ಕ್ರೀಡೆ

ವಿರಾಟ್‌ ಕೊಹ್ಲಿಯಿಂದ ವಿಶೇಷ ಗಿಫ್ಟ್‌ ಪಡೆದ ಮ್ಯಾಕ್ಸಿ!

ಅಹ್ಮದಾಬಾದ್‌ :  ಐಸಿಸಿ ಏಕದಿನ ವಿಶ್ವಕಪ್‌ ೨೦೨೩ ಫೈನಲ್‌ನಲ್ಲಿ  ಭಾರತ ತಂಡವು ಆಸೀಸ್‌ ವಿರುದ್ಧ ಮುಗ್ಗರಿಸಿ ಪ್ರಶಸ್ತಿ ರನ್ನರ್ಸ್‌ ಪಟ್ಟ ಪಡೆಯಿತು. ಇದೆಲ್ಲದರ ಹೊರತಾಗಿಯೂ ರನ್ ಮೆಷಿನ್‌ ವಿರಾಟ್‌ ಕೊಹ್ಲಿ ತಮ್ಮ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ) ತಂಡದ ಆಟಗಾರನೊಬ್ಬನಿಗೆ ವಿಶೇಷ ಉಡುಗೊರೆ ನೀಡಿದ್ದಾರೆ.

ಭಾನುವಾರ ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್‌ ಪಂದ್ಯದಲ್ಲಿ ಅರ್ಧ ಶತಕ ದಾಖಲಿಸಿದ ವಿರಾಟ್‌ ಕೊಹ್ಲಿ ವರ್ಲ್ಡ್‌ಕಪ್‌ ೨೩ರ ಗರಿಷ್ಠ ರನ್‌ ಸ್ಕೋರರ್‌ ಆಗಿ ಹೊರಹೊಮ್ಮಿದ ಬೆನ್ನಲ್ಲೇ ಇದೀಗ ಆಸ್ಟ್ರೇಲಿಯಾ ತಂಡದ ಆಲ್‌ರೌಂಡರ್‌ ಆಟಗಾರ ಮ್ಯಾಕ್ಸ್‌ವೆಲ್‌ ಅವರಿಗೆ ತಾವು ಸಹಿ ಮಾಡಿದ ಇಂಡಿಯಾ ಜೆರ್ಸಿಯನ್ನು ಉಡುಗೊರೆಯಾಗಿ ನೀಡುವ ಮೂಲಕ ಮತ್ತೊಮ್ಮೆ ಕ್ರೀಡಾಸ್ಪೂರ್ತಿ ಮೆರೆದಿದ್ದಾರೆ.

ಈ ಪಂದ್ಯದಲ್ಲಿ ರನ್‌ ಮೆಷಿನ್‌ ವಿರಾಟ್‌ ಕೊಹ್ಲಿ ಅವರು ೫೪ ರನ್‌ ಬಾರಿಸುವ ಮೂಲಕ ಈ ಟೂರ್ನಿಯ ಅತ್ಯಧಿಕ ರನ್‌ ಸ್ಕೋರರ್‌ ಆದರು. ಹಾಗೂ ಗಾಡ್‌ ಆಫ್‌ ಕ್ರಿಕೆಟ್‌ ಸಚಿನ್‌ ತೆಂಡುಲ್ಕರ್‌ ಅವರ ದಾಖಲೆಯನ್ನು ಸಹಾ ಸರಿಗಟ್ಟಿದರು.

ಫೈನಲ್‌ನಲ್ಲಿ ಭಾರತ ತಂಡ ಕೊಹ್ಲಿ (೫೪), ನಾಯಕ ರೋಹಿತ್‌ ಶರ್ಮಾ(೪೭), ಕನ್ನಡಿಗ ರಾಹುಲ್‌ (೬೬) ಹೊರತಾಗಿ ಭಾರತ ೨೪೧ ರನ್‌ ಗುರಿ ನೀಡಿತು.

ಮಿಚೆಲ್‌ ಸ್ಟಾರ್ಕ್‌ ೫೭ಕ್ಕೆ೩ ಹಾಗೂ ಫೈನಲ್‌ ಪಂದ್ಯದ ಪಂದ್ಯ ಶ್ರೇಷ್ಠ ಟ್ರಾವಿಸ್‌ ಹೆಡ್‌ (೧೩೭) ಅವರ ಅಮೊಘ ಪ್ರದರ್ಶ ಮೂಲಕ ಭಾರತ ತಂಡ ವಿರುದ್ಧ ಆಸೀಸ್‌ ಜಯ ಗಳಿಸಿ ತಮ್ಮ ೬ನೇ ಟ್ರೋಫಿಯನ್ನು ತನ್ನದಾಗಿಸಿಕೊಂಡಿತು.

https://x.com/cricketworldcup/status/1726426465355341832?s=20

andolanait

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

23 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

23 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

23 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

23 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

23 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

23 hours ago