ನವದೆಹಲಿ : ಭಾರತೀಯ ಕ್ರಿಕೆಟ್ ತಂಡದ ಸ್ಟಾರ್ ಓಪನರ್ ಶಿಖರ್ ಧವನ್ ಅವರು ಪತ್ನಿ ಆಯೇಷಾ ಮುಖರ್ಜಿಗೆ ವಿಚ್ಛೇದನ ನೀಡಿದ್ದಾರೆ.
ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಬುಧವಾರ ಶಿಖರ್ ಮತ್ತು ಆಯೇಷಾ ವಿಚ್ಛೇದನವನ್ನು ಮಂಜೂರು ಮಾಡಿದೆ.
2012ರಲ್ಲಿ ಶಿಖರ್ ಧವನ್ ಹಾಗೂ ಆಯೇಷಾ ಮುಖರ್ಜಿ ಮದುವೆಯಾಗಿದ್ದರು. ಈ ದಂಪತಿಗೆ ಜೋರಾವರ್ ಎಂಬ ಮಗನಿದ್ದಾನೆ. ಆಯೇಷಾಗೆ ಇದು ಎರಡನೇ ಮದುವೆಯಾಗಿದ್ದು, ಶಿಖರ್ ಗಿಂತ 10 ವರ್ಷ ದೊಡ್ಡವರು.
ಪುತ್ರನಿಂದ ಬೇರೆಯಾಗಿ ವರ್ಷಗಟ್ಟಲೆ ಬದುಕುವಂತೆ ಒತ್ತಾಯಿಸಿ ಪತ್ನಿ ಮಾನಸಿಕ ಹಿಂಸೆ ಕೊಟ್ಟಿದ್ದಾರೆ ಎಂದು ಶಿಖರ್ ಆರೋಪಿಸಿದ್ದರು. ಈ ಆರೋಪಗಳನ್ನು ಆಯೇಷಾ ಸಮರ್ಥನೆ ಮಾಡಿಕೊಳ್ಳಲು ವಿಫಲರಾಗಿದ್ದಾರೆ ಎಂದು ಕೋರ್ಟ್ ಹೇಳಿದೆ. ವಿಚ್ಛೇದನ ಅರ್ಜಿಯಲ್ಲಿ ಪತ್ನಿ ವಿರುದ್ಧ ಧವನ್ ಮಾಡಿರುವ ಎಲ್ಲಾ ಆರೋಪಗಳನ್ನು ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶ ಹರೀಶ್ ಕುಮಾರ್ ಒಪ್ಪಿಕೊಂಡಿದ್ದಾರೆ.
ಮಗನ ಖಾಯಂ ಕಸ್ಟಡಿಗೆ ಸಂಬಂಧಿಸಿದಂತೆ ಕೋರ್ಟ್ ಯಾವುದೇ ಆದೇಶ ನೀಡಿಲ್ಲ. ಆದರೆ ಧವನ್ಗೆ ತನ್ನ ಮಗನನ್ನು ಭೇಟಿ ಮಾಡಲು ಮತ್ತು ವೀಡಿಯೋ ಕರೆ ಮೂಲಕ ಮಾತನಾಡುವ ಹಕ್ಕನ್ನು ಕೋರ್ಟ್ ನೀಡಿದೆ. ಪ್ರಸ್ತುತ ಆಯೇಷಾ ಅವರು ಆಸ್ಟ್ರೇಲಿಯಾದಲ್ಲಿ ನೆಲೆಸಿದ್ದಾರೆ. ಭಾರತ ಮತ್ತು ಆಸ್ಟ್ರೇಲಿಯಾ ಎರಡರ ಪೌರತ್ವವನ್ನು ಅವರು ಹೊಂದಿದ್ದಾರೆ.
ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…
ಮೈಸೂರು : ಬುಧವಾರವಷ್ಟೇ ಹೆಬ್ಬಾಳ್ನಲ್ಲಿ ಶೆಡ್ವೊಂದರ ಮೇಲೆ ದಾಳಿ ನಡೆಸಿದ್ದ ಎನ್ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…
ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…
ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…
ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…