ಕ್ರೀಡೆ

ಮಯಾಂಕ್‌ ಶತಕ: ಗೆಲುವಿನ ಓಟ ಮುಂದುವರೆಸಿದ ಕರ್ನಾಟಕ

ಅಹಮದಾಬಾದ್:‌ ವಿಜಯ್‌ ಹಜಾರೆ ಟ್ರೋಫಿಯ ಏಕದಿನ ಕ್ರಿಕೆಟ್‌ನಲ್ಲಿ ಸತತ 4ನೇ ಜಯ ದಾಖಲಿಸುವ ಮೂಲಕ ಕರ್ನಾಟಕ ತಂಡ ತನ್ನ ಗೆಲುವಿನ ಓಟ ಮುಂದುವರೆಸಿದೆ.

ಅಹಮದಾಬಾದ್‌ ನಗರದ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ನಾಯಕ ಮಯಾಂಕ್‌ ಅಗರವಾಲ್‌ 100(45) ಅಜೇಯ ಶತಕದ ನೆರವಿನಿಂದ ಅರುಣಾಚಲ ಪ್ರದೇಶದ ವಿರುದ್ಧ ಕರ್ನಾಟಕ ತಂಡವು 10 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ.

ಟಾಸ್‌ ಗೆದ್ದ ಕರ್ನಾಟಕ ತಂಡ ಎದುರಾಳಿ ಅರುಣಾಚಲ ಪ್ರದೇಶ ತಂಡವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿತು. ನಾಯಕನ ಆಯ್ಕೆಯನ್ನು ಸಮರ್ಥಿಸಿಕೊಂಡ ಕರ್ನಾಟಕ ತಂಡದ ಬೌಲರ್‌ಗಳಾದ ವಿ ಕೌಶಿಕ್‌ ಹಾಗೂ ಹಾರ್ದಿಕ್‌ ರಾಜ್‌ ತಲಾ 4 ವಿಕೆಟ್‌ ಪಡೆದರು.

ಕರ್ನಾಟಕ ತಂಡದ ಬೌಲರ್‌ಗಳ ದಾಳಿಗೆ ತತ್ತರಿಸಿದ ಅರುಣಾಚಲ ಪ್ರದೇಶವು 43.2 ಓವರ್‌ಗಳಲ್ಲಿ 166 ರನ್‌ಗಳಿಗೆ ಆಲೌಟ್‌ ಆಯಿತು. ಆದರೆ ಅರುಣಾಚಲ ತಂಡದ ಪರವಾಗಿ ಏಕಾಂಗಿ ಹೋರಾಟ ನಡೆಸಿದ ಅಭಿನವ್‌ ಸಿಂಗ್‌ 71(100) ರನ್‌ಗಳಿಸಿ ನಾಟ್‌ ಔಟ್‌ ಆಗಿ ಉಳಿದರು.

ಈ ಗುರಿ ಬೆನ್ನಟ್ಟಿದ ಕರ್ನಾಟಕ ತಂಡ ಆರಂಭಿಕ ಬ್ಯಾಟರ್‌ಗಳ ಅಬ್ಬರದಿಂದ ಕೇವಲ 14.2 ಓವರ್‌ಗಳಲ್ಲಿ ವಿಕೆಟ್‌ ನಷ್ಟವಿಲ್ಲದೇ ಗುರಿ ತಲುಪಿ ತನ್ನ ಅಜೇಯ ಓಟ ಮುಂದುವರೆಸಿತು.

ಮಯಾಂಕ್‌ ಅಗರ್‌ವಾಲ್‌ 45 ಎಸೆತಗಳಲ್ಲಿ ಶತಕ ಗಳಿಸಿದರೆ, ಅಭಿನವ್‌ ಮನೋಹರ್‌ 66 ರನ್‌ಗಳಿಸಿ ಅಜೆಯರಾಗಿ ಉಳಿದರು. ಈ ಗೆಲುವಿನ ಮೂಲಕ ಕರ್ನಾಟಕ ತಂಡವು 16 ಅಂಕಗಳೊಂದಿಗೆ ʼಸಿʼ ಗುಂಪಿನಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ.

ಆಂದೋಲನ ಡೆಸ್ಕ್

Recent Posts

ದೂರ ಗ್ರಾಮಕ್ಕೆ ನಟ ಪ್ರಭುದೇವ ಭೇಟಿ

ದೂರ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ದೂರ ಗ್ರಾಮಕ್ಕೆ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಶನಿವಾರ ಆಗಮಿಸಿದ್ದರು. ಅವರು ಮೊದಲು…

24 mins ago

ಸೌದಿ ಅರಾಮ್ಕೊ ತೈಲ ಕಂಪನಿಯ ಹೆಲಿಕಾಪ್ಟರ್‌ ಪತನ: 14 ಮಂದಿ ದುರ್ಮರಣ

ರಿಯಾಧ್:‌ ಸೌದಿ ಅರಾಮ್ಕೊ ತೈಲ ಕಂಪನಿಗೆ ಸೇರಿದ ಹೆಲಿಕಾಪ್ಟರ್‌ ಅಪಘಾತಕ್ಕೀಡಾಗಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ. ಸೌದಿ ಅರೇಬಿಯಾದ ರಾಸ್‌…

1 hour ago

ಒಂದೇ ಕುಟುಂಬದ ಮೂವರ ಆತ್ಮಹತ್ಯೆ ಪ್ರಕರಣ: ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ

ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…

2 hours ago

ಮೈಸೂರಿನ ಎರಡು ಪ್ರಮುಖ ಹೋಟೆಲ್‌ಗಳಿಗೆ ಬಾಂಬ್‌ ಬೆದರಿಕೆ ಕರೆ: ಕೆಲಕಾಲ ಆತಂಕ ಸೃಷ್ಟಿ

ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್‌ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…

3 hours ago

ಜಮೀನಿನಲ್ಲಿ ಯುವತಿಗೆ ಹಾವು ಕಡಿತ

ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…

3 hours ago

ಸರಗೂರು: ಹುಲಿ ದಾಳಿಗೆ ಕರು ಬಲಿ

ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…

4 hours ago