ ನೀಡಿತು.

ಮಿಚೆಲ್‌ ಸ್ಟಾರ್ಕ್‌ ೫೭ಕ್ಕೆ೩ ಹಾಗೂ ಫೈನಲ್‌ ಪಂದ್ಯದ ಪಂದ್ಯ ಶ್ರೇಷ್ಠ ಟ್ರಾವಿಸ್‌ ಹೆಡ್‌ (೧೩೭) ಅವರ ಅಮೊಘ ಪ್ರದರ್ಶ ಮೂಲಕ ಭಾರತ ತಂಡ ವಿರುದ್ಧ ಆಸೀಸ್‌ ಜಯ ಗಳಿಸಿ ತಮ್ಮ ೬ನೇ ಟ್ರೋಫಿಯನ್ನು ತನ್ನದಾಗಿಸಿಕೊಂಡಿತು.

https://x.com/cricketworldcup/status/1726426465355341832?s=20

andolanait

Recent Posts

ಓದುಗರ ಪತ್ರ: ಮಾನಸ ಗಂಗೋತ್ರಿಯಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಿ

ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯಲ್ಲಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಿವಿಯ ಆವರಣದಲ್ಲಿ ವಿದ್ಯಾರ್ಥಿ ನಿಲಯಗಳ ವ್ಯವಸ್ಥೆಯೂ ಇದೆ. ಸ್ಥಳೀಯ…

16 seconds ago

ಓದುಗರ ಪತ್ರ: ಶಾಂತಿ, ಸೌಹಾರ್ದ ಸಭೆಗಳು ಹೆಚ್ಚು ಹೆಚ್ಚು ನಡೆಯಲಿ

ಇತ್ತೀಚಿನ ದಿನಗಳಲ್ಲಿ ಅಲ್ಲಲ್ಲಿ ಜಾತಿ ಸಂಘರ್ಷ, ಧರ್ಮ ಸಂಘರ್ಷ, ಜನಾಂಗೀಯ ಸಂಘರ್ಷಗಳು ನಡೆಯುತ್ತಲೇ ಇವೆ. ‘ಸರ್ವ ಜನಾಂಗದ ಶಾಂತಿಯ ತೋಟ’…

2 mins ago

ಓದುಗರ ಪತ್ರ: ಶ್ರೇಷ್ಠ ಕಾರ್ಮಿಕ ಧುರೀಣ ಅನಂತ ಸುಬ್ಬರಾವ್

ಹಿರಿಯ ಕಾರ್ಮಿಕ ಧುರೀಣ, ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕ ಅನಂತ ಸುಬ್ಬರಾವ್ ಕಳೆದ ಸುಮಾರು ೪-೫ ದಶಕಗಳಿಂದ ಕಾರ್ಮಿಕ ಚಳವಳಿಗಳಲ್ಲಿ…

4 mins ago

ಬಾಪೂಜಿ ನೆನಪಲ್ಲಿ; ಖಾದಿ ಕೇಂದ್ರದ ಅಂಗಳದಲ್ಲಿ…

ಕೆ.ಎಸ್. ಚಂದ್ರಶೇಖರ್ ಮೂರ್ತಿ ದುಸ್ಥಿತಿಯಲ್ಲಿ ದೇಶದ ಪ್ರಪ್ರಥಮ ತಗಡೂರು ಖಾದಿ ಕೇಂದ್ರ  ಜ.೩೦, ೧೯೪೮ರಂದು ಅಹಿಂಸಾ ಪ್ರತಿಪಾದಕ, ಸ್ವಾತಂತ್ರ್ಯ ಹೋರಾಟಗಾರ…

6 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ನಿರ್ಮಾಪಕರ ಸಂಘ, ವಾಣಿಜ್ಯ ಮಂಡಳಿ ಚುನಾವಣೆ, ಚಿತ್ರನಗರಿ, ಒಟಿಟಿ ವರ್ತಮಾನ

ಹೊಸ ವರ್ಷದಲ್ಲಿ ಕನ್ನಡ ಚಿತ್ರರಂಗದ ಚಟುವಟಿಕೆಗಳು ಗರಿಗೆದರಿವೆ. ಒಂದೆಡೆ ನಿರ್ಮಾಪಕರ ಸಂಘ ಮತ್ತು ಚಲನಚಿತ್ರ ವಾಣಿಜ್ಯ ಮಂಡಳಿಗಳ ಚುನಾವಣೆಯ ಬಿರುಸು,…

12 mins ago

ಚಳಿ ಇರುವಾಗಲೇ ದಿನಕ್ಕೊಂದು ‘ಅಗ್ನಿ ಕರೆ’

ಚಾಮರಾಜನಗರ: ಚಳಿ ಇನ್ನೂ ದೂರ ಸರಿದಿಲ್ಲ. ಆದರೂ ಬಿಸಿಲು ಬೆವರು ಹರಿಯುವ ಮಟ್ಟಿಗೆ ಸುಡುತ್ತಿದೆ. ನೆಲ ದಿನೇ ದಿನೇ ಕಾದ…

18 mins ago