ನವದೆಹಲಿ : ಭಾರತೀಯ ಕ್ರಿಕೆಟ್ ತಂಡದ ಸ್ಟಾರ್ ಓಪನರ್ ಶಿಖರ್ ಧವನ್ ಅವರು ಪತ್ನಿ ಆಯೇಷಾ ಮುಖರ್ಜಿಗೆ ವಿಚ್ಛೇದನ ನೀಡಿದ್ದಾರೆ.
ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಬುಧವಾರ ಶಿಖರ್ ಮತ್ತು ಆಯೇಷಾ ವಿಚ್ಛೇದನವನ್ನು ಮಂಜೂರು ಮಾಡಿದೆ.
2012ರಲ್ಲಿ ಶಿಖರ್ ಧವನ್ ಹಾಗೂ ಆಯೇಷಾ ಮುಖರ್ಜಿ ಮದುವೆಯಾಗಿದ್ದರು. ಈ ದಂಪತಿಗೆ ಜೋರಾವರ್ ಎಂಬ ಮಗನಿದ್ದಾನೆ. ಆಯೇಷಾಗೆ ಇದು ಎರಡನೇ ಮದುವೆಯಾಗಿದ್ದು, ಶಿಖರ್ ಗಿಂತ 10 ವರ್ಷ ದೊಡ್ಡವರು.
ಪುತ್ರನಿಂದ ಬೇರೆಯಾಗಿ ವರ್ಷಗಟ್ಟಲೆ ಬದುಕುವಂತೆ ಒತ್ತಾಯಿಸಿ ಪತ್ನಿ ಮಾನಸಿಕ ಹಿಂಸೆ ಕೊಟ್ಟಿದ್ದಾರೆ ಎಂದು ಶಿಖರ್ ಆರೋಪಿಸಿದ್ದರು. ಈ ಆರೋಪಗಳನ್ನು ಆಯೇಷಾ ಸಮರ್ಥನೆ ಮಾಡಿಕೊಳ್ಳಲು ವಿಫಲರಾಗಿದ್ದಾರೆ ಎಂದು ಕೋರ್ಟ್ ಹೇಳಿದೆ. ವಿಚ್ಛೇದನ ಅರ್ಜಿಯಲ್ಲಿ ಪತ್ನಿ ವಿರುದ್ಧ ಧವನ್ ಮಾಡಿರುವ ಎಲ್ಲಾ ಆರೋಪಗಳನ್ನು ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶ ಹರೀಶ್ ಕುಮಾರ್ ಒಪ್ಪಿಕೊಂಡಿದ್ದಾರೆ.
ಮಗನ ಖಾಯಂ ಕಸ್ಟಡಿಗೆ ಸಂಬಂಧಿಸಿದಂತೆ ಕೋರ್ಟ್ ಯಾವುದೇ ಆದೇಶ ನೀಡಿಲ್ಲ. ಆದರೆ ಧವನ್ಗೆ ತನ್ನ ಮಗನನ್ನು ಭೇಟಿ ಮಾಡಲು ಮತ್ತು ವೀಡಿಯೋ ಕರೆ ಮೂಲಕ ಮಾತನಾಡುವ ಹಕ್ಕನ್ನು ಕೋರ್ಟ್ ನೀಡಿದೆ. ಪ್ರಸ್ತುತ ಆಯೇಷಾ ಅವರು ಆಸ್ಟ್ರೇಲಿಯಾದಲ್ಲಿ ನೆಲೆಸಿದ್ದಾರೆ. ಭಾರತ ಮತ್ತು ಆಸ್ಟ್ರೇಲಿಯಾ ಎರಡರ ಪೌರತ್ವವನ್ನು ಅವರು ಹೊಂದಿದ್ದಾರೆ.
ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…
ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…
ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್.ಮಹೇಶ್ ಮಾರ್ಮಿಕವಾಗಿ…
ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…
ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…
ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…