ನವದೆಹಲಿ : ಭಾರತೀಯ ಕ್ರಿಕೆಟ್ ತಂಡದ ಸ್ಟಾರ್ ಓಪನರ್ ಶಿಖರ್ ಧವನ್ ಅವರು ಪತ್ನಿ ಆಯೇಷಾ ಮುಖರ್ಜಿಗೆ ವಿಚ್ಛೇದನ ನೀಡಿದ್ದಾರೆ.
ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಬುಧವಾರ ಶಿಖರ್ ಮತ್ತು ಆಯೇಷಾ ವಿಚ್ಛೇದನವನ್ನು ಮಂಜೂರು ಮಾಡಿದೆ.
2012ರಲ್ಲಿ ಶಿಖರ್ ಧವನ್ ಹಾಗೂ ಆಯೇಷಾ ಮುಖರ್ಜಿ ಮದುವೆಯಾಗಿದ್ದರು. ಈ ದಂಪತಿಗೆ ಜೋರಾವರ್ ಎಂಬ ಮಗನಿದ್ದಾನೆ. ಆಯೇಷಾಗೆ ಇದು ಎರಡನೇ ಮದುವೆಯಾಗಿದ್ದು, ಶಿಖರ್ ಗಿಂತ 10 ವರ್ಷ ದೊಡ್ಡವರು.
ಪುತ್ರನಿಂದ ಬೇರೆಯಾಗಿ ವರ್ಷಗಟ್ಟಲೆ ಬದುಕುವಂತೆ ಒತ್ತಾಯಿಸಿ ಪತ್ನಿ ಮಾನಸಿಕ ಹಿಂಸೆ ಕೊಟ್ಟಿದ್ದಾರೆ ಎಂದು ಶಿಖರ್ ಆರೋಪಿಸಿದ್ದರು. ಈ ಆರೋಪಗಳನ್ನು ಆಯೇಷಾ ಸಮರ್ಥನೆ ಮಾಡಿಕೊಳ್ಳಲು ವಿಫಲರಾಗಿದ್ದಾರೆ ಎಂದು ಕೋರ್ಟ್ ಹೇಳಿದೆ. ವಿಚ್ಛೇದನ ಅರ್ಜಿಯಲ್ಲಿ ಪತ್ನಿ ವಿರುದ್ಧ ಧವನ್ ಮಾಡಿರುವ ಎಲ್ಲಾ ಆರೋಪಗಳನ್ನು ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶ ಹರೀಶ್ ಕುಮಾರ್ ಒಪ್ಪಿಕೊಂಡಿದ್ದಾರೆ.
ಮಗನ ಖಾಯಂ ಕಸ್ಟಡಿಗೆ ಸಂಬಂಧಿಸಿದಂತೆ ಕೋರ್ಟ್ ಯಾವುದೇ ಆದೇಶ ನೀಡಿಲ್ಲ. ಆದರೆ ಧವನ್ಗೆ ತನ್ನ ಮಗನನ್ನು ಭೇಟಿ ಮಾಡಲು ಮತ್ತು ವೀಡಿಯೋ ಕರೆ ಮೂಲಕ ಮಾತನಾಡುವ ಹಕ್ಕನ್ನು ಕೋರ್ಟ್ ನೀಡಿದೆ. ಪ್ರಸ್ತುತ ಆಯೇಷಾ ಅವರು ಆಸ್ಟ್ರೇಲಿಯಾದಲ್ಲಿ ನೆಲೆಸಿದ್ದಾರೆ. ಭಾರತ ಮತ್ತು ಆಸ್ಟ್ರೇಲಿಯಾ ಎರಡರ ಪೌರತ್ವವನ್ನು ಅವರು ಹೊಂದಿದ್ದಾರೆ.
ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್…
ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…
ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ…
ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…
೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ…
ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಏಳು ತಿಂಗಳ ಅವಧಿಯಲ್ಲಿ ಸುಮಾರು ರೂ.೬೦೦ ಕೋಟಿಯಷ್ಟು ಹಣ ಸೈಬರ್ ವಂಚಕರ…