ಅಹಮದಾಬಾದ್: ವಿಜಯ್ ಹಜಾರೆ ಟ್ರೋಫಿಯ ಏಕದಿನ ಕ್ರಿಕೆಟ್ನಲ್ಲಿ ಸತತ 4ನೇ ಜಯ ದಾಖಲಿಸುವ ಮೂಲಕ ಕರ್ನಾಟಕ ತಂಡ ತನ್ನ ಗೆಲುವಿನ ಓಟ ಮುಂದುವರೆಸಿದೆ.
ಅಹಮದಾಬಾದ್ ನಗರದ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ನಾಯಕ ಮಯಾಂಕ್ ಅಗರವಾಲ್ 100(45) ಅಜೇಯ ಶತಕದ ನೆರವಿನಿಂದ ಅರುಣಾಚಲ ಪ್ರದೇಶದ ವಿರುದ್ಧ ಕರ್ನಾಟಕ ತಂಡವು 10 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.
ಟಾಸ್ ಗೆದ್ದ ಕರ್ನಾಟಕ ತಂಡ ಎದುರಾಳಿ ಅರುಣಾಚಲ ಪ್ರದೇಶ ತಂಡವನ್ನು ಬ್ಯಾಟಿಂಗ್ಗೆ ಆಹ್ವಾನಿಸಿತು. ನಾಯಕನ ಆಯ್ಕೆಯನ್ನು ಸಮರ್ಥಿಸಿಕೊಂಡ ಕರ್ನಾಟಕ ತಂಡದ ಬೌಲರ್ಗಳಾದ ವಿ ಕೌಶಿಕ್ ಹಾಗೂ ಹಾರ್ದಿಕ್ ರಾಜ್ ತಲಾ 4 ವಿಕೆಟ್ ಪಡೆದರು.
ಕರ್ನಾಟಕ ತಂಡದ ಬೌಲರ್ಗಳ ದಾಳಿಗೆ ತತ್ತರಿಸಿದ ಅರುಣಾಚಲ ಪ್ರದೇಶವು 43.2 ಓವರ್ಗಳಲ್ಲಿ 166 ರನ್ಗಳಿಗೆ ಆಲೌಟ್ ಆಯಿತು. ಆದರೆ ಅರುಣಾಚಲ ತಂಡದ ಪರವಾಗಿ ಏಕಾಂಗಿ ಹೋರಾಟ ನಡೆಸಿದ ಅಭಿನವ್ ಸಿಂಗ್ 71(100) ರನ್ಗಳಿಸಿ ನಾಟ್ ಔಟ್ ಆಗಿ ಉಳಿದರು.
ಈ ಗುರಿ ಬೆನ್ನಟ್ಟಿದ ಕರ್ನಾಟಕ ತಂಡ ಆರಂಭಿಕ ಬ್ಯಾಟರ್ಗಳ ಅಬ್ಬರದಿಂದ ಕೇವಲ 14.2 ಓವರ್ಗಳಲ್ಲಿ ವಿಕೆಟ್ ನಷ್ಟವಿಲ್ಲದೇ ಗುರಿ ತಲುಪಿ ತನ್ನ ಅಜೇಯ ಓಟ ಮುಂದುವರೆಸಿತು.
ಮಯಾಂಕ್ ಅಗರ್ವಾಲ್ 45 ಎಸೆತಗಳಲ್ಲಿ ಶತಕ ಗಳಿಸಿದರೆ, ಅಭಿನವ್ ಮನೋಹರ್ 66 ರನ್ಗಳಿಸಿ ಅಜೆಯರಾಗಿ ಉಳಿದರು. ಈ ಗೆಲುವಿನ ಮೂಲಕ ಕರ್ನಾಟಕ ತಂಡವು 16 ಅಂಕಗಳೊಂದಿಗೆ ʼಸಿʼ ಗುಂಪಿನಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…