ಅಹ್ಮದಾಬಾದ್ : ಐಸಿಸಿ ಏಕದಿನ ವಿಶ್ವಕಪ್ ೨೦೨೩ ಫೈನಲ್ನಲ್ಲಿ ಭಾರತ ತಂಡವು ಆಸೀಸ್ ವಿರುದ್ಧ ಮುಗ್ಗರಿಸಿ ಪ್ರಶಸ್ತಿ ರನ್ನರ್ಸ್ ಪಟ್ಟ ಪಡೆಯಿತು. ಇದೆಲ್ಲದರ ಹೊರತಾಗಿಯೂ ರನ್ ಮೆಷಿನ್ ವಿರಾಟ್ ಕೊಹ್ಲಿ ತಮ್ಮ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡದ ಆಟಗಾರನೊಬ್ಬನಿಗೆ ವಿಶೇಷ ಉಡುಗೊರೆ ನೀಡಿದ್ದಾರೆ.
ಭಾನುವಾರ ಅಹ್ಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಅರ್ಧ ಶತಕ ದಾಖಲಿಸಿದ ವಿರಾಟ್ ಕೊಹ್ಲಿ ವರ್ಲ್ಡ್ಕಪ್ ೨೩ರ ಗರಿಷ್ಠ ರನ್ ಸ್ಕೋರರ್ ಆಗಿ ಹೊರಹೊಮ್ಮಿದ ಬೆನ್ನಲ್ಲೇ ಇದೀಗ ಆಸ್ಟ್ರೇಲಿಯಾ ತಂಡದ ಆಲ್ರೌಂಡರ್ ಆಟಗಾರ ಮ್ಯಾಕ್ಸ್ವೆಲ್ ಅವರಿಗೆ ತಾವು ಸಹಿ ಮಾಡಿದ ಇಂಡಿಯಾ ಜೆರ್ಸಿಯನ್ನು ಉಡುಗೊರೆಯಾಗಿ ನೀಡುವ ಮೂಲಕ ಮತ್ತೊಮ್ಮೆ ಕ್ರೀಡಾಸ್ಪೂರ್ತಿ ಮೆರೆದಿದ್ದಾರೆ.
ಈ ಪಂದ್ಯದಲ್ಲಿ ರನ್ ಮೆಷಿನ್ ವಿರಾಟ್ ಕೊಹ್ಲಿ ಅವರು ೫೪ ರನ್ ಬಾರಿಸುವ ಮೂಲಕ ಈ ಟೂರ್ನಿಯ ಅತ್ಯಧಿಕ ರನ್ ಸ್ಕೋರರ್ ಆದರು. ಹಾಗೂ ಗಾಡ್ ಆಫ್ ಕ್ರಿಕೆಟ್ ಸಚಿನ್ ತೆಂಡುಲ್ಕರ್ ಅವರ ದಾಖಲೆಯನ್ನು ಸಹಾ ಸರಿಗಟ್ಟಿದರು.
ಫೈನಲ್ನಲ್ಲಿ ಭಾರತ ತಂಡ ಕೊಹ್ಲಿ (೫೪), ನಾಯಕ ರೋಹಿತ್ ಶರ್ಮಾ(೪೭), ಕನ್ನಡಿಗ ರಾಹುಲ್ (೬೬) ಹೊರತಾಗಿ ಭಾರತ ೨೪೧ ರನ್ ಗುರಿ ನೀಡಿತು.
ಮಿಚೆಲ್ ಸ್ಟಾರ್ಕ್ ೫೭ಕ್ಕೆ೩ ಹಾಗೂ ಫೈನಲ್ ಪಂದ್ಯದ ಪಂದ್ಯ ಶ್ರೇಷ್ಠ ಟ್ರಾವಿಸ್ ಹೆಡ್ (೧೩೭) ಅವರ ಅಮೊಘ ಪ್ರದರ್ಶ ಮೂಲಕ ಭಾರತ ತಂಡ ವಿರುದ್ಧ ಆಸೀಸ್ ಜಯ ಗಳಿಸಿ ತಮ್ಮ ೬ನೇ ಟ್ರೋಫಿಯನ್ನು ತನ್ನದಾಗಿಸಿಕೊಂಡಿತು.
https://x.com/cricketworldcup/status/1726426465355341832?s=20
ಬೆಳಗಾವಿ: ರಾಜ್ಯದ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ. ಹೈಕಮಾಂಡ್ ಕ್ಲಿಯರ್ ಆಗಿ ಹೇಳಿದೆ ಎಂದು ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ…
ಬೆಂಗಳೂರು: ಮನೆ ಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…
ಬೆಳಗಾವಿ: ಪೊಲೀಸ್ ಇಲಾಖೆಯಲ್ಲಿ 14 ಸಾವಿರ ಹುದ್ದೆಗಳು ಖಾಲಿಯಿದ್ದು, ಈ ಪೈಕಿ 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ ತೆಗೆದುಕೊಳ್ಳಲಾಗುತ್ತದೆ…
ಬೆಳಗಾವಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಹೈಕಮಾಂಡ್ ಸ್ಪಷ್ಟವಾಗಿ ಹೇಳಿದೆ ಎಂದು ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಮತ್ತೊಮ್ಮೆ ಬಾಂಬ್…
ಬೆಂಗಳೂರು: ಸರ್ಕಾರಿ ಆಸ್ಪತ್ರೆಯಲ್ಲಿ ಜನೌಷಧಿ ಕೇಂದ್ರ ಮುಚ್ಚುವ ರಾಜ್ಯ ಸರ್ಕಾರದ ಆದೇಶಕ್ಕೆ ಧಾರವಾಡ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಸರ್ಕಾರಿ ಆಸ್ಪತ್ರೆಯ…
ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆಯ ವರಾಹ ಗೇಟ್ನ ಮುಖ್ಯದ್ವಾರದ ಮೇಲ್ಛಾವಣಿ ಕುಸಿದು ಬಿದ್ದಿದ್ದು, ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಸಾರ್ವಜನಿಕರು ಆಗಮಿಸುವ…